ಆ್ಯಪ್ನಗರ

ಮುಖ್ಯಮಂತ್ರಿಯಿಂದ ಉಡುಪಿ ಪರ್ಯಾಯ ಪುರಪ್ರವೇಶ ಆಮಂತ್ರಣ ಬಿಡುಗಡೆ

ಅದಮಾರು ಮಠದ ಪರ್ಯಾಯ ಮಹೋತ್ಸವವು 2020, ಜ. 18ರಂದು ನಡೆಯಲಿದ್ದು ಮೆರವಣಿಗೆಗೆ ವಿವಿಧ ಕಲಾತಂಡಗಳನ್ನು ಕಳುಹಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

Vijaya Karnataka 13 Dec 2019, 5:48 pm
ಉಡುಪಿ: ಅದಮಾರು ಮಠದ ಕಿರಿಯ ಯತಿ ಈಶಪ್ರಿಯತೀರ್ಥ ಶ್ರೀಪಾದರು 2020, ಜ. 8ರಂದು ಉಡುಪಿ ಪುರ ಪ್ರವೇಶ ಮಾಡಲಿದ್ದು ಆಮಂತ್ರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು.
Vijaya Karnataka Web BS Yediyurappa releases Paryaya invitation


ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಉಡುಪಿ ಜಿ. ಪಂ. ಅಧ್ಯಕ್ಷ ದಿನಕರ ಬಾಬು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ ಎ. ಸುವರ್ಣ, ಗೋವಿಂದರಾಜ್, ವೈ. ಎನ್. ರಾಮಚಂದ್ರ, ಪ್ರದೀಪ್ ರಾವ್ ಉಪಸ್ಥಿತರಿದ್ದರು.

ಅದಮಾರು ಮಠದ ಪರ್ಯಾಯ ಮಹೋತ್ಸವವು 2020, ಜ. 18ರಂದು ನಡೆಯಲಿದ್ದು ಮೆರವಣಿಗೆಗೆ ವಿವಿಧ ಕಲಾತಂಡಗಳನ್ನು ಕಳುಹಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಮನವಿ ಮಾಡಿದರು.

ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣರಿಗೂ ಪರ್ಯಾಯ ಮಹೋತ್ಸವ ಆಮಂತ್ರಣವನ್ನು ನೀಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ