ಆ್ಯಪ್ನಗರ

ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಸಹಿತ ಬ್ರಹ್ಮಕಲಶಾಭಿಷೇಕ

ಕಟಪಾಡಿ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾನಿಧ್ಯವೃದ್ಧಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಸಹಿತ ಬ್ರಹ್ಮಕಲಶಾಭಿಷೇಕ ಭಾನುವಾರ ಸಂಪನ್ನಗೊಂಡಿತು.

Vijaya Karnataka Web 11 Feb 2019, 5:00 am
ಕಟಪಾಡಿ: ಕಟಪಾಡಿ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾನಿಧ್ಯವೃದ್ಧಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಸಹಿತ ಬ್ರಹ್ಮಕಲಶಾಭಿಷೇಕ ಭಾನುವಾರ ಸಂಪನ್ನಗೊಂಡಿತು.
Vijaya Karnataka Web chokkady temple
ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಸಹಿತ ಬ್ರಹ್ಮಕಲಶಾಭಿಷೇಕ


ದೇವಸ್ಥಾನದ ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇದಮೂರ್ತಿ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಅರ್ಚಕ ವೃಂದದವರು ಬೆಳಗ್ಗೆ 2.30 ರಿಂದ ನಾನಾ ಧಾರ್ಮಿಕ ಅನುಷ್ಠಾನಗಳೊಂದಿಗೆ ಬ್ರಹ್ಮಕಲಶ ಪ್ರತಿಷ್ಠೆ ನೆರವೇರಿಸಿ, ಬ್ರಹ್ಮ ಕಲಶಾಭಿಷೇಕ ನೆರವೇರಿಸಿದರು.

ಮಧ್ಯಾಹ್ನ ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ಮಹಾರಥೋತ್ಸವ ಜರುಗಿತು. ಸಿಡಿಮದ್ದು ಪ್ರದರ್ಶನ, ದರ್ಶನ ಬಲಿ ಉತ್ಸವ ನೆರವೇರಿತು. ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯ ಕುಮಾರ್‌ ಶೆಟ್ಟಿ ಕುದ್ರಾಡಿ, ಗೌರವಾಧ್ಯಕ್ಷ ಗೋಪಾಕೃಷ್ಣ ಮಯ್ಯ, ಕಾರ್ಯಾಧ್ಯಕ್ಷ ಬಾಲಸುಂದರ ಭಟ್‌, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಚೊಕ್ಕಾಡಿ ಹಾಗೂ ಆಡಳಿತ ಸಮಿತಿಯ ಸದಸ್ಯರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ