ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಪ್ರಕರಣಗಳ ಒಟ್ಟು ಸಂಖ್ಯೆ 5,143 ಕ್ಕೇರಿದೆ. ಕೊರೊನಾಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಸೋಂಕು ಪತ್ತೆಯಾದವರ ಪೈಕಿ 173 ಮಂದಿಯಲ್ಲಿ ಉಡುಪಿ ತಾಲೂಕಿನ 76 ಮಂದಿ, ಕುಂದಾಪುರ ತಾಲೂಕಿನ 57 ಹಾಗೂ ಕಾರ್ಕಳ ತಾಲೂಕಿನ 39 ಮಂದಿ, ಉಳಿದ ಒಬ್ಬರು ಹೊರಜಿಲ್ಲೆಯವರಾಗಿದ್ದು, ಜಿಲ್ಲೆಯಲ್ಲಿ ಚಿಕಿತ್ಸೆಗೆ ಬಂದು ಪಾಸಿಟಿವ್ ಆಗಿದೆ. ಇವರಲ್ಲಿ 99 ಮಂದಿ ಪುರುಷರು, 74 ಮಂದಿ ಮಹಿಳೆಯರಿದ್ದಾರೆ ಎಂದು ಜಿಲ್ಲಾಆರೋಗ್ಯಾಧಿಕಾರಿ ಡಾ. ಸುಧೀರ್ಚಂದ್ರ ಸೂಡಾ ತಿಳಿಸಿದ್ದಾರೆ.
ಪಾಸಿಟಿವ್ ದೃಢವಾದ 173 ಮಂದಿಯಲ್ಲಿ 46 ಮಂದಿ ಪಾಸಿಟಿವ್ ಸೋಂಕಿತರ ಸಂಪರ್ಕದಿಂದ, 73 ಮಂದಿ ಶೀತಜ್ವರದಿಂದ ಬಳಲುತ್ತಿದ್ದು ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಮೂರು ಮಂದಿಗೆ ಪ್ರವಾಸದಿಂದ ಪಾಸಿಟಿವ್ ಬಂದರೆ, 51 ಮಂದಿಯ ಸಂಪರ್ಕ ತನಿಖೆಯಲ್ಲಿದೆ ಎಂದು ಮಾಹಿತಿ ನೀಡಿದರು. ಕೋವಿಡ್ ಸೋಂಕಿನ ಚಿಕಿತ್ಸೆಗೆ ದಾಖಲಾದವರ ಪೈಕಿ ಚಿಕಿತ್ಸೆಯಿಂದ ಗುಣಮುಖರಾಗಿ 3072 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪಾಸಿಟಿವ್ ಬಂದವರ ಪೈಕಿ 2027 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 956 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1071 ಹೋಮ್ ಐಸೋಲೇಶನ್ನಲ್ಲಿದ್ದಾರೆ ಎಂದರು.
ಸೋಂಕಿನ ಪರೀಕ್ಷೆಗಾಗಿ ಇಂದು 1853 ಮಂದಿಯ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿದ್ದು, ಕೋವಿಡ್ ಶಂಕಿತರು: 1272, ಕೋವಿಡ್ ಸಂಪರ್ಕಿತರು: 311, ಉಸಿರಾಟ ತೊಂದರೆ: 5, ಶೀತಜ್ವರ: 37 ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ: 228 ಮಂದಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 38,053 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. 31,770 ನೆಗೆಟಿವ್, 5143 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 48 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1140 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ಮಾಹಿತಿ ನೀಡಿದರು. ಕೋವಿಡ್ ಪರೀಕ್ಷೆ ಹಿನ್ನಲೆಯಲ್ಲಿ ಬುಧವಾರ 173 ಮಂದಿಯನ್ನು ಐಸೋಲೇಶನ್ ವಾರ್ಡ್ಗೆ ದಾಖಲಿಸಲಾಗಿದೆ. ಇಬ್ಬರು ಕೋವಿಡ್ ಕೇರ್ ಸೆಂಟರ್ಗಳಲ್ಲಿ, 69 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ, 34 ಮಂದಿ ಕೋವಿಡ್ ಹೆಲ್ತ್ ಆಸ್ಪತ್ರೆಗಳಲ್ಲಿ ಹಾಗೂ 68 ಮಂದಿ ಹೋಮ್ ಐಸೋಲೇಶನ್ನಲ್ಲಿ ಇದ್ದಾರೆ.
ಮತ್ತಿಬ್ಬರು ಬಲಿ
ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತಿಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕೋಟೇಶ್ವರದ 82 ರ ಹರೆಯದ ವೃದ್ಧರೊಬ್ಬರು ನಿನ್ನೆ ರಾತ್ರಿ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮಣಿಪಾಲ ಕೆಎಂಸಿಯಲ್ಲಿ ಮುದರಂಗಡಿ ಪಿಲಾರಿನ 55 ರ ಹರೆಯದ ಮಹಿಳೆಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಪಾಸಿಟಿವ್ ದೃಢವಾದ 173 ಮಂದಿಯಲ್ಲಿ 46 ಮಂದಿ ಪಾಸಿಟಿವ್ ಸೋಂಕಿತರ ಸಂಪರ್ಕದಿಂದ, 73 ಮಂದಿ ಶೀತಜ್ವರದಿಂದ ಬಳಲುತ್ತಿದ್ದು ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಮೂರು ಮಂದಿಗೆ ಪ್ರವಾಸದಿಂದ ಪಾಸಿಟಿವ್ ಬಂದರೆ, 51 ಮಂದಿಯ ಸಂಪರ್ಕ ತನಿಖೆಯಲ್ಲಿದೆ ಎಂದು ಮಾಹಿತಿ ನೀಡಿದರು. ಕೋವಿಡ್ ಸೋಂಕಿನ ಚಿಕಿತ್ಸೆಗೆ ದಾಖಲಾದವರ ಪೈಕಿ ಚಿಕಿತ್ಸೆಯಿಂದ ಗುಣಮುಖರಾಗಿ 3072 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪಾಸಿಟಿವ್ ಬಂದವರ ಪೈಕಿ 2027 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 956 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1071 ಹೋಮ್ ಐಸೋಲೇಶನ್ನಲ್ಲಿದ್ದಾರೆ ಎಂದರು.
ಸೋಂಕಿನ ಪರೀಕ್ಷೆಗಾಗಿ ಇಂದು 1853 ಮಂದಿಯ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿದ್ದು, ಕೋವಿಡ್ ಶಂಕಿತರು: 1272, ಕೋವಿಡ್ ಸಂಪರ್ಕಿತರು: 311, ಉಸಿರಾಟ ತೊಂದರೆ: 5, ಶೀತಜ್ವರ: 37 ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ: 228 ಮಂದಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 38,053 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. 31,770 ನೆಗೆಟಿವ್, 5143 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 48 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1140 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ಮಾಹಿತಿ ನೀಡಿದರು. ಕೋವಿಡ್ ಪರೀಕ್ಷೆ ಹಿನ್ನಲೆಯಲ್ಲಿ ಬುಧವಾರ 173 ಮಂದಿಯನ್ನು ಐಸೋಲೇಶನ್ ವಾರ್ಡ್ಗೆ ದಾಖಲಿಸಲಾಗಿದೆ. ಇಬ್ಬರು ಕೋವಿಡ್ ಕೇರ್ ಸೆಂಟರ್ಗಳಲ್ಲಿ, 69 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ, 34 ಮಂದಿ ಕೋವಿಡ್ ಹೆಲ್ತ್ ಆಸ್ಪತ್ರೆಗಳಲ್ಲಿ ಹಾಗೂ 68 ಮಂದಿ ಹೋಮ್ ಐಸೋಲೇಶನ್ನಲ್ಲಿ ಇದ್ದಾರೆ.
ಮತ್ತಿಬ್ಬರು ಬಲಿ
ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತಿಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕೋಟೇಶ್ವರದ 82 ರ ಹರೆಯದ ವೃದ್ಧರೊಬ್ಬರು ನಿನ್ನೆ ರಾತ್ರಿ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮಣಿಪಾಲ ಕೆಎಂಸಿಯಲ್ಲಿ ಮುದರಂಗಡಿ ಪಿಲಾರಿನ 55 ರ ಹರೆಯದ ಮಹಿಳೆಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.