ಆ್ಯಪ್ನಗರ

ಮುಂದಿನ 15 ದಿನದೊಳಗೆ ಶಿರಾ ಬೈ ಎಲೆಕ್ಷನ್‌ಗೆ ಟಿಕೆಟ್ ಘೋಷಣೆ ಮಾಡುತ್ತೇವೆ; ನಳಿನ್ ಕುಮಾರ್ ಕಟೀಲ್

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ವಿಚಾರದಲ್ಲಿ ಪಕ್ಷವು ಎಲ್ಲಾ ರೀತಿಯ ಬೆಳವಣಿಗೆಗಳನ್ನು ಗಮನಿಸಿ ತೀರ್ಮಾನ ಮಾಡಲಿದೆ. ಈಗಾಗಲೇ ನಾಲ್ಕೈದು ಆಕಾಂಕ್ಷಿಗಳ ಹೆಸರಿದ್ದು, ಎಲ್ಲವನ್ನೂ ಪರಿಶೀಲನೆ ನಡೆಸುತ್ತಿದ್ದೇವೆ. ಅಂತಿಮವಾಗಿ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ನಳಿನ್ ಕುಮಾರ್ ಹೇಳಿದರು.

Vijaya Karnataka Web 29 Sep 2020, 2:41 pm
ಬೆಳಗಾವಿ: ಶಿರಾ ಉಪಚುನಾವಣೆಗೆ ಹತ್ತರಿಂದ ಹದಿನೈದು ದಿನಗಳಲ್ಲಿ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Vijaya Karnataka Web nalin kumar kateel


ಬೆಳಗಾವಿಯಲ್ಲಿ ಮಾತನಾಡಿದ ಅವರು, ಶಿರಾದಲ್ಲಿ ನಮ್ಮ ಕೆಲಸ ಈಗಾಗಲೇ ಆರಂಭವಾಗಿದೆ. ಸಂಘಟನಾತ್ಮಕ ದೃಷ್ಠಿಯಿಂದ ಚಟುವಟಿಕೆಗಳು ನಡೆದಿದೆ. ಶಿರಾದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಕಂಡುಬರುತ್ತಿದ್ದು, ಮುಂದಿನ ಹತ್ತು ಹದಿನೈದು ದಿನಗಳೊಳಗೆ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಹೆಚ್ಚು ಸಮಾಜವನ್ನು ಒಡೆದಿದ್ದಾರೆ; ನಳಿನ್ ಕುಮಾರ್ ಕಟೀಲ್

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ವಿಚಾರದಲ್ಲಿ ಪಕ್ಷವು ಎಲ್ಲಾ ರೀತಿಯ ಬೆಳವಣಿಗೆಗಳನ್ನು ಗಮನಿಸಿ ತೀರ್ಮಾನ ಮಾಡಲಿದೆ. ಈಗಾಗಲೇ ನಾಲ್ಕೈದು ಆಕಾಂಕ್ಷಿಗಳ ಹೆಸರಿದ್ದು, ಎಲ್ಲವನ್ನೂ ಪರಿಶೀಲನೆ ನಡೆಸುತ್ತಿದ್ದೇವೆ. ಅಂತಿಮವಾಗಿ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ನಳಿನ್ ಕುಮಾರ್ ಹೇಳಿದರು.

ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ; ತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ಕಿಡಿ

ಇನ್ನು ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿರುವ ಬಗ್ಗೆ ಮಾತನಾಡಿದ ಕಟೀಲ್, ಈ ವಿಚಾರದಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ. ರೈತರನ್ನು ಎತ್ತಿಕಟ್ಟಿ ರಾಷ್ಟ್ರದಲ್ಲಿ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದರು. ಅಲ್ಲದೇ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲೇ ಈ ಎಲ್ಲಾ ಕಾಯ್ದೆಗಳಿಗೆ ತಿದ್ದುಪಡಿ ತರಬೇಕೆಂದು ಹೇಳಿತ್ತು. ಈ ಕಾಯ್ದೆ ಬಗ್ಗೆ ರೈತರಿಗೆ ಮನದಟ್ಟು ಮಾಡುವ ಕೆಲಸವನ್ನು ಪಕ್ಷ ಕೈಗೊಳ್ಳುತ್ತದೆ. ಆದರೆ ಈ ಮಧ್ಯೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್‌ ಮಾಡಬಾರದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ