ಆ್ಯಪ್ನಗರ

ಡೆಂಗ್ಯೂ, ಚಿಕುನ್‌ಗುನ್ಯಾ ನಿಯಂತ್ರಿಸಲು ಸೂಕ್ತ ಕ್ರಮ

ಡೆಂಗ್ಯೂ ಮತ್ತು ಚಿಕುನ್‌ಗುನ್ಯಾ ರೋಗ ನಿಯಂತ್ರಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಲೇರಿಯಾಧಿಕಾರಿ ಡಾ.ಪ್ರಶಾಂತ್‌ ಭಟ್‌ ತಿಳಿಸಿದ್ದಾರೆ.

Vijaya Karnataka 17 May 2019, 5:00 am
ಉಡುಪಿ: ಡೆಂಗ್ಯೂ ಮತ್ತು ಚಿಕುನ್‌ಗುನ್ಯಾ ರೋಗ ನಿಯಂತ್ರಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಲೇರಿಯಾಧಿಕಾರಿ ಡಾ.ಪ್ರಶಾಂತ್‌ ಭಟ್‌ ತಿಳಿಸಿದ್ದಾರೆ.
Vijaya Karnataka Web 111


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಉಡುಪಿ ಆಶ್ರಯದಲ್ಲಿ ಉಡುಪಿಯ ಶೋಕ ಮಾತಾ ಇಗರ್ಜಿಯ ಆವರಣದಲ್ಲಿ ವಿಶ್ವ ಡೆಂಗ್ಯೂ ನಿಯಂತ್ರಣ ದಿನದ ಪ್ರಯುಕ್ತ ಗುರುವಾರ ನಡೆದ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನೆಯ ಸುತ್ತ ಮುತ್ತಲ ಪರಿಸರ ಸ್ವಚ್ಚವಾಗಿಟ್ಟುಕೊಳ್ಳಬೇಕು. ನೀರು ನಿಲ್ಲದಂತೆ ನೋಡಿಕೊಂಡರೆ ಸೊಳ್ಳೆಗಳ ಬೆಳವಣಿಗೆ ನಿಯಂತ್ರಿಸಬಹುದು. ಮನೆಯಲ್ಲಿ ಸೊಳ್ಳೆ ಪರದೆ ಬಳಸುವುದರ ಮೂಲಕ ಸೊಳ್ಳೆಗಳಿಂದ ರಕ್ಷ ಣೆ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಚರ್ಚ್‌ ಗುರು ಫಾ.ವಿಜಯ್‌ ಡಿಸೋಜ ಜಾಥಾಗೆ ಚಾಲನೆ ನೀಡಿ, ಜಿಲ್ಲೆಯನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಕ್ತ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.

ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಓಂ ಪ್ರಕಾಶ್‌ ಕಟ್ಟೀಮನಿ, ಜಿಲ್ಲಾ ಆರೋಗ್ಯ ಮೆಲ್ವಿಚಾರಕ ಕೆ.ಕೃಷ್ಣಪ್ಪ, ಕೀಟಶಾಸ್ತ್ರಜ್ಞೆ ಮುಕ್ತಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಚರ್ಚ್‌ನಿಂದ ಬನ್ನಂಜೆ ಮಾರ್ಗವಾಗಿ ಬ್ರಹ್ಮಗಿರಿಯ ಲಯನ್ಸ್‌ ಭವನದವರೆಗೆ ಜಾಥಾ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ