ಆ್ಯಪ್ನಗರ

ಕೋಟ ಜೋಡಿ ಕೊಲೆ ಪ್ರಕರಣ: ಆರೋಪಿ ರಾಘವೇಂದ್ರ ಕಾಂಚನ್‌ಗೆ ಜಾಮೀನು

ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ ಎಂದು ತಿಳಿದು ಬಂದಿದೆ.

Vijaya Karnataka 17 Jul 2019, 7:45 am
ಕುಂದಾಪುರ: ಕೋಟ ಸಮೀಪದ ಮಣೂರು ಎಂಬಲ್ಲಿ ಜನವರಿ 26ರ ರಾತ್ರಿ ನಡೆದ ಯತೀಶ್‌ ಕಾಂಚನ್‌ ಮತ್ತು ಭರತ್‌ ಗೆಳೆಯರಿಬ್ಬರ ಕೊಲೆ ಪ್ರಕರಣದ ಆರೋಪಿ ಜಿ.ಪಂ.ಸದಸ್ಯ ರಾಘವೇಂದ್ರ ಕಾಂಚನ್‌ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.
Vijaya Karnataka Web Arrest 23


ಕೊಲೆ ಪ್ರಕರಣದಲ್ಲಿ ರಾಘವೇಂದ್ರ ಕಾಂಚನ್‌ ಒಳಸಂಚು ರೂಪಿಸಿದ ಆರೋಪ ಎದುರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 18 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಹೈಕೋರ್ಟ್‌ಗೆ ಜಾಮೀನು ಕೋರಿ ಆರೋಪಿಗಳಾದ ರಾಘವೇಂದ್ರ ಕಾಂಚನ್‌ ಮತ್ತು ವೀರೇಂದ್ರ ಆಚಾರ್ಯ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ದತ್ತ ಯಾದವ್‌ ಆರೋಪಿ ರಾಘವೇಂದ್ರ ಕಾಂಚನ್‌ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದ್ದರೆ ಪೊಲೀಸ್‌ ಪೇದೆ ಆಗಿರುವ ವೀರೇಂದ್ರ ಆಚಾರ್ಯ ಜಾಮೀನು ಅರ್ಜಿ ತಿರಸ್ಕರಿಸಿದ್ದಾರೆ.

ನ್ಯಾಯಮೂರ್ತಿಗಳ ಅಸಮಾಧಾನ:
ಜಾಮೀನು ಅರ್ಜಿಯ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿ ಅಸಮಾಧಾನ ಹೊರಗೆಡಹಿದ ಪ್ರಸಂಗ ನಡೆದಿದೆ. ಐಪಿಸಿ ಸೆಕ್ಷ ನ್‌ 212 ಅಡಿಯಲ್ಲಿ ಬಂಧಿತನಾಗಿರುವ ಪೊಲೀಸ್‌ ಪೇದೆ ವೀರೇಂದ್ರ ಆಚಾರ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯುತ ಸ್ಥಾನದಲ್ಲಿದ್ದು ಕೊಲೆಯಂತಹ ಹೀನ ಕೃತ್ಯಕ್ಕೆ ಸಹಕರಿಸಿದ್ದು ಬೇಲಿಯೇ ಎದ್ದು ಹೊಲ ಮೇದಂತೆ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಜಾಮೀನು ಅರ್ಜಿ ತಿರಸ್ಕರಿಸಿದ್ದಾರೆ.

2-3 ದಿನದಲ್ಲಿ ಪ್ರಕ್ರಿಯೆ ಪೂರ್ಣ
: ಉಚ್ಚ ನ್ಯಾಯಾಲಯದ ಆದೇಶ ಬಂದ ಹಿನ್ನೆಲೆಯಲ್ಲಿ ಕುಂದಾಪುರ ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆ ನಡೆಯಲಿದ್ದು 2-3ದಿನ ತಗುಲುವ ಸಾಧ್ಯತೆಯಿದೆ ಎಂದು ಆರೋಪಿ ಪರ ಸ್ಥಳೀಯ ವಕೀಲ ರವಿಕಿರಣ್‌ ಮುರ್ಡೇಶ್ವರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ