ಆ್ಯಪ್ನಗರ

ಏ ಮೆರೆ ವತನ್‌ಕೆ ಲೋಗೋ..ಝರಾ ಆಂಖ್‌ ಮೆ ಭರ್‌ಲೋ ಪಾನಿ

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ನಡೆಸಿದ ಪೈಶಾಚಿಕ ದಾಳಿಯಲ್ಲಿ ಹುತಾತ್ಮರಾದ ಸುಮಾರು 40 ಮಂದಿ ವೀರ ಯೋಧರಿಗೆ ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ನೇತೃತ್ವದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಸೋಮವಾರ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು.

Vijaya Karnataka 19 Feb 2019, 5:00 am
ಉಡುಪಿ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ನಡೆಸಿದ ಪೈಶಾಚಿಕ ದಾಳಿಯಲ್ಲಿ ಹುತಾತ್ಮರಾದ ಸುಮಾರು 40 ಮಂದಿ ವೀರ ಯೋಧರಿಗೆ ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ನೇತೃತ್ವದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಸೋಮವಾರ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು.
Vijaya Karnataka Web shanker


ಜಿಲ್ಲಾ ಮೊಗವೀರ ಯುವ ಸಂಘಟನೆ, ಜಿಲ್ಲಾಡಳಿತ ಹಾಗೂ ಸಮಾನ ಮನಸ್ಕ ಸಂಘ ಸಂಸ್ಥೆಗಳು ಮತ್ತು ವಿದ್ಯಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿ, ವೀರಯೋಧರು ಹಾಗೂ ಅವರ ಪರಿವಾರದೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ರವಾನಿಸಲಾಯಿತು.

ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್‌, ಜಿಲ್ಲಾಡಳಿತದ ಪರವಾಗಿ ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿ, ತಹಸೀಲ್ದಾರ್‌ ಪ್ರದೀಪ್‌ ಕುರ್ಡೇಕರ್‌, ಯೋಧರಾದ ಸುರೇಶ್‌ ಬಾರ್ಕೂರು, ತಾರಾನಾಥ ಸಾಲಿಯಾನ್‌, ಉಮೇಶ್‌ ಸುವರ್ಣ, ಬಾಲರಾಜ್‌ ಪಿತ್ರೋಡಿ, ಡಾ.ಜಿ.ಶಂಕರ್‌ ಸರಕಾರಿ ಮಹಿಳಾ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಿನ್ಸಿಪಾಲ್‌ ಡಾ.ಭಾಸ್ಕರ ಶೆಟ್ಟಿ, ಸಂವೇದನಾ ಫೌಂಡೇಶನ್‌ನ ಪ್ರಕಾಶ್‌ ಮಲ್ಪೆ, ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ ಕರ್ಕೇರ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್‌ ಸೇರಿದಂತೆ ಸಹಯೋಗ ನೀಡಿದ ನಾನಾ ಸಂಘ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳ ಮುಖ್ಯಸ್ಥರು ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭ ಸೈನಿಕರ ಕಲ್ಯಾಣ ನಿಧಿಗೆ ಡಾ.ಜಿ.ಶಂಕರ್‌ 25 ಲಕ್ಷ ರೂ.ದೇಣಿಗೆಯನ್ನು ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಸಮರ್ಪಿಸಿದರು. ಮುಂದಿನ ದಿನಗಳಲ್ಲಿ ದೇಶ ಸೇವೆಗೆ ಕಂಕಣಬದ್ಧರಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿ, ಡಾ.ಜಿ.ಶಂಕರ್‌ ಸರಕಾರಿ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಿನ್ಸಿಪಾಲ್‌ ಡಾ.ಭಾಸ್ಕರ ಶೆಟ್ಟಿ, ರಾಜ್ಯಶಾಸ್ತ್ರ ವಿಭಾಗದ ಪ್ರೊ.ನಿತ್ಯಾನಂದ, ಮಲ್ಪೆಯ ಸಂವೇದನಾ ಫೌಂಡೇಶನ್‌ನ ಪ್ರಕಾಶ್‌ ಮಲ್ಪೆ ನುಡಿ ನಮನ ಸಲ್ಲಿಸಿದರು.

ಯೋಧರಾದ ಸುರೇಶ್‌ ಬಾರ್ಕೂರು, ತಾರಾನಾಥ ಸಾಲಿಯಾನ್‌, ಉಮೇಶ್‌ ಸುವರ್ಣ ಹಾಗೂ ಬಾಲರಾಜ್‌ ಪಿತ್ರೋಡಿ ಅವರು ಸೇನೆಯಲ್ಲಿನ ತಮ್ಮ ಅನುಭವಗಳನ್ನು ವಿವರಿಸಿದರು.

ದೇಶ ಪ್ರೇಮಿಗಳಿಂದ ಕಿಕ್ಕಿರಿದು ತುಂಬಿದ್ದ ಶ್ಯಾಮಿಲಿ ಸಭಾಂಗಣದಲ್ಲಿ ಶಿಕ್ಷಣ ಸಂಸ್ಥೆಗಳ ಸಾವಿರಾರು ಮಂದಿ ವಿದ್ಯಾರ್ಥಿನಿಯರು ಮೊಂಬತ್ತಿ ಬೆಳಗಿ, ರಾಷ್ಟ್ರ ಗೀತೆಯ ಮೂಲಕ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ