ಆ್ಯಪ್ನಗರ

ಜ.19ರಿಂದ ಉಡುಪಿಯಲ್ಲಿ ಉದ್ಯೋಗ ಮೇಳ

ಸಂಚಲನ ಸ್ವಯಂ ಸೇವಾ ಸಂಘಟನೆ ಹಾಗೂ ಉನ್ನತಿ ಕ್ಯಾರಿಯರ್‌ ಅಕಾಡೆಮಿಯ ಸಹಭಾಗಿತ್ವದಲ್ಲಿ ಸ್ವಾಮಿ ವಿವೇಕಾನಂದ ಅವರ 156ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಕ, ಯುವತಿಯರಿಗೆ ಜಿಲ್ಲಾ ಮಟ್ಟದ ಉಡುಪಿ ಉದ್ಯೋಗ ಮೇಳ -2019 ಜ.19 ಮತ್ತು 20ರಂದು ಉಡುಪಿ ಅಜ್ಜರಕಾಡಿನ ಡಾ.ಜಿ.ಶಂಕರ್‌ ಸರಕಾರಿ ಮಹಿಳಾ ಕಾಲೇಜಿನಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

Vijaya Karnataka Web 31 Dec 2018, 5:00 am
ಉಡುಪಿ : ಸಂಚಲನ ಸ್ವಯಂ ಸೇವಾ ಸಂಘಟನೆ ಹಾಗೂ ಉನ್ನತಿ ಕ್ಯಾರಿಯರ್‌ ಅಕಾಡೆಮಿಯ ಸಹಭಾಗಿತ್ವದಲ್ಲಿ ಸ್ವಾಮಿ ವಿವೇಕಾನಂದ ಅವರ 156ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಕ, ಯುವತಿಯರಿಗೆ ಜಿಲ್ಲಾ ಮಟ್ಟದ ಉಡುಪಿ ಉದ್ಯೋಗ ಮೇಳ -2019 ಜ.19 ಮತ್ತು 20ರಂದು ಉಡುಪಿ ಅಜ್ಜರಕಾಡಿನ ಡಾ.ಜಿ.ಶಂಕರ್‌ ಸರಕಾರಿ ಮಹಿಳಾ ಕಾಲೇಜಿನಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ.
Vijaya Karnataka Web news/udupi
ಜ.19ರಿಂದ ಉಡುಪಿಯಲ್ಲಿ ಉದ್ಯೋಗ ಮೇಳ


ಸಂಚಲನದ ಅಧ್ಯಕ್ಷ ಪ್ರೇಮ್‌ಪ್ರಸಾದ್‌ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮ ಮೊದಲು ಜ.12 ಮತ್ತು 13 ರಂದು ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಹೆಚ್ಚಿನ ಅಭ್ಯರ್ಥಿಗಳು ಪಾಲ್ಗೊಳ್ಳಲು ಅನುಕೂಲವಾಗುವ ಹಾಗೆ ಜ.19 ಮತ್ತು 20ರಂದು ನಡೆಸಲಾಗುತ್ತಿದೆ. ಜ.19ರಂದು ಬೆಳಗ್ಗೆ 9.30ಕ್ಕೆ ಮೇಳ ಉದ್ಘಾಟನೆಗೊಳ್ಳಲಿದೆ ಎಂದು ಅವರು ತಿಳಿಸಿದರು.

5,000 ಮಂದಿಗೆ ಉದ್ಯೋಗ : ಈ ಉದ್ಯೋಗ ಮೇಳದಲ್ಲಿ ಸ್ಥಳೀಯ ಹಾಗೂ ಬೆಂಗಳೂರಿನ 150ರಿಂದ 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುತ್ತಿದ್ದು, ಸುಮಾರು 5,000ಕ್ಕೂ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿರೀಕ್ಷೆ ಹೊಂದಲಾಗಿದೆ. ಶೇ.50ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಒದಗಿಸುವ ಪ್ರಯತ್ನ ಮಾಡಲಾಗಿದೆ. ಈಗಾಗಲೇ 142 ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ ಎಂದು ಅವರು ತಿಳಿಸಿದರು.

ಜಿಲ್ಲೆಯ 18ರಿಂದ 40 ವರ್ಷ ವಯೋಮಿತಿಯ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಗಿಂತ ಕಡಿಮೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಡಿಪ್ಲೋಮಾ, ಪದವೀಧರ, ಸ್ನಾತಕೋತ್ತರ, ಎಂಜೀನಿಯರಿಂಗ್‌, ಮ್ಯಾನೆಜ್ಮೆಂಟ್‌ ಹಾಗೂ ಇತರ ಕೋರ್ಸ್‌ ಮುಗಿಸಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಆನ್‌ಲೈನ್‌ ನೋಂದಣಿ : ಆಸಕ್ತರು ಡಿಡಿಡಿ.್ಞaಞಞadಛಿshp್ಟಛಿಞ.ಟ್ಟಜ ಮೂಲಕ ಆನ್‌ಲೈನ್‌ನಲ್ಲಿ ಜ.11ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ಪ್ರತಿ ಅಭ್ಯರ್ಥಿಗಳಿಗೆ 3 ಕಂಪೆನಿಗಳ ಸಂದರ್ಶನಕ್ಕೆ ಅವಕಾಶ ಒದಗಿಸಲಾಗುವುದು. ಜ.11ರೊಳಗೆ ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಜ.12ರಂದು ಸಂದರ್ಶನ ಎದುರಿಸುವ ಬಗ್ಗೆ ನುರಿತ ತಜ್ಞರಿಂದ ತರಬೇತಿ ನೀಡಲಾಗುವುದು. ಈಗಾಗಲೇ ಕಳೆದ ಒಂದು ವಾರದಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ.ಉದ್ಯೋಗ ಮೇಳ ನಡೆಯುವ ದಿನದಂದು ಅಭ್ಯರ್ಥಿಗಳು ಬೆಳಗ್ಗೆ 7 ಗಂಟೆಗೆ ಹಾಜರಿರಬೇಕು. ತಮ್ಮ ಬಯೋಡಾಟಾದೊಂದಿಗೆ, ಶೈಕ್ಷಣಿಕ ದಾಖಲಾತಿಗಳನ್ನು 5 ಪ್ರತಿಗಳಲ್ಲಿ ಕಡ್ಡಾಯವಾಗಿ ತರಬೇಕು ಎಂದು ಅವರು ತಿಳಿಸಿದರು.

ಮೇಳದ ಸಮಾರೋಪ ಜ.20ರಂದು ಸಂಜೆ 6 ಗಂಟೆಗೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಶಾಸಕ ಕೆ.ರಘುಪತಿ ಭಟ್‌, ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ, ಇಗ್ನೋ ಸಂಯೋಜನಾಧಿಕಾರಿ ಶ್ರೀಧರ ಭಟ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ