ಆ್ಯಪ್ನಗರ

ವಿವಿ ಪರೀಕ್ಷೆಗಳು ಮುಂದಕ್ಕೆ

ಕೇಂದ್ರ ಸಚಿವ ಅನಂತಕುಮಾರ್‌ ನಿಧನದ ಹಿನ್ನೆಲೆಯಲ್ಲಿ ಸರಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಜಿಲ್ಲೆಯಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಯಿತು...

Vijaya Karnataka 13 Nov 2018, 3:40 pm
ತುಮಕೂರು: ಕೇಂದ್ರ ಸಚಿವ ಅನಂತಕುಮಾರ್‌ ನಿಧನದ ಹಿನ್ನೆಲೆಯಲ್ಲಿ ಸರಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಜಿಲ್ಲೆಯಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಯಿತು. ಅಲ್ಲದೆ ನ.12ರಂದು ನಡೆಯಬೇಕಿದ್ದ ತುಮಕೂರು ವಿಶ್ವ ವಿದ್ಯಾನಿಲಯದ ಪದವಿ ತರಗತಿಗಳ ಎಲ್ಲಾ ವಿಷಯ ಪರೀಕ್ಷೆಗಳನ್ನು ನ.20, ಮಂಗಳವಾರಕ್ಕೆ ಮುಂದೂಡಲಾಯಿತು. ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣದಿಂದ ಮುಂದೂಡಲಾಗಿದ್ದ ನ.10ರ ತೃತೀಯ ಸೆಮಿಸ್ಟರ್‌ ಬಿ.ಎಸ್ಸಿ ರಸಾಯನ ಶಾಸ್ತ್ರದ ಮರುಪರೀಕ್ಷೆಯನ್ನು ನ.17ಕ್ಕೆ ಹಾಗೂ ನ.9ರಂದು ನಡೆದ ಪ್ರಥಮ ಸೆಮಿಸ್ಟರ್‌ ಬಿ.ಎಸ್ಸಿ ಪದವಿಯ ರಸಾಯನಶಾಸ್ತ್ರ ವಿಷಯದ ಮರು ಪರೀಕ್ಷೆಯನ್ನು ನ.19ಕ್ಕೆ ನಿಗದಿಪಡಿಸಲಾಗಿದೆ ಎಂದು ವಿವಿಯ ಪರೀಕ್ಷಾಂಗ ಕುಲಸಚಿವರ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ