ಆ್ಯಪ್ನಗರ

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್‍ಗೆ ಷರತ್ತು ಬದ್ಧ ಜಾಮೀನು

2016, ಜು. 28 ರಂದು ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿ ಅವರನ್ನು ಪತ್ನಿ, ಪುತ್ರ ಹಾಗೂ ನಿರಂಜನ್ ಭಟ್ ಸೇರಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದರು ಎಂದು ದೂರು ದಾಖಲಾಗಿತ್ತು.

Vijaya Karnataka Web 24 Jun 2020, 7:40 pm
ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಂದಳಿಕೆ ನಿರಂಜನ್ ಭಟ್‌ಗೆ (30) ತಂದೆಯ ಉತ್ತರ ಕ್ರಿಯೆಯಲ್ಲಿ ಭಾಗಿಸುವುದಕ್ಕೆ ಅವಕಾಶ ಕೊಟ್ಟಿರುವ ನ್ಯಾಯಾಲಯ 15 ದಿನಗಳ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
Vijaya Karnataka Web ಭಾಸ್ಕರ್‌ ಶೆಟ್ಟಿ
ಭಾಸ್ಕರ್‌ ಶೆಟ್ಟಿ


2016 ರಲ್ಲಿ ಭಾಸ್ಕರ್ ಶೆಟ್ಟಿ ಅವರ ಕೊಲೆ ನಡೆದಿದ್ದು, ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಪ್ರಕರಣದ ಆರೋಪಿದಲ್ಲಿ ಜೈಲು ಸೇರಿದ್ದರು. ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ನಿರಂಜನ್ ಭಟ್ ಜಾಮೀನಿಗೆ ಸಾಕಷ್ಟು ಬಾರಿ ಅರ್ಜಿ ಸಲ್ಲಿಕೆ ಮಾಡಿದ್ದರೂ ಜಾಮೀನು ಸಿಕ್ಕಿರಲಿಲ್ಲ.

ನಿರಂಜನ್ ಭಟ್‍ನ ತಂದೆ, ಪ್ರಕರಣದ ಸಾಕ್ಷ್ಯನಾಶ ಆರೋಪಿ ಶ್ರೀನಿವಾಸ ಭಟ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂ.22 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ತಂದೆಯ ಉತ್ತರ ಕ್ರಿಯೆಯಲ್ಲಿ ಭಾಗವಹಿಸುವುದಕ್ಕೆ ಜಾಮೀನು ನೀಡುವಂತೆ ಆರೋಪಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿಎಂ. ಜೋಶಿ ಜೂ. 23 ರಂದು ಆತ್ಮಹತ್ಯೆ ಯತ್ನದಲ್ಲಿ ಉಡುಪಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜೂ.24 ರಂದು ಜಾಮೀನು ನೀಡಿದೆ.

ಆರೋಪಿ ನಿರಂಜನ್ ಭಟ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಷರತ್ತು ಬದ್ಧ ಜಾಮೀನಿನಂತೆ ಜೂ. 25 ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಿರಂಜನ್‍ಗೆ ನೀಡಿರುವ ಷರತ್ತು ಬದ್ಧ ಜಾಮೀನಿನಲ್ಲಿ 5 ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಜು. 7 ರಂದು ನ್ಯಾಯಾಲಯದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗುವಂತೆ ತಿಳಿಸಲಾಗಿದೆ.

2016, ಜು. 28 ರಂದು ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿ ಅವರನ್ನು ಪತ್ನಿ, ಪುತ್ರ ಹಾಗೂ ನಿರಂಜನ್ ಭಟ್ ಸೇರಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದರು ಎಂದು ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರಂಜನ್ ಭಟ್ ಆ. 8 ರಂದು ತನ್ನ ಕೈ ಬೆರಳಿನಲ್ಲಿದ್ದ ವಜ್ರದ ಉಂಗುರು ಹಾಗೂ ಕಿವಿಯ ಎರಡು ಒಲೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದ.

ಸಾಕ್ಷ್ಯನಾಶ ಆರೋಪಿಗಳಾದ ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರನನ್ನು ಪೊಲೀಸರು ಆ. 11 ರಂದು ಬಂಧಿಸಿದ್ದು, ಅ. 1ರಂದು ಇವರಿಗೆ ಜಾಮೀನು ನೀಡಲಾಗಿತ್ತು. ಆರೋಪಿ ಪರವಾಗಿ ವಿಕ್ರಮ್ ಹೆಗ್ಡೆ ಹಾಗೂ ಸುನೀಲ್ ಮೂಲ್ಯ ವಾದಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ