ಆ್ಯಪ್ನಗರ

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಶೀಘ್ರವೇ ತೀರ್ಮಾನ: ಡಿಕೆ ಶಿವಕುಮಾರ್‌

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನನಗೆ ದಿಲ್ಲಿಯಿಂದ ಕರೆ ಬಂದಿದ್ದು, ದೆಹಲಿಗೆ ಹೋಗುತ್ತಿದ್ದೇವೆ. ಉಡುಪಿ ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಜತೆಗೆ ಸಭೆ ನಡೆಸಿ ಚರ್ಚಿಸಿದ್ದೇನೆ. ಶೀಘ್ರವೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ

Vijaya Karnataka Web 20 May 2022, 9:06 pm
ಉಡುಪಿ: ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಜಿಲ್ಲಾ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ದೆಹಲಿ ವರಿಷ್ಠರೊಂದಿಗೆ ಚರ್ಚಿಸಿ ಶೀಘ್ರವೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Vijaya Karnataka Web ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್


ಅವರು ಉಡುಪಿ ಜಿಲ್ಲೆಯ ಕಿರಿಮಂಜೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ಹರಕೆಯ ಚಂಡಿಕಾಯಾಗ ಸಹಿತ ಧಾರ್ಮಿಕ ಕಾರ್ಯಕ್ರಮಗಳನ್ನು ಮುಗಿಸಿ ಉಡುಪಿ ಪ್ರವಾಸಿ ಮಂದಿರಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

2023 ರಲ್ಲಿ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆ, ಪಕ್ಷದಲ್ಲಿನ ಕೆಲವೊಂದು ವಿಚಾರಗಳ ಬಗ್ಗೆ ಚರ್ಚಿಸುವುದಕ್ಕಾಗಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನನಗೆ ದಿಲ್ಲಿಯಿಂದ ಕರೆ ಬಂದಿದ್ದು, ದೆಹಲಿಗೆ ಹೋಗುತ್ತಿದ್ದೇವೆ. ಉಡುಪಿ ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಜತೆಗೆ ಸಭೆ ನಡೆಸಿ ಚರ್ಚಿಸಿದ್ದೇನೆ. ಶೀಘ್ರವೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಎಸ್‌ಆರ್‌ ಪಾಟೀಲ ಪರ ಮೂಡದ ಡಿಕೆಶಿ-ಸಿದ್ದರಾಮಯ್ಯ ಬಣದ ಒಮ್ಮತ: ಶೀಘ್ರವೇ ಆಯ್ಕೆ ಫೈನಲ್‌

ಸದಸ್ಯತ್ವ ಪುನಾರಂಭ

ಉಡುಪಿ ಜಿಲ್ಲೆ ಸಹಿತ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಿದ್ಧಾಂತ, ಅಭಿವೃದ್ಧಿ ಕಾರ್ಯಗಳನ್ನು ಒಪ್ಪಿ ಕಾಂಗ್ರೆಸ್ ಸೇರ್ಪಡೆಗೊಳಿಸುವ ಉತ್ಸಾಹದಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ಹೆಣ್ಮಕ್ಕಳಿಗೆ, ಯುವಕರಿಗೆ ಇನ್ನೂ ಮುಂದೆ ಹೆಚ್ಚಿನ ಆದ್ಯತೆ ಸಿಗಲಿದೆ. ಎಲ್ಲಾ ವರ್ಗದ ಜನರಿಗೆ ಅಧಿಕಾರ ಕೊಡುವ ಕೆಲಸ ಮಾಡಲಾಗುವುದು. ಕಾಂಗ್ರೆಸ್ ಯಾರು ಇಲ್ಲದಿದ್ದರೂ ನಡೆಯುತ್ತದೆ. ಬ್ಲಾಕ್‌ಮೇಲ್, ಬಲವಂತಕ್ಕೆ ಬೆಲೆ ಇಲ್ಲ. ಇವರೆಲ್ಲ ಅವರವರ ದಾರಿ ನೋಡಿಕೊಳ್ಳಬಹುದೆಂದರು.


ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಅನೇಕ ಮುಖಂಡರು, ಯುವಕರು ಉತ್ಸುಕತೆಯಿಂದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ತೆಗೆದುಕೊಂಡಿದ್ದಾರೆ ಎಂದು ನಮ್ಮ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರು ಮಾಹಿತಿ ನೀಡಿದ್ದಾರೆ. ಇದು ಬಹಳ ಉತ್ತಮ ವಿಚಾರ. ನಾವು ಮತ್ತೆ ಸದಸ್ಯತ್ವ ನೋಂದಣಿ ಆರಂಭಿಸುತ್ತೇವೆ. ಇನ್ನು ಯುವಕರು ಹಾಗೂ ಮಹಿಳೆಯರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶ ನೀಡಲು ಉದಯಪುರದಲ್ಲಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆ ಸಭೆಯಲ್ಲಿನ ಯೋಜನೆಗಳನ್ನು ಜಾರಿಗೊಳಿಸಲು ಒಂದು ಸಮಿತಿ ರಚಿಸಲಾಗುವುದು. ಆ ಸಭೆ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸುತ್ತೇನೆ. ಎಲ್ಲ ವರ್ಗದ ಜನರಿಗೆ ಅಧಿಕಾರ ನೀಡಲು ಪಕ್ಷ ಸಜ್ಜಾಗಿದೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದರು.

ಹುಲಿಯನ್ನು ದೈವವಾಗಿ ಪೂಜಿಸುವ ಪಿಲಿಕೋಲ: ಇದು ಕರಾವಳಿಯ ವಿಶಿಷ್ಟ ಆಚರಣೆಗಳ ಮುಕುಟಪ್ರಾಯ!

150 ಕ್ಷೇತ್ರಗಳನ್ನು ಗೆಲ್ಲಬಹುದು ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೇವಲ 150 ಮಾತ್ರವಲ್ಲ, 224 ಕ್ಷೇತ್ರಗಳಲ್ಲೂ ಗೆಲ್ಲಬಹುದು’ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್. ಸಭಾಪತಿ, ಭಾಸ್ಕರ್ ರಾವ್ ಕಿದಿಯೂರು, ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಕೆ. ಕೃಷ್ಣಮೂರ್ತಿ ಆಚಾರ್ಯ, ಕುಶಲ ಶೆಟ್ಟಿ, ಅಣ್ಣಯ್ಯ ಶೇರಿಗಾರ್ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ