ಉಡುಪಿ: ಪ್ರಾಕೃತಿಕ ವಿಕೋಪ ಎದುರಿಸಲು 11 ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಹಣವನ್ನು ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ಜಿಲ್ಲಾಡಳಿತದ ಖಾತೆಯಲ್ಲಿರುವ ದುಡ್ಡಿಗೆ ಹೆಚ್ಚುವರಿಯಾಗಿ 11 ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಮಹಾಮಳೆ: ಪರಿಹಾರ ಕಾರ್ಯ ಪರಿಶೀಲನಾ ಸಭೆ ನಡೆಸಿದ ಆರ್. ಅಶೋಕ್
ಉಡುಪಿ ಜಿಲ್ಲೆಯು 3.50 ಕೋಟಿ ರೂಪಾಯಿ ಪ್ರಾಕೃತಿಕ ವಿಕೋಪ ನಿಧಿ ಹೊಂದಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಪಡೆಯಲಿದೆ. ಹಾಗೆಯೇ ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಧಾರವಾಡ ಸಹಿತ 11 ಜಿಲ್ಲೆಗೆ ಒಟ್ಟು 55 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವ ಅಶೋಕ್ ಹೇಳಿದರು.
ರಾಜ್ಯದಲ್ಲೇ ಉಡುಪಿಯಲ್ಲಿ ಮಳೆ ರೆಕಾರ್ಡ್
ಇನ್ನು 2019ರ ಪ್ರವಾಹದಲ್ಲಿ ನಾಶವಾದ ಮನೆಗಳನ್ನು ಮತ್ತೆ ಕಟ್ಟಲು 2, 3, 4ನೇ ಕಂತಿನ ಅನುದಾನ ಪಡೆದುಕೊಳ್ಳುವ ನಿಟ್ಟಿನಲ್ಲಿ ವಸತಿ ನಿಗಮಕ್ಕೆ 340 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರಾಕೃತಿಕ ವಿಕೋಪ ನಿಧಿಯಾಗಿ ಜಿಲ್ಲಾಡಳಿತಗಳಿಗೆ 310 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಹೇಳಿದರು. ಅಲ್ಲದೇ, ಕಾರ್ಕಳದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ ಮಾಡಲಿದ್ದು, ಕ್ಯಾಂಟೀನ್, ಲೈಬ್ರೆರಿ ಸಹಿತ ಸುಸಜ್ಜಿತ ಕಟ್ಟಡವನ್ನು 4 ತಿಂಗಳು ನೆರೆ ಪರಿಹಾರಕ್ಕೆ ಹಾಗೂ ಎಂಟು ತಿಂಗಳು ಸರಕಾರಿ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಬಿಜೆಪಿಗೆ ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ: ದಿನೇಶ್ ಗುಂಡೂರಾವ್ ಸವಾಲ್
ಇದೇ ವೇಳೆ ಪ್ರಾಕೃತಿಕ ವಿಕೋಪದಿಂದ ಯಾವುದೇ ಸಾವು ನೋವು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಸಚಿವ ಅಶೋಕ್, ಶಾಸಕರ ಅಧ್ಯಕ್ಷತೆಯ ಅಕ್ರಮ ಸಕ್ರಮ ಸಮಿತಿ ಅವಧಿಯನ್ನು ಎರಡು ವರ್ಷ ವಿಸ್ತರಿಸಲಾಗುವುದು ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ಜಿಲ್ಲಾಡಳಿತದ ಖಾತೆಯಲ್ಲಿರುವ ದುಡ್ಡಿಗೆ ಹೆಚ್ಚುವರಿಯಾಗಿ 11 ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಮಹಾಮಳೆ: ಪರಿಹಾರ ಕಾರ್ಯ ಪರಿಶೀಲನಾ ಸಭೆ ನಡೆಸಿದ ಆರ್. ಅಶೋಕ್
ಉಡುಪಿ ಜಿಲ್ಲೆಯು 3.50 ಕೋಟಿ ರೂಪಾಯಿ ಪ್ರಾಕೃತಿಕ ವಿಕೋಪ ನಿಧಿ ಹೊಂದಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಪಡೆಯಲಿದೆ. ಹಾಗೆಯೇ ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಧಾರವಾಡ ಸಹಿತ 11 ಜಿಲ್ಲೆಗೆ ಒಟ್ಟು 55 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವ ಅಶೋಕ್ ಹೇಳಿದರು.
ರಾಜ್ಯದಲ್ಲೇ ಉಡುಪಿಯಲ್ಲಿ ಮಳೆ ರೆಕಾರ್ಡ್
ಇನ್ನು 2019ರ ಪ್ರವಾಹದಲ್ಲಿ ನಾಶವಾದ ಮನೆಗಳನ್ನು ಮತ್ತೆ ಕಟ್ಟಲು 2, 3, 4ನೇ ಕಂತಿನ ಅನುದಾನ ಪಡೆದುಕೊಳ್ಳುವ ನಿಟ್ಟಿನಲ್ಲಿ ವಸತಿ ನಿಗಮಕ್ಕೆ 340 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರಾಕೃತಿಕ ವಿಕೋಪ ನಿಧಿಯಾಗಿ ಜಿಲ್ಲಾಡಳಿತಗಳಿಗೆ 310 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಹೇಳಿದರು. ಅಲ್ಲದೇ, ಕಾರ್ಕಳದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ ಮಾಡಲಿದ್ದು, ಕ್ಯಾಂಟೀನ್, ಲೈಬ್ರೆರಿ ಸಹಿತ ಸುಸಜ್ಜಿತ ಕಟ್ಟಡವನ್ನು 4 ತಿಂಗಳು ನೆರೆ ಪರಿಹಾರಕ್ಕೆ ಹಾಗೂ ಎಂಟು ತಿಂಗಳು ಸರಕಾರಿ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಬಿಜೆಪಿಗೆ ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ: ದಿನೇಶ್ ಗುಂಡೂರಾವ್ ಸವಾಲ್
ಇದೇ ವೇಳೆ ಪ್ರಾಕೃತಿಕ ವಿಕೋಪದಿಂದ ಯಾವುದೇ ಸಾವು ನೋವು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಸಚಿವ ಅಶೋಕ್, ಶಾಸಕರ ಅಧ್ಯಕ್ಷತೆಯ ಅಕ್ರಮ ಸಕ್ರಮ ಸಮಿತಿ ಅವಧಿಯನ್ನು ಎರಡು ವರ್ಷ ವಿಸ್ತರಿಸಲಾಗುವುದು ಎಂದರು.