ಆ್ಯಪ್ನಗರ

ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ, ಶಾಂತಿ; ಮಧುಗಿರಿಯ ಯಾಕಾರ್ಲಹಳ್ಳಿಯಲ್ಲಿ ಜಿಪಂ ಸದಸ್ಯೆ ಅಭಿಮತ

ಇಂದಿನ ಯುವ ಜನಾಂಗ ನಮ್ಮ ಸಂಸ್ಕೃತಿ ಮರೆಯುತ್ತಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಇನ್ನೂ ಜೀವಂತವಾಗಿ ಉಳಿದಿದೆ ಎಂದು ಜಿಪಂ ಸದಸ್ಯೆ ಮಂಜುಳಾ ಆದಿ ನಾರಾಯಣ ರೆಡ್ಡಿ ತಿಳಿಸಿದರು. ಮಧುಗಿರಿ ತಾಲೂಕಿನ ಯಾಕಾರ್ಲಹಳ್ಳಿಯಲ್ಲಿ ಮಾತನಾಡಿ ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ, ಶಾಂತಿ ಸಿಗುತ್ತದೆ ಎಂದರು.

Vijaya Karnataka Web 17 Jan 2021, 6:54 pm
ಕೊಡಿಗೇನಹಳ್ಳಿ (ಮಧುಗಿರಿ): ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ಮತ್ತು ಉತ್ತಮ ಸಂಸ್ಕಾರ ಬೆಳೆಯುತ್ತದೆ ಎಂದು ಜಿಪಂ ಸದಸ್ಯೆ ಮಂಜುಳಾ ಆದಿ ನಾರಾಯಣ ರೆಡ್ಡಿ ತಿಳಿಸಿದರು.
Vijaya Karnataka Web Tumkur
ಮಧುಗಿರಿ ತಾಲೂಕು ಯಾಕಾರ್ಲಹಳ್ಳಿಯಲ್ಲಿ ನಡೆದ ಬೈಲಾಂಜನೇಯ ಸ್ವಾಮಿಯ ವಾರ್ಷಿಕೋತ್ಸವ


ತುಮಕೂರು ಜಿಲ್ಲೆಯ ಕಡಗತ್ತೂರು ಗ್ರಾಪಂನ ಯಾಕಾರ್ಲಹಳ್ಳಿಯಲ್ಲಿ ನಡೆದ ಬೈಲಾಂಜನೇಯ ಸ್ವಾಮಿಯ 6 ನೇ ವರ್ಷದ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಯುವ ಜನಾಂಗ ನಮ್ಮ ಸಂಸ್ಕೃತಿ ಮರೆಯುತ್ತಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಇನ್ನೂ ಜೀವಂತವಾಗಿ ಉಳಿದಿದೆ ಎಂಬುದಕ್ಕೆ ಈ ಗ್ರಾಮವೇ ಸಾಕ್ಷಿಯಾಗಿದೆ. ಎಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆಯೋ ಆ ಗ್ರಾಮಗಳಲ್ಲಿ ಮನಸ್ಸಿನ ಶುದ್ಧಿ ಸುಭಿಕ್ಷೆಯಿಂದ ಇರಲು ಸಾಧ್ಯ ಎಂದು ತಿಳಿಸಿದರು.

ಗ್ರಾಪಂ ಸದಸ್ಯ ನರಸೇಗೌಡ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯು ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಗ್ರಾಮದಲ್ಲಿ ಸ್ನೇಹ ಜೀವನ ಗೆಳೆಯ ಬಳಗ ಸ್ಥಾಪಿಸಿದ ಸಮಾನ ವಯಸ್ಕ ಹಿರಿಯರ ಮಾರ್ಗದರ್ಶನ ಹಾಗೂ ಅವರ ಸಹಕಾರದಿಂದ ಯಾವುದೆ ಅಡ್ಡಿ ಇಲ್ಲದೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಯುವಕರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನೀರು ಹರಿಸಿ ಎಂದವರಿಗೆ ‌ಮಾಧುಸ್ವಾಮಿ ಬೈಗುಳ..! ಅಧಿಕಾರಿಗಳಾಯ್ತು ಈಗ ಗ್ರಾಮಸ್ಥರ ಮೇಲೆ ಕೋಪಾತಾಪಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರತಿಭಾವಂತರಿಗೆ ಹಾಗೂ ನೂತನ ಸದಸ್ಯರಿಗೆ ಹಾಗೂ ದೇವಸ್ಥಾನಕ್ಕೆ ಜಾಗ ನೀಡಿದ ದಾನಿಗಳಿಗೆ ಸನ್ಮಾನಿಸಲಾಯಿತು. ಧಾರ್ಮಿಕ ಕ್ಷೇತ್ರ ಯಾಕಾರ್ಲಹಳ್ಳಿ ಗ್ರಾಮದ ಬಾಂಧವ್ಯ ವೃದ್ಧಿಗೆ ಹನುಮ ಜಯಂತಿ ಸಾಕ್ಷಿಯಾಗಿ ನೂರಾರು ಭಕ್ತರು ಆಗಮಿಸಿ ಹರಕೆಗಳನ್ನು ತೀರಿಸಿದರು.
ಜನರ ಅಭಿಪ್ರಾಯಕ್ಕಿಂತ ಸ್ವಂತ ಅಜೆಂಡಾದ ಮೇಲೆ ಸರಕಾರ: ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿಈ ಸಂದರ್ಭದಲ್ಲಿ ವಿಎಸ್‌ಎಸ್ ಕಾರ್ಯದರ್ಶಿ ರಾಧಾಕೃಷ್ಣ ರೆಡ್ಡಿ, ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ನಂಜೇಗೌಡ, ತಾಪಂ ಮಾಜಿ ಸದಸ್ಯ ಚಲಪತಿ,
ಗ್ರಾಪಂ ಸದಸ್ಯರಾದ ಲಕ್ಷ್ಮೀ ನಾರಾಯಣ, ವಿನೋದ, ಗ್ರಾಪಂ ಮಾಜಿ ಅಧ್ಯಕ್ಷ ರಂಗನಾಥ್ ಸೇರಿ ಸ್ನೇಹ ಜೀವಿ ಗೆಳೆಯರ ಬಳಗದ ಪದಾಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ