ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಡ ಹೇರಲು ಡಿ.2ರಂದು ನಡೆಯುವ ಜನಾಗ್ರಹ ಸಭೆಯಲ್ಲಿ ವಿಹಿಂಪ ಪ್ರಮುಖ್ ಮಂಜುನಾಥ ಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ವಿಹಿಂಪ ಜಿಲ್ಲಾ ಕಾರ್ಯದರ್ಶಿ ಪ್ರಮೋದ್ ಮಂದಾರ್ತಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.
ಡಿ.2ರಂದು ಸಂಜೆ 3 ಗಂಟೆಗೆ ಜೋಡುಕಟ್ಟೆಯಿಂದ ಹೊರಡುವ ಮೆರವಣಿಗೆಯು ಕೋರ್ಟ್ ರಸ್ತೆ, ಅಲಂಕಾರ್ ಚಲನಚಿತ್ರ ಮಂದಿರ, ಕಿದಿಯೂರು ಹೋಟೆಲ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ವಾಹನ ಪಾರ್ಕಿಂಗ್ ಪ್ರದೇಶಕ್ಕೆ ಸಾಗಿ ಬರಲಿದೆ. ಭಜನಾ ಮಂಡಳಿಗಳು, ಚೆಂಡೆ ತಂಡಗಳು, ಪ್ರಚಾರ ವಾಹನ, ವೇಷಧಾರಿಗಳು, ಸಾಧು ಸಂತರು, ಗಣ್ಯರು, ಮಾತೆಯರ ಸಹಿತ 15 ಸಾವಿರಕ್ಕೂ ಅಧಿಕ ರಾಮಭಕ್ತರು ಪಾಲ್ಗೊಳ್ಳುವರು. ರಾಧಾ ಮೆಡಿಕಲ್, ಕಿದಿಯೂರು ಹೋಟೆಲ್, ಕಲ್ಸಂಕ ಪ್ರವೇಶ ದ್ವಾರದಲ್ಲಿ ಪಾನೀಯ ವ್ಯವಸ್ಥೆಯಿದೆ.
ಕಲ್ಸಂಕ ರಾಯಲ್ ಗಾರ್ಡನ್, ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನ, ಬೈಲಕೆರೆಯಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಂಜೆ 4ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಬಾಳ್ಕುದ್ರು ಮಠದ ಶ್ರೀನೃಸಿಂಹಾಶ್ರಮ ಸ್ವಾಮೀಜಿ, ಕಟಪಾಡಿ ಆನೆಗುಂದು ಮಠದ ಶ್ರೀಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಅದಮಾರು ಮಠದ ಕಿರಿಯ ಯತಿ ಶ್ರೀಈಶಪ್ರಿಯತೀರ್ಥರ ಸಹಿತ ಜಿಲ್ಲೆಯ ಯತಿಗಳು ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಅಖಿಲ ಭಾರತ ಸಹ ಕಾರ್ಯದರ್ಶಿ ರಾಘವಲು ಮುಖ್ಯ ಭಾಷಣಕಾರರಾಗಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಜರಂಗ ದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ಸಹ ಸಂಚಾಲಕ ಸುಧೀರ್ ನಿಟ್ಟೆ, ಜಿಲ್ಲಾ ಸಾಪ್ತಾಹಿಕ್ ಪ್ರಮುಖ್ ಸುರೇಂದ್ರ ಕೋಟೇಶ್ವರ, ದುರ್ಗಾ ವಾಹಿನಿ ಜಿಲ್ಲಾ ಸಹ ಸಂಚಾಲಕಿ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.
ವಿಹಿಂಪ ಜಿಲ್ಲಾ ಕಾರ್ಯದರ್ಶಿ ಪ್ರಮೋದ್ ಮಂದಾರ್ತಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.
ಡಿ.2ರಂದು ಸಂಜೆ 3 ಗಂಟೆಗೆ ಜೋಡುಕಟ್ಟೆಯಿಂದ ಹೊರಡುವ ಮೆರವಣಿಗೆಯು ಕೋರ್ಟ್ ರಸ್ತೆ, ಅಲಂಕಾರ್ ಚಲನಚಿತ್ರ ಮಂದಿರ, ಕಿದಿಯೂರು ಹೋಟೆಲ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ವಾಹನ ಪಾರ್ಕಿಂಗ್ ಪ್ರದೇಶಕ್ಕೆ ಸಾಗಿ ಬರಲಿದೆ. ಭಜನಾ ಮಂಡಳಿಗಳು, ಚೆಂಡೆ ತಂಡಗಳು, ಪ್ರಚಾರ ವಾಹನ, ವೇಷಧಾರಿಗಳು, ಸಾಧು ಸಂತರು, ಗಣ್ಯರು, ಮಾತೆಯರ ಸಹಿತ 15 ಸಾವಿರಕ್ಕೂ ಅಧಿಕ ರಾಮಭಕ್ತರು ಪಾಲ್ಗೊಳ್ಳುವರು. ರಾಧಾ ಮೆಡಿಕಲ್, ಕಿದಿಯೂರು ಹೋಟೆಲ್, ಕಲ್ಸಂಕ ಪ್ರವೇಶ ದ್ವಾರದಲ್ಲಿ ಪಾನೀಯ ವ್ಯವಸ್ಥೆಯಿದೆ.
ಕಲ್ಸಂಕ ರಾಯಲ್ ಗಾರ್ಡನ್, ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನ, ಬೈಲಕೆರೆಯಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಂಜೆ 4ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಬಾಳ್ಕುದ್ರು ಮಠದ ಶ್ರೀನೃಸಿಂಹಾಶ್ರಮ ಸ್ವಾಮೀಜಿ, ಕಟಪಾಡಿ ಆನೆಗುಂದು ಮಠದ ಶ್ರೀಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಅದಮಾರು ಮಠದ ಕಿರಿಯ ಯತಿ ಶ್ರೀಈಶಪ್ರಿಯತೀರ್ಥರ ಸಹಿತ ಜಿಲ್ಲೆಯ ಯತಿಗಳು ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಅಖಿಲ ಭಾರತ ಸಹ ಕಾರ್ಯದರ್ಶಿ ರಾಘವಲು ಮುಖ್ಯ ಭಾಷಣಕಾರರಾಗಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಜರಂಗ ದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ಸಹ ಸಂಚಾಲಕ ಸುಧೀರ್ ನಿಟ್ಟೆ, ಜಿಲ್ಲಾ ಸಾಪ್ತಾಹಿಕ್ ಪ್ರಮುಖ್ ಸುರೇಂದ್ರ ಕೋಟೇಶ್ವರ, ದುರ್ಗಾ ವಾಹಿನಿ ಜಿಲ್ಲಾ ಸಹ ಸಂಚಾಲಕಿ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.