ಆ್ಯಪ್ನಗರ

ಸಾಸ್ತಾನ: ಓವನ್‌ ಸ್ಪೋಟದಲ್ಲಿ ಬೇಕರಿ ಉತ್ಪನ್ನಗಳ ತಯಾರಕರ ಸಂಘದ ಜಿಲ್ಲಾಧ್ಯಕ್ಷ ಸಾವು!

ಬೆಳಗ್ಗೆ 8 ಗಂಟೆಯ ಸುಮಾರಿಗೆ ಫ್ಯಾಕ್ಟರಿಯಲ್ಲಿ ಕೆಲಸ ಪ್ರಾರಂಭಗೊಂಡು ಓವನ್‌ ಚಾಲನೆ ಮಾಡಲು ರೋಬರ್ಟ್‌ ಪುಟಾರ್ಡೊ ಅವರು ಪ್ರಯತ್ನಿಸುತ್ತಿದ್ದಾಗ ಓವನ್‌ ಸಿಡಿದಿದೆ. ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಕೆಲಸಗಾರ ಕಾಯಗೊಂಡಿದ್ದಾರೆ.

Vijaya Karnataka 11 Aug 2020, 3:40 pm
ಕೋಟ: ಸಾಸ್ತಾನ ಸಮೀಪ ಐರೋಡಿಯಲ್ಲಿ ಬೇಕರಿ ಉತ್ಪನ್ನಗಳ ತಯಾರಿಕ ಸಂಸ್ಥೆ ರುಚಿಯಲ್ಲಿ ಓವನ್‌ ಸ್ಪೋಟಗೊಂಡು ಸಂಸ್ಥೆಯ ಮಾಲೀಕ, ಉಡುಪಿ ಜಿಲ್ಲಾ ಬೇಕರಿ ಹಾಗೂ ಖ್ಯಾದ ತಿನಿಸುಗಳ ತಯಾರಕರ ಸಂಘದ ಜಿಲ್ಲಾಧ್ಯಕ್ಷ ರೋಬರ್ಟ್‌ ಪುಟಾರ್ಡೊ ಸ್ಥಳದ್ಲಲೇ ಮೃತಪಟ್ಟ ದಾರುಣ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
Vijaya Karnataka Web 77303438


ಬೆಳಗ್ಗೆ 8 ಗಂಟೆಯ ಸುಮಾರಿಗೆ ಫ್ಯಾಕ್ಟರಿಯಲ್ಲಿ ಕೆಲಸ ಪ್ರಾರಂಭಗೊಂಡು ಓವನ್‌ ಚಾಲನೆ ಮಾಡಲು ರೋಬರ್ಟ್‌ ಪುಟಾರ್ಡೊ ಅವರು ಪ್ರಯತ್ನಿಸುತ್ತಿದ್ದಾಗ ಓವನ್‌ ಸಿಡಿದಿದೆ. ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಕೆಲಸಗಾರ ಕಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಹಲವು ಕಾರ್ಮಿಕರು ದುಡಿಯುತ್ತಿದ್ದರು. ಗ್ಯಾಸ್‌ ಲೀಕೇಜ್‌ನಿಂದ ಈ ದುರ್ಘಟನೆ ಸಂಭವಿಸಿದೆ.

ರುಚಿ ಸಂಸ್ಥೆ ಸುಮಾರು ಮೂರು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಶಿವಮೊಗ್ಗ, ಉಡುಪಿ, ಮಂಗಳೂರು, ಉತ್ತರ ಕನ್ನಡದಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿತ್ತು. ಮೃತರಿಗೆ, ಪತ್ನಿ, ಮೂವರು ಪುತ್ರಿಯರು ಇದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾಹೆಚ್ಚುವರಿ ಎಸ್‌ಪಿ ಕುಮಾರಚಂದ್ರ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಕೋಟ ಠಾಣೆಯ ಉಪನಿರೀಕ್ಷಕ ಸಂತೋಷ್‌ ಆಗಮಿಸಿ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.

ಕುಂದಾಪುರ: ಆನ್‌ಲೈನ್‌ ಶಿಕ್ಷಣಕ್ಕೆ ನೆಟ್‌ವರ್ಕ್ ಕಾಟ, ಅರಣ್ಯದಂಚಿನ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಶಿಕ್ಷಕರ ದೌಡು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ