ತುಮಕೂರು:
ಮುಂಬರುವ ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಶೇ. 100ರಷ್ಟು ಮತದಾನ ಮಾಡುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಗೌರವಿಸಿ ಮಾದರಿ ಪ್ರಜೆಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಂಬೇಡ್ಕರ್ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಚುನಾವಣೆ ನಂತರ ಎಲ್ಲರನ್ನೂ ಒಗ್ಗೂಡಿಸಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷ ಣ, ಸಂಘಟನೆ ಹಾಗೂ ಹೋರಾಟಕ್ಕೆ ಒತ್ತು ನೀಡಿದ್ದರೂ, ಅದರಲ್ಲಿ ಶಿಕ್ಷ ಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಶಿಕ್ಷ ಣವಿಲ್ಲದೆ ಸಂಘಟನೆ ಹಾಗೂ ಹೋರಾಟಕ್ಕೆ ಹೆಚ್ಚಿನ ಯಶಸ್ಸು ಸಿಗುವುದಿಲ್ಲ ಎಂಬುದನ್ನು ಅವರು ಹೇಳಿದ್ದರು. ಸಾಕ್ಷ ರತೆಯಿಂದ ಸಾಮಾಜಿಕ ಮತ್ತು ಆರ್ಥಿಕವಾಗಿ ಬದಲಾವಣೆ ಹೊಂದಲು ಸಾಧ್ಯವಾಗುತ್ತದೆ. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಂಬೇಡ್ಕರ್ ಅಧ್ಯಯನ ನಡೆಸಿದ ವಿಷಯಗಳು ಇಂದಿಗೂ ಸಂಶೋಧನೆಗಳಿಗೆ ಆಧಾರವಾಗಿವೆ ಎಂದು ತಿಳಿಸಿದರು.
6ನೇ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಾಬಾ ಸಾಹೇಬ ಜಿನರಾಳ್ಕರ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿ, ಅಸ್ಪೃಶ್ಯತೆ, ಸಾಮಾಜಿಕ ನ್ಯಾಯ, ಸಮಾನತೆ ತಂದುಕೊಟ್ಟಿದ್ದಾರೆ. ಅಲ್ಲದೆ ನಮ್ಮ ದೇಶದ ಇತಿಹಾಸ ಬದಲಿಸಿದ ಯುಗ ಪುರುಷ, ವಿಶ್ವ ಮಾನ್ಯ ಸಂವಿಧಾನವನ್ನು ನೀಡಿದ ಮಹಾಪುರುಷ, ಭಾರತ ಸಂವಿಧಾನ ಜಾರಿಗೆ ಬಂದ ನಂತರ ರಚನೆಯಾದ ಆಫ್ರಿಕನ್, ಏಷಿಯನ್, ನೇಪಾಳ ದೇಶಗಳ ಸಂವಿಧಾನಕ್ಕೆ ಭಾರತೀಯ ಸಂವಿಧಾನ ಆಧಾರವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಉಪವಿಭಾಗಾಧಿಕಾರಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಜಿ.ಪಿ. ದೇವರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್ಕುಮಾರ್ ಮತ್ತಿತರರಿದ್ದರು.
ಮುಂಬರುವ ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಶೇ. 100ರಷ್ಟು ಮತದಾನ ಮಾಡುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಗೌರವಿಸಿ ಮಾದರಿ ಪ್ರಜೆಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಂಬೇಡ್ಕರ್ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಚುನಾವಣೆ ನಂತರ ಎಲ್ಲರನ್ನೂ ಒಗ್ಗೂಡಿಸಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷ ಣ, ಸಂಘಟನೆ ಹಾಗೂ ಹೋರಾಟಕ್ಕೆ ಒತ್ತು ನೀಡಿದ್ದರೂ, ಅದರಲ್ಲಿ ಶಿಕ್ಷ ಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಶಿಕ್ಷ ಣವಿಲ್ಲದೆ ಸಂಘಟನೆ ಹಾಗೂ ಹೋರಾಟಕ್ಕೆ ಹೆಚ್ಚಿನ ಯಶಸ್ಸು ಸಿಗುವುದಿಲ್ಲ ಎಂಬುದನ್ನು ಅವರು ಹೇಳಿದ್ದರು. ಸಾಕ್ಷ ರತೆಯಿಂದ ಸಾಮಾಜಿಕ ಮತ್ತು ಆರ್ಥಿಕವಾಗಿ ಬದಲಾವಣೆ ಹೊಂದಲು ಸಾಧ್ಯವಾಗುತ್ತದೆ. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಂಬೇಡ್ಕರ್ ಅಧ್ಯಯನ ನಡೆಸಿದ ವಿಷಯಗಳು ಇಂದಿಗೂ ಸಂಶೋಧನೆಗಳಿಗೆ ಆಧಾರವಾಗಿವೆ ಎಂದು ತಿಳಿಸಿದರು.
6ನೇ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಾಬಾ ಸಾಹೇಬ ಜಿನರಾಳ್ಕರ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿ, ಅಸ್ಪೃಶ್ಯತೆ, ಸಾಮಾಜಿಕ ನ್ಯಾಯ, ಸಮಾನತೆ ತಂದುಕೊಟ್ಟಿದ್ದಾರೆ. ಅಲ್ಲದೆ ನಮ್ಮ ದೇಶದ ಇತಿಹಾಸ ಬದಲಿಸಿದ ಯುಗ ಪುರುಷ, ವಿಶ್ವ ಮಾನ್ಯ ಸಂವಿಧಾನವನ್ನು ನೀಡಿದ ಮಹಾಪುರುಷ, ಭಾರತ ಸಂವಿಧಾನ ಜಾರಿಗೆ ಬಂದ ನಂತರ ರಚನೆಯಾದ ಆಫ್ರಿಕನ್, ಏಷಿಯನ್, ನೇಪಾಳ ದೇಶಗಳ ಸಂವಿಧಾನಕ್ಕೆ ಭಾರತೀಯ ಸಂವಿಧಾನ ಆಧಾರವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಉಪವಿಭಾಗಾಧಿಕಾರಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಜಿ.ಪಿ. ದೇವರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್ಕುಮಾರ್ ಮತ್ತಿತರರಿದ್ದರು.