ಆ್ಯಪ್ನಗರ

ಅಕ್ಷರ ದಾಸೋಹ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸುವಂತೆ ಸಿಐಟಿಯು ಆಗ್ರಹ

ರಾಜ್ಯದಲ್ಲಿ ಅಕ್ಷರ ದಾಸೋಹ ನೌಕರರನ್ನು ಸರಕಾರಿ ನೌಕರೆಂದು ಪರಿಗಣಿಸಬೇಕು ಹಾಗೂ ಬಿಸಿಯೂಟ ನೌಕರರಿಗೆ ಕನಿಷ್ಟ ವೇತನ 18,000ರೂ. ನೀಡಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಯಮುನಾ ಗಾಂವಕ್ಕರ್‌ ಆಗ್ರಹಿಸಿದ್ದಾರೆ.

Vijaya Karnataka 17 Dec 2018, 5:00 am
ಉಡುಪಿ : ರಾಜ್ಯದಲ್ಲಿ ಅಕ್ಷರ ದಾಸೋಹ ನೌಕರರನ್ನು ಸರಕಾರಿ ನೌಕರೆಂದು ಪರಿಗಣಿಸಬೇಕು ಹಾಗೂ ಬಿಸಿಯೂಟ ನೌಕರರಿಗೆ ಕನಿಷ್ಟ ವೇತನ 18,000ರೂ. ನೀಡಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಯಮುನಾ ಗಾಂವಕ್ಕರ್‌ ಆಗ್ರಹಿಸಿದ್ದಾರೆ.
Vijaya Karnataka Web news/udupi/citu
ಅಕ್ಷರ ದಾಸೋಹ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸುವಂತೆ ಸಿಐಟಿಯು ಆಗ್ರಹ


ಭಾನುವಾರ ರಾಜ್ಯ ಅಕ್ಷರ ದಾಸೋಹ ಸಂಘ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಂಡ 4ನೇ ಜಿಲ್ಲಾ ಸಮ್ಮೇಳನವನ್ನು ಅವರು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ 12 ಕೋಟಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಬಡಿಸುತ್ತಿರುವ ನೌಕರರ ಬದುಕು ತೀರ ಸಂಕಷ್ಟದಲ್ಲಿದೆ. ಕೇಂದ್ರ ಸರಕಾರ 2001ರಲ್ಲಿ ಬಿಸಿಯೂಟ ಯೋಜನೆಯನ್ನು ಜಾರಿ ತಂದಿದ್ದು, ಈವರೆಗೂ ಬಿಸಿಯೂಟ ನೌಕರರನ್ನು ಸರಕಾರಿ ನೌಕರರು ಎಂದು ಪರಿಗಣಿಸಿ, ಅವರಿಗೆ ಸವಲತ್ತು ನೀಡಲಾಗಿಲ್ಲ. ಬಿಸಿಯೂಟ ನೌಕರರನ್ನು ಶಾಲೆಯಲ್ಲಿ ಇತರೆ ಕೆಲಸಗಳಿಗೆ ಪೂರಕವಾಗುವ ಹಾಗೆ 4ನೇ ದರ್ಜೆಯ ನೌಕರರಾಗಿ ಪರಿಗಣಿಸಬೇಕು. 45ನೇ ಐಎಲ್‌ಸಿ ಶಿಫಾರಸ್ಸು ಈ ಕೂಡಲೇ ಜಾರಿ ಮಾಡಬೇಕು. ಜೊತೆಗೆ ನಿವೃತ್ತಿ ಸೌಲಭ್ಯ ನೀಡಬೇಕು. ಅಲ್ಲದೆ, ಕೇಂದ್ರ ಸರಕಾರದ ಬಿಸಿಯೂಟ ಯೋಜನೆಗೆ ಕಡಿತ ಮಾಡಿರುವ ಅನುದಾನ ವಾಪಸ್ಸು ನೀಡಬೇಕು ಹಾಗೂ ವೇತನವನ್ನು ಪ್ರತಿ ತಿಂಗಳ ನಿಗದಿತ ಸಮಯದೊಳಗೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಅಕ್ಷರ ದಾಸೋಹ ಸಮಿತಿಯ ಕಾರ್ಕಳ ಅಧ್ಯಕ್ಷೆ ಬೇಬಿ ಭಂಡಾರಿ ಸಮ್ಮೇಳನಕ್ಕೆ ಘೋಷಣೆಯ ಮೂಲಕ ಚಾಲನೆ ನೀಡಿದರು.

ಸಿಐಟಿಯುನ ದಾಸ್‌ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಂಕರ್‌, ಕಾರ್ಯದರ್ಶಿ ಸುನಂದಾ, ಕುಂದಾಪುರ ತಾಲೂಕಿನ ಅಧ್ಯಕ್ಷೆ ಜಯಶ್ರೀ, ಕೋಶಾಧಿಕಾರಿ ಶಶಿಧರ್‌ ಗೊಲ್ಲ, ಉಡುಪಿ ತಾಲೂಕು ಅಧ್ಯಕ್ಷೆ ಕಮಲಾ ಮತ್ತಿತರರು ಉಪಸ್ಥಿತರಿದ್ದರು.

ಫೋಟೊ 16ಯುಕೆ ಸಿಐಟಿಯು : ಸಿಐಟಿಯು ರಾಜ್ಯ ಕಾರ್ಯದರ್ಶಿ ಯಮುನಾ ಗಾಂವಕ್ಕರ್‌ ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ