ಆ್ಯಪ್ನಗರ

ಕುಂದಾಪುರ: ಬಹತ್ ರಕ್ತದಾನ ಶಿಬಿರ ಉದ್ಘಾಟನೆ

ಚಿನ್ನದ ಕೆಲಸಗಾರರು ಸಂಘಟಿತರಾಗಿ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಮೊಗವೀರ ಯುವ ಸಂಘಟನೆ ಜಿಲ್ಲೆಯಲ್ಲಿ ರಕ್ತದಾನದ ಮಹತ್ತಿಕೆ ಎತ್ತಿ ಹಿಡಿದಿದೆ. ಚಿನ್ನದ ಕೆಲಸಗಾರರು ಸಮಾಜಮುಖಿ ಸಂಘಟನೆಯೊಂದಿಗೆ ಕೆಜೋಡಿಸಿ ಬಹತ್ ರಕ್ತದಾನ ಶಿಬಿರ ನಡೆಸುವ ಮೂಲಕ ಮಾದರಿ ಅನ್ನಿಸಿಕೊಂಡಿದೆ ಎಂದು ಕೊಲ್ಲೂರು ದೇವಳದ ಮಾಜಿ ಆಡಳಿತ ಧರ್ಮದರ್ಶಿ, ಉದ್ಯಮಿ ಕಷ್ಣಪ್ರಸಾದ್ ಅಡ್ಯಂತಾಯ ಹೇಳಿದರು.

ವಿಕ ಸುದ್ದಿಲೋಕ 6 Mar 2016, 3:47 pm
ಕುಂದಾಪುರ: ಚಿನ್ನದ ಕೆಲಸಗಾರರು ಸಂಘಟಿತರಾಗಿ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಮೊಗವೀರ ಯುವ ಸಂಘಟನೆ ಜಿಲ್ಲೆಯಲ್ಲಿ ರಕ್ತದಾನದ ಮಹತ್ತಿಕೆ ಎತ್ತಿ ಹಿಡಿದಿದೆ. ಚಿನ್ನದ ಕೆಲಸಗಾರರು ಸಮಾಜಮುಖಿ ಸಂಘಟನೆಯೊಂದಿಗೆ ಕೆಜೋಡಿಸಿ ಬಹತ್ ರಕ್ತದಾನ ಶಿಬಿರ ನಡೆಸುವ ಮೂಲಕ ಮಾದರಿ ಅನ್ನಿಸಿಕೊಂಡಿದೆ ಎಂದು ಕೊಲ್ಲೂರು ದೇವಳದ ಮಾಜಿ ಆಡಳಿತ ಧರ್ಮದರ್ಶಿ, ಉದ್ಯಮಿ ಕಷ್ಣಪ್ರಸಾದ್ ಅಡ್ಯಂತಾಯ ಹೇಳಿದರು.
Vijaya Karnataka Web
ಕುಂದಾಪುರ: ಬಹತ್ ರಕ್ತದಾನ ಶಿಬಿರ ಉದ್ಘಾಟನೆ


ಶನಿವಾರ ಇಲ್ಲಿನ ರೋಟರಿ ಕಲಾಮಂದಿರದಲ್ಲಿ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ರಕ್ತನಿಧಿ ಕೆಎಂಸಿ ಮಣಿಪಾಲ, ಉಡುಪಿ ಜಿಲ್ಲಾಸ್ಪತ್ರೆ ಹಾಗೂ ಕುಂದಾಪುರ ತಾಲೂಕು ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಬಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕುಂದಾಪುರ ತಾಲೂಕು ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಡಿ.ಎನ್.ಪ್ರಕಾಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ ವಡೇರಹೋಬಳಿ ಶುಭಹಾರೆಸಿದರು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸದಾನಂದ ಕಾಂಚನ್, ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ ಸುರೇಶ್ ವಿಠಲವಾಡಿ, ಡಾ.ಪುಷ್ಪರಾಜ್, ಸುರೇಶ್ ಆಚಾರ್ ಮಚ್ಚಟ್ಟು ಉಪಸ್ಥಿತರಿದ್ದರು. ಕೇಶವ ಆಚಾರ್ ಸ್ವಾಗತಿಸಿದರು. ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ