ಆ್ಯಪ್ನಗರ

ವೈದ್ಯರ ಹಲ್ಲೆ ಖಂಡಿಸಿ ಕೆಎಂಸಿಯಲ್ಲಿ ಮೊಂಬತ್ತಿ ಮೆರವಣಿಗೆ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಯುವ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಮಾಹೆ ಮಣಿಪಾಲ ಮತ್ತು ಭಾರತೀಯ ವೈದ್ಯ ಸಂಘ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದ ಸಂಯುಕ್ತ ಆಶ್ರಯದಲ್ಲಿ ಮೊಂಬತ್ತಿ ಮೆರವಣಿಗೆ ಸೋಮವಾರ ನಡೆಯಿತು.

Vijaya Karnataka 18 Jun 2019, 5:00 am
ಉಡುಪಿ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಯುವ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಮಾಹೆ ಮಣಿಪಾಲ ಮತ್ತು ಭಾರತೀಯ ವೈದ್ಯ ಸಂಘ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದ ಸಂಯುಕ್ತ ಆಶ್ರಯದಲ್ಲಿ ಮೊಂಬತ್ತಿ ಮೆರವಣಿಗೆ ಸೋಮವಾರ ನಡೆಯಿತು.
Vijaya Karnataka Web UDP-17DK KMC (3)


ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಸಭಾಂಗಣದಿಂದ ಶಾರದಾ ಮಾಧವ ಪೈ ಒಪಿಡಿವರೆಗೆ ನಡೆದ ಮೆರವಣಿಗೆಯಲ್ಲಿ ನೂರಾರು ವೈದ್ಯರು, ವೈದ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಬಿತ್ತಿ ಪತ್ರಗಳನ್ನು ಪ್ರದರ್ಶಿಸಿ, ಆಸ್ಪತ್ರೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

ಈ ಸಂದರ್ಭ ಕೆಎಂಸಿ ಡೀನ್‌ ಡಾ.ಪ್ರಜ್ಞಾ ರಾವ್‌, ಸಹಾಯಕ ಡೀನ್‌ ಶರತ್‌ ರಾವ್‌, ವೈದ್ಯಕೀಯ ಅಧೀಕ್ಷಕ ಅವಿನಾಶ್‌ ಶೆಟ್ಟಿ, ಐಎಂಎ ಅಧ್ಯಕ್ಷ ಡಾ. ಗುರುಮೂರ್ತಿ ಭಟ್‌, ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಆಸ್ಪತ್ರೆಯ ಡಾ.ಪಿ.ವಿ. ಭಂಡಾರಿ, ಭಾರತೀಯ ದಂತ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಮನೋಜ್‌ ಬ್ರಹ್ಮಾವರ, ಡಾ. ವಿಜಯೇಂದ್ರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ