ಆ್ಯಪ್ನಗರ

ಕೃಷಿ ಪಂಡಿತ ಮತ್ತು ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆಯ ವತಿಯಿಂದ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆ ಹಾಗೂ ಪ್ರಸ್ತಕ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka Web 14 Aug 2020, 2:13 pm
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪ್ರಶಸ್ತಿಗಾಗಿ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.

ಕೃಷಿ ಪಂಡಿತ ಪ್ರಶಸ್ತಿ
ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಸೆ. 7ರ ಒಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ