ಆ್ಯಪ್ನಗರ

ಪ.ಪೂ.ಕಾಲೇಜು ವಿದ್ಯಾರ್ಥಿಗಳ ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರ ವಿರುದ್ಧ ಪೊಲೀಸ್‌ ಇಲಾಖೆ ದೂರು

ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಮಾ.21ರಿಂದ ನಡೆಯುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಿದ ಎಲ್ಲಾ ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕರ ವಿರುದ್ಧ ಉಡುಪಿ ಜಿಲ್ಲೆಯ ಕೋಟ ಸಮೀಪದ ಗಿಳಿಯಾರು ಹೇರ್ಳೆಬೆಟ್ಟು ನಿವಾಸಿ ಸುರೇಶ್‌ ಕುಮಾರ್‌ ಜಿ ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಗಳಾದ ಡಿಜಿ ಮತ್ತು ಐಜಿ ಅವರಿಗೆ ಶುಕ್ರವಾರ ಆನ್‌ಲೈನ್‌ ಮೂಲಕ ದೂರು ನೀಡಿ, ತದನಂತರ ಕೋಟ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿ ಸ್ವೀಕೃತಿ ಪಡೆದಿದ್ದಾರೆ.

Vijaya Karnataka 17 Mar 2019, 5:00 am
ಕೋಟ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಮಾ.21ರಿಂದ ನಡೆಯುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಿದ ಎಲ್ಲಾ ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕರ ವಿರುದ್ಧ ಉಡುಪಿ ಜಿಲ್ಲೆಯ ಕೋಟ ಸಮೀಪದ ಗಿಳಿಯಾರು ಹೇರ್ಳೆಬೆಟ್ಟು ನಿವಾಸಿ ಸುರೇಶ್‌ ಕುಮಾರ್‌ ಜಿ ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಗಳಾದ ಡಿಜಿ ಮತ್ತು ಐಜಿ ಅವರಿಗೆ ಶುಕ್ರವಾರ ಆನ್‌ಲೈನ್‌ ಮೂಲಕ ದೂರು ನೀಡಿ, ತದನಂತರ ಕೋಟ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿ ಸ್ವೀಕೃತಿ ಪಡೆದಿದ್ದಾರೆ.
Vijaya Karnataka Web evaluation of puc college students police department complaint against excluding lecturers
ಪ.ಪೂ.ಕಾಲೇಜು ವಿದ್ಯಾರ್ಥಿಗಳ ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರ ವಿರುದ್ಧ ಪೊಲೀಸ್‌ ಇಲಾಖೆ ದೂರು


ಈಗ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಉಪನ್ಯಾಸಕರು ಬಹಿಷ್ಕರಿಸಿದರೆ ಫಲಿತಾಂಶ ಪ್ರಕಟಣೆ ತಡವಾಗಲಿದೆ. ಪ್ರತಿ ಬಾರಿ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಮೌಲ್ಯಮಾಪನದ ಬಹಿಪ್ಕಾರದ ಕೆಟ್ಟ ಚಾಳಿ ಮುಂದುವರಿಸಿಕೊಂಡು ಬಂದಿದ್ದು, ಈ ಬಾರಿಯೂ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ. ಈಗ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲಿದ್ದು, ಬೇಡಿಕೆ ಈಡೇರಿಕೆ, ಭರವಸೆ ನೀಡುವ ಅಧಿಕಾರ ಸರಕಾರಕ್ಕಿಲ್ಲ. ಈಗ ಮುಷ್ಕರ ಎಷ್ಟು ಸರಿ? ಪದವಿ ಪೂರ್ವ ಉಪನ್ಯಾಸಕರು ಮಾ.21ರಂದು ಮೌಲ್ಯಮಾಪನ ಬಹಿಷ್ಕರಿಸಿದರೆ, ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸೇರಿದಂತೆ ಎಲ್ಲ ಉಪನ್ಯಾಸಕರ ವಿರುದ್ಧ ದೂರು ದಾಖಲಿಸಬೇಕು ಎಂದು ಪೊಲೀಸ್‌ ಇಲಾಖೆಗೆ ಸುರೇಶ್‌ ಕುಮಾರ್‌ ಜಿ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ