ಆ್ಯಪ್ನಗರ

ತಗ್ಗರ್ಸೆ: ಅಂತರ್‌ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ

ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ತಗ್ಗರ್ಸೆ ಮತ್ತು ಬೈಂದೂರು ತಾಲೂಕು ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಸಹಯೋಗದಲ್ಲಿ ದಿ.ಪುನೀತ್‌ ಪೂಜಾರಿ ಸ್ಮರಣಾರ್ಥ ಅಂತರ್‌ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ತಿರುಮಲ ಟ್ರೋಪಿ -2019 ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆಯಿತು.

Vijaya Karnataka 19 Feb 2019, 5:00 am
ಬೈಂದೂರು: ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ತಗ್ಗರ್ಸೆ ಮತ್ತು ಬೈಂದೂರು ತಾಲೂಕು ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಸಹಯೋಗದಲ್ಲಿ ದಿ.ಪುನೀತ್‌ ಪೂಜಾರಿ ಸ್ಮರಣಾರ್ಥ ಅಂತರ್‌ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ತಿರುಮಲ ಟ್ರೋಪಿ -2019 ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆಯಿತು.
Vijaya Karnataka Web teggarse


ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಬಡ್ಡಿ ಉದ್ಘಾಟಿಸಿ ಮಾತನಾಡಿ, ಕ್ರೀಡೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಿರುತ್ತದೆ. ಕಬಡ್ಡಿ ಅಪ್ಪಟ ದೇಶಿಯ ಕ್ರೀಡೆಯಾಗಿದೆ. ಇಂದು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವುದು ಅತ್ಯಂತ ಸಂತೋಷಕರ ವಿಚಾರ ಎಂದರು.

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ನಾರಾಯಣ ಹೆಗ್ಡೆ ತಗ್ಗರ್ಸೆ ಅಧ್ಯಕ್ಷ ತೆ ವಹಿಸಿದ್ದರು. ಉದ್ಯಮಿ ಜಯಾನಂದ ಹೋಬಳಿದಾರ್‌ ಕಬಡ್ಡಿ ಕ್ರೀಡಾಂಗಣ ಉದ್ಘಾಟಿಸಿದರು.

ಜಿ.ಪಂ ಶಿಕ್ಷ ಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ತಾ.ಪಂ ಸದಸ್ಯೆ ಮಾಲಿನಿ ಕೆ., ಉಡುಪಿ ನಗರಸಭೆ ಸದಸ್ಯ ಗಣಪತಿ ಹೆಗಡೆ, ರೈತ ಸಂಘದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ತಿರುಮಲ ಸಂಘದ ಅಧ್ಯಕ್ಷ ರೋಶನ್‌ ಹುದಾರ್‌, ನಿವೃತ್ತ ಪ್ರಿನ್ಸಿಪಾಲ್‌ ರಘುರಾಮ ಶೆಟ್ಟಿ, ತಿರುಮಲ ಸಂಘದ ಗೌರವಾಧ್ಯಕ್ಷ ಗಣೇಶ ಗಾಣಿಗ, ಕಾರ್ಯದರ್ಶಿ ಸುಧಾಕರ ಮೊಗವೀರ ಮೊದಲಾದವರು ಉಪಸ್ಥಿತರಿದ್ದರು.

ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ಪಾಂಡುರಂಗ ಮೊಗವೀರ ಕಾರ್ಯಕ್ರಮ ನಿರ್ವಹಿಸಿದರು. ಸುಬ್ರಹ್ಮಣ್ಯ ದೇವಾಡಿಗ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ