ಆ್ಯಪ್ನಗರ

ರೈಲಿನಲ್ಲಿ ಕೋಟಿಗೂ ಅಧಿಕ ನಗದು ಸಾಗಾಟ: ಮೂವರು ವಶಕ್ಕೆ

ಆರೋಪಿಗಳು ಜಾಗದ ಖರೀದಿಗಾಗಿ ಹಣ ತಂದಿರುವ ಬಗ್ಗೆ ಹೇಳುತ್ತಿದ್ದಾರೆ. ಬೈಂದೂರಿನಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಣದ ಹಂಚಿಕೆಗೆ ತಂದಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

Vijaya Karnataka Web 2 Nov 2018, 11:48 am
ಉಡುಪಿ:ಮುಂಬೈಯಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ನೇತ್ರಾವತಿ ಎಕ್ಸ್‌ಪ್ರೆಸ್‌ (ನಂ.16345) ನಲ್ಲಿ ಅಕ್ರಮವಾಗಿ 1.50 ಕೋಟಿಗೂ ಅಧಿಕ ರೂ. ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಇಬ್ಬರನ್ನು ರೈಲ್ಪೆ ಪೊಲೀಸರು ಇಂದ್ರಾಳಿ ರೈಲ್ಪೇ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಬಂಧಿಸಿ, ನಗದು ಸ್ವಾಧೀನಕ್ಕೆ ಪಡೆದಿದ್ದಾರೆ.
Vijaya Karnataka Web railway police udupi


ಇಬ್ಬರು ಆರೋಪಿಗಳು ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದು, ಹಣ ಪಡೆಯಲು ಒಬ್ಬ ಆರೋಪಿ ಇಂದ್ರಾಳಿ ನಿಲ್ದಾಣದಲ್ಲಿ ಕಾದು ಕುಳಿತಿದ್ದ ಎನ್ನಲಾಗಿದೆ.

ನೇತ್ರಾವತಿ ಎಕ್ಸ್‌ಪ್ರೆಸ್‌ನಲ್ಲಿ ಪದೇ ಪದೇ ನಡೆಯುವ ಕಳ್ಳತನ ಪತ್ತೆಗಾಗಿ ರೈಲ್ವೆ ರಕ್ಷಣಾ ಸಿಬ್ಬಂದಿ ಹೆಚ್ಚುವರಿಯಾಗಿ ಸಿಬ್ಬಂದಿ ನೇಮಿಸಿದ್ದು, ಶುಕ್ರವಾರವೂ ಎಂದಿನಂತೆ ತಪಾಸಣೆಗೆ ಮುಂದಾಗಿದೆ. ಈ ವೇಳೆ ಎಸಿ ಬೋಗಿಯಲ್ಲಿದ್ದ ಇಬ್ಬರ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು ಟಿಕೆಟ್ ನೀಡುವಂತೆ ಕೇಳಿದ್ದಾರೆ. ಟಿಕೆಟ್‌ನಲ್ಲಿದ್ದ ಹೆಸರಿಗೂ ಆರೋಪಿಗಳ ಹೆಸರಿಗೂ ವ್ಯತ್ಯಾಸವಿದ್ದ ಹಿನ್ನೆಲೆಯಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ.

ಈ ಸಂದರ್ಭ ಆರೋಪಿಗಳ ಬ್ಯಾಗ್‌ನಲ್ಲಿ ಒಂದೂವರೆ ಕೋಟಿಗೂ ಅಧಿಕ ನಗದು ಪತ್ತೆಯಾಗಿದೆ. ಇದೀಗ ಆರೋಪಿಗಳ ವಿಚಾರಣೆ ಮುಂದುವರಿದಿದ್ದು, ಐಟಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಉಡುಪಿ ತಹಶೀಲ್ದಾರ್‌, ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟಿದ್ದು, ಹಣದ ಮೂಲದ ಬಗ್ಗೆ ತೀವ್ರ ಸ್ವರೂಪದ ವಿಚಾರಣೆ ಮುಂದುವರಿದಿದೆ.

ಆರೋಪಿಗಳು ಜಾಗದ ಖರೀದಿಗಾಗಿ ಹಣ ತಂದಿರುವ ಬಗ್ಗೆ ಹೇಳುತ್ತಿದ್ದಾರೆ. ಬೈಂದೂರಿನಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಣದ ಹಂಚಿಕೆಗೆ ತಂದಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ