ಆ್ಯಪ್ನಗರ

ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಲಕ್ಷಣ ಗೋಚರ: ಕೋಟ ಶ್ರೀನಿವಾಸ ಪೂಜಾರಿ

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಲಕ್ಷಣಗಳು ಗೋಚರವಾಗುತ್ತಿವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Vijaya Karnataka Web 21 Jul 2019, 8:35 pm
ಉಡುಪಿ: ದೋಸ್ತಿ ಸರಕಾರ ಸೋಮವಾರ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಬಹುಮತ ಕಳೆದುಕೊಳ್ಳುವುದು ನಿಶ್ಚಿತ. ಬಹುದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿ ಸರಕಾರ ರಚಿಸಲಿದ್ದು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
Vijaya Karnataka Web kota


ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮ್ಮಿಶ್ರ ಸರಕಾರ ಬಹುತೇಕ ಬಹುಮತ ಕಳೆದುಕೊಂಡಿದ್ದು, ಇದು ಸರಕಾರ ನಡೆಸುವವರಿಗೂ ಅರ್ಥವಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಲಿ. ಒಟ್ಟಾರೆ ವ್ಯವಸ್ಥೆ ದೃಷ್ಟಿಯಿಂದ ಅವರು ವಿದಾಯ ಭಾಷಣ ಮಾಡುವುದೇ ಒಳ್ಳೆಯದು ಎಂದು ಅವರು ಅಭಿಪ್ರಾಯ ಪಟ್ಟರು.

ಸ್ಪೀಕರ್ ರಮೇಶ್ ಕುಮಾರ್ ಅವರು ಆದರ್ಶ ರಾಜಕಾರಣ,ರಾಜಧರ್ಮವನ್ನು ನಮಗೆಲ್ಲಾ ಹೇಳಿಕೊಟ್ಟವರು. ಸೋಮವಾರ ಎಲ್ಲವನ್ನೂ ಮುಗಿಸುತ್ತೇನೆ ಎಂದು ಅವರೇ ಭರವಸೆ ನೀಡಿದ್ದಾರೆ. ಸ್ಪೀಕರ್ ರಾಜ ಧರ್ಮವನ್ನು ಪಾಲಿಸುತ್ತಾರೆ ಎಂಬ ವಿಶ್ವಾಸವಿದೆ ನಮಗಿದೆ ಎಂದು ಅವರು ತಿಳಿಸಿದರು.

ಅತೃಪ್ತ ಶಾಸಕರನ್ನು ಸೆಳೆಯುವ ತಂತ್ರದ ಹಿನ್ನಲೆಯಲ್ಲಿ ವಿಳಂಬ ನೀತಿ ಅನುಸರಿಸಲು ಮುಂದಾಗಿದ್ದರು. ಆದರೆ ಅತೃಪ್ತರು ಗಟ್ಟಿಯಾಗಿ ತಮ್ಮ ನಿಲುವಿಗೆ ಅಂಟಿಕೊಂಡಿದ್ದಾರೆ. ಸರಕಾರದ ಒಟ್ಟು ನೀತಿಯನ್ನು ವಿರೋಧಿಸಿದ್ದಾರೆ. ಅಭಿವೃದ್ಧಿ ಕೆಲಸ ಆಗದೇ ಇರುವ ಬಗ್ಗೆ ರೋಸಿ ಹೋಗಿದ್ದಾರೆ. ಇದೇ ಸರಕಾರ ಮುಂದುವರಿದರೆ ಜನರ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ ಎಂದು ತಿಳಿದಿದ್ದಾರೆ. ಜನರ ವಿಶ್ವಾಸ ಕಳೆದುಕೊಳ್ಳುವ ಮೊದಲು ಸರಕಾರದ ವಿಶ್ವಾಸ ಕಳೆದುಕೊಂಡಿದ್ದೇವೆ ಎಂಬುದನ್ನು ಪ್ರಚಾರ ಮಾಡಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ