ಆ್ಯಪ್ನಗರ

ಕಾರ್ಮಿಕ ಭವಿಷ್ಯ ನಿಧಿ ಸಂಘಟನೆ ಕಚೇರಿ ಎದುರು ಪ್ರತಿಭಟನೆ

ಭವಿಷ್ಯ ನಿಧಿ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಮಾತ್ರ ಸಲ್ಲಿಸಬೇಕೆಂಬ ಕೇಂದ್ರ ಕಾರ್ಮಿಕ ಮಂತ್ರಾಲಯದ ಆದೇಶದ ವಿರುದ್ಧ ತುಳು ನಾಡು ಟವರ್ಸ್‌ನಲ್ಲಿರುವ ಉಡುಪಿಯ ಕಾರ್ಮಿಕ ಭವಿಷ್ಯ ನಿಧಿ ಸಂಘಟನೆ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.

Vijaya Karnataka 4 Jan 2019, 5:00 am
ಉಡುಪಿ: ಭವಿಷ್ಯ ನಿಧಿ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಮಾತ್ರ ಸಲ್ಲಿಸಬೇಕೆಂಬ ಕೇಂದ್ರ ಕಾರ್ಮಿಕ ಮಂತ್ರಾಲಯದ ಆದೇಶದ ವಿರುದ್ಧ ತುಳು ನಾಡು ಟವರ್ಸ್‌ನಲ್ಲಿರುವ ಉಡುಪಿಯ ಕಾರ್ಮಿಕ ಭವಿಷ್ಯ ನಿಧಿ ಸಂಘಟನೆ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
Vijaya Karnataka Web karmika


ಉಡುಪಿ ತಾಲೂಕು ಬೀಡಿ ಲೇಬರ್‌ ಯೂನಿಯನ್‌(ಎಐಟಿಯುಸಿ) ನೇತೃತ್ವದಲ್ಲಿ ಬೀಡಿ ಕಾರ್ಮಿಕರು ಘೋಷಣೆಗಳನ್ನು ಕೂಗಿದರು. ಪ್ರಾದೇಶಿಕ ಭವಿಷ್ಯ ನಿಧಿ ಸಹಾಯಕ ಆಯುಕ್ತ ಸೌರಭ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿ, ಸಮಸ್ಯೆ ಬಗೆಹರಿಸಲು ಒತ್ತಾಯಿಸಿದರು.

ಶಾಲಾ ವರ್ಗಾವಣಾ ಪ್ರಮಾಣ ಪತ್ರದ ಆಧಾರದಲ್ಲಿ ಜನನ ದಿನಾಂಕವನ್ನು ಸರಿಪಡಿಸಬೇಕು. ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಒತ್ತಾಯಿಸಿದರು. ಇದಕ್ಕೂ ಮೊದಲು ಮಾರುತಿ ವೀಥಿಕಾದ ನ್ಯೂ ವ್ಯವಹಾರ್‌ ಕಾಂಪ್ಲೆಕ್ಸ್‌ನಲ್ಲಿರುವ ಯೂನಿಯನ್‌ ಕಚೇರಿಯಿಂದ ಮೆರವಣಿಗೆ ಮೂಲಕ ಪ್ರತಿಭಟನಾ ಸ್ಥಳಕ್ಕೆ ಬೀಡಿ ಕಾರ್ಮಿಕರು ಸಾಗಿ ಬಂದರು.

ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ. ಕುಕ್ಯಾನ್‌, ಎಐಟಿಯುಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಕೆ. ವಿ. ಭಟ್‌ ಉಡುಪಿ, ಎಸ್‌. ಕೆ. ಬೀಡಿ ವರ್ಕರ್ಸ್‌ ಫೆಡರೇಶನ್‌(ಎಐಟಿಯುಸಿ) ಪ್ರಧಾನ ಕಾರ್ಯದರ್ಶಿ ವಿ. ಸೀತಾರಾಂ ಬೇರಿಂಜ, ಸಹಾಯಕ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಬಂಟ್ವಾಳ, ಎಂ. ಕರುಣಾಕರ್‌, ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಸಮಿತಿ ಸಹಾಯಕ ಕಾರ್ಯದರ್ಶಿ ಬಿ. ಶೇಖರ್‌ ಬಂಟ್ವಾಳ್‌, ಉಡುಪಿ ತಾಲೂಕು ಬೀಡಿ ಲೇಬರ್‌ ಯೂನಿಯನ್‌(ಎಐಟಿಯುಸಿ) ಅಧ್ಯಕ್ಷೆ ಶಾಂತಾ ನಾಯಕ್‌, ಕಾರ್ಯದರ್ಶಿ ಶಶಿಕಲಾ ಗಿರೀಶ್‌ ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ