ಆ್ಯಪ್ನಗರ

ಉಡುಪಿಯಲ್ಲಿ ಶಂಕಿತ ಕೊರೊನಾ ಪ್ರಕರಣ ಪತ್ತೆ!

ಉಡುಪಿಯಲ್ಲಿ ಶಂಕಿತ ಕೊರೊನಾ ಪ್ರಕರಣವೊಂದು ಗುರುವಾರ ಪತ್ತೆಯಾಗಿದೆ. ಜನರಲ್ಲಿಆತಂಕ ಮೂಡಿಸಿರುವ ಕಾರಣ, ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡ ಹೇಳಿದ್ದಾರೆ.

Vijaya Karnataka Web 6 Mar 2020, 5:03 pm
ಉಡುಪಿ: ಉಡುಪಿಯಲ್ಲಿ ಶಂಕಿತ ಕೊರೊನಾ ಪ್ರಕರಣವೊಂದು ಗುರುವಾರ ಪತ್ತೆಯಾಗಿದ್ದು, ಜನರಲ್ಲಿಆತಂಕ ಮೂಡಿಸಿದೆ.
Vijaya Karnataka Web coronavirus


ಇಸ್ರೇಲ್‌ನಿಂದ ಮಂಗಳವಾರ ಉಡುಪಿಗೆ ಆಗಮಿಸಿರುವ ಸುಮಾರು 75 ವರ್ಷದ ಹಿರಿಯ ವ್ಯಕ್ತಿಗೆ ಕೆಮ್ಮು ಹಾಗೂ ಶೀತದ ತೊಂದರೆಯಿರುವ ಖಚಿತ ಮಾಹಿತಿಯನ್ವಯ ಅವರ ಮನೆಗೆ ಭೇಟಿ ನೀಡಿ, ಅವರನ್ನು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿದ್ದು, ಗಂಟಲು ದ್ರವ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.

ವರದಿ ಬಂದ ಬಳಿಕವಷ್ಟೇ ಕೊರೊನಾ ಸೋಂಕು ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಂಡು ಮುಂದಿನ ಚಿಕಿತ್ಸೆ ಕುರಿತು ಆಲೋಚಿಸಲಾಗುವುದು ಎಂದು ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡ ಸುದ್ದಿಗೋಷ್ಠಿಯಲ್ಲಿತಿ ಳಿಸಿದ್ದಾರೆ.

ದಾವಣಗೆರೆ: ಕೊರೊನಾ ಪರಿಣಾಮ, 2 ರೂ ಮಾಸ್ಕ್‌ ದರ 10ಕ್ಕೆ ಏರಿಕೆ!

ಕೊರೊನಾ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಸಾರ್ವಜನಿಕರು ಈ ವದಂತಿಗಳನ್ನು ನಂಬ ಬಾರದು. ಕೊರೊನಾ ಬಗ್ಗೆ ಗಾಬರಿಪಡುವ ಮತ್ತು ಯಾವುದೇ ಆತಂಕಗೊಳಗಾಗುವ ಅಗತ್ಯವಿಲ್ಲ. ಆದರೆ ಈ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.

ದೆಹಲಿಯ ಮತ್ತೊಬ್ಬರಿಗೆ ಡೆಡ್ಲಿ ವೈರಸ್‌, ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 31ಕ್ಕೆ ಏರಿಕೆ

ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌: ಉಡುಪಿಯಲ್ಲಿಶಂಕಿತ ಕೊರೊನಾ ವೈರಸ್‌ ಪೀಡಿತ ರೋಗಿಗಳನ್ನು ದಾಖಲು ಮಾಡಲು ಜಿಲ್ಲಾಸ್ಪತ್ರೆಯಲ್ಲಿ5 ಹಾಸಿಗೆಗಳುಳ್ಳ ಪ್ರತ್ಯೇಕ ವಾರ್ಡ್‌ ಕಾಯ್ದಿರಿಸಿ, 3 ವೆಂಟಿಲೇಟರ್‌ ಸಹಿತ 2 ಐಸಿಯು ವ್ಯವಸ್ಥೆ ಮಾಡಲಾಗಿದೆ. ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಆಸ್ಪತ್ರೆಗಳಲ್ಲಿ3 ಬೆಡ್‌ನ ಐಸೋಲೇಶನ್‌ ವಾರ್ಡ್‌ ವ್ಯವಸ್ಥೆ ಮಾಡಲಾಗಿದೆ.

ಕೊರೊನಾ ಪೀಡಿತರಿಗೆ 28 ದಿನ ವೇತನ ಸಹಿತ ಕಡ್ಡಾಯ ರಜೆ: ಕಾರ್ಮಿಕ ಇಲಾಖೆ ಆದೇಶ!

ಜಿಲ್ಲಾ ಸರ್ವೇಕ್ಷಣಾ ಘಟಕದ ಪ್ರಯೋಗ ಶಾಲೆಯಿಂದಲೇ ಶಂಕಿತ ರೋಗಿಗಳ ಗಂಟಲು ದ್ರವಗಳ ಮಾದರಿ ಸಂಗ್ರಹಿಸಿ ಬೆಂಗಳೂರಿಗೆ ಕಳುಹಿಸಲಾಗುವುದು. ಆದ್ದರಿಂದ ಶಂಕಿತ ರೋಗಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿಈಗಾಗಲೇ ತುರ್ತು ಕಾರ್ಯಪಡೆ ರಚಿಸಲು ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಆಸ್ಪತ್ರೆಗಳ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಪಂಚಾಯಿತಿ ಪಿಡಿಒಗಳಿಗೆ ತರಬೇತಿ ನೀಡಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿಔಷಧ ಮತ್ತು ಮಾಸ್ಕ್‌ಗಳು ಸೇರಿದಂತೆ ಎಲ್ಲವೈಯಕ್ತಿಕ ರಕ್ಷಣಾ ಸಾಮಗ್ರಿಗಳ ದಾಸ್ತಾನು ಇದೆ ಎಂದರು.

ಹೊರದೇಶದಿಂದ ಬರುವ ವಿದ್ಯಾರ್ಥಿಗಳ ಕುರಿತಂತೆ ಮಾಹೆ ವಿವಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

ಕೊರೊನಾ ವೈರಸ್‌ ಕುರಿತಂತೆ ಸಾರ್ವಜನಿಕರಲ್ಲಿಯಾವುದೇ ಸಮಸ್ಯೆಗಳಿದ್ದಲ್ಲಿಆರೋಗ್ಯ ಇಲಾಖೆಯ ಉಚಿತ ಹೆಲ್ಪ್‌ಲೈನ್‌ ಸಂಖ್ಯೆ 104 ಅಥವಾ 080-2228541/22374658 ಅಥವಾ ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ದೂ.ಸಂ. 0820-2525561 ಸಂರ್ಕಿಸಬಹುದು

ಜಿಲ್ಲಾಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಹಾಗೂ ಜಿಲ್ಲಾಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ ರಾವ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ