ಆ್ಯಪ್ನಗರ

ಮೀನುಗಾರರ ನಾಪತ್ತೆ: ದುರ್ಬಳಕೆ ಮಾಡಿಕೊಳ್ಳದಂತೆ ಮನವಿ

ಯಾವುದೇ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳದಂತೆ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಆಗ್ರಹಿಸಿದ್ದಾರೆ.

Vijaya Karnataka Web 5 Apr 2019, 5:39 pm
ಉಡುಪಿ: ಮಲ್ಪೆ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ 7 ಮಂದಿ ಮೀನುಗಾರರ ಪ್ರಕರಣವನ್ನು ಯಾವುದೇ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳದಂತೆ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಆಗ್ರಹಿಸಿದ್ದಾರೆ.
Vijaya Karnataka Web boat


ನಾಪತ್ತೆ ಪ್ರಕರಣದಲ್ಲಿ ಯಾವ ರಾಜಕೀಯ ಪಕ್ಷ, ನಾಯಕರು ಏನು, ಎಷ್ಟು ಕೆಲಸ ಮಾಡಿದ್ದಾರೆ ಎನ್ನುವುದು ಮೀನುಗಾರರಿಗೆ ಗೊತ್ತಿದೆ. ರಾಜಕೀಯ ನಾಯಕರು ತಮ್ಮ ಲಾಭಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರಕಾರ ಈ ಬಗ್ಗೆ ಕೆಲಸ ಮಾಡಿಲ್ಲ ಎಂದು ಗೂಬೆ ಕೂರಿಸುವ ಕೆಲಸ ಮಾಡಬಾರದು. ಇದು ನೊಂದ ಕುಟುಂಬಕ್ಕೆ ಮತ್ತಷ್ಟು ನೋವು ನೀಡಿದಂತಾಗುತ್ತದೆ ಎಂದರು.

ನಿಮಗೆ ನಾಪತ್ತೆಯಾದ ಬೋಟ್‌ ಹಾಗೂ ಮೀನುಗಾರರ ಬಗ್ಗೆ ಕಾಳಜಿ ಇರುವುದೇ ಆದರೆ ಚುನಾವಣೆ ಮುಗಿದ ಕೂಡಲೇ ಮೀನುಗಾರರೊಂದಿಗೆ ಕೈ ಜೋಡಿಸಿ ನಿಮ್ಮ ಸಲಹೆ ಸೂಚನೆಗಳನ್ನು ಕೊಟ್ಟು ಹುಡುಕಾಟಕ್ಕೆ ಸಹಕರಿಸಿ. ಅದು ಬಿಟ್ಟು ಪ್ರಚಾರ ಮಾಡಿಕೊಳ್ಳಬೇಡಿ ಎಂದು ಸತೀಶ್‌ ಕುಂದರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ