ಆ್ಯಪ್ನಗರ

ಶ್ರೀ ವಿಶ್ವನಾಥ ಕ್ಷೇತ್ರ ಜಾತ್ರೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಪ್ರತಿ ದಿನ ಸಂಜೆ ನಡೆಯಲಿರುವ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಸೋಮವಾರ ಸಂಜೆ ನಡೆಯಿತು.

Vijaya Karnataka 13 Feb 2019, 5:00 am
ಕಟಪಾಡಿ: ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಪ್ರತಿ ದಿನ ಸಂಜೆ ನಡೆಯಲಿರುವ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಸೋಮವಾರ ಸಂಜೆ ನಡೆಯಿತು.
Vijaya Karnataka Web UDP-12HA VISHWA


ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್‌.ಶಂಕರ ಪೂಜಾರಿ ಬ್ರಹ್ಮಾವರ ಉದ್ಘಾಟಿಸಿ, ಜಾತ್ರೆ ಸಂದರ್ಭ ಕಲೆಗಳಿಗೂ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇಂಥ ಕಾರ್ಯಕ್ರಮಗಳು ಮಕ್ಕಳಲ್ಲಿ ಸಂಸ್ಕೃತಿ ಮತ್ತು ಕಲೆಗಳ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಮಹತ್ವವನ್ನು ಹೊಂದಿದೆ ಎಂದರು.

ಕ್ಷೇತ್ರಾಡಳಿ ಮಂಡಳಿಯ ಗೌ. ಪ್ರ. ಕಾರ್ಯದರ್ಶಿ ಯು. ಶಿವಾನಂದ್‌, ಕೋಶಾಧಿಕಾರಿ ವೀರೇಶ್‌ ಸುವರ್ಣ, ಉಪಾಧ್ಯಕ್ಷ ಶ್ರೀಕರ ಅಂಚನ್‌, ಜೊತೆ ಕೋಶಾಧಿಕಾರಿ ಆರ್‌. ಜಿ. ಕೋಟ್ಯಾನ್‌, ಸೇವಾದಳದ ದಳಪತಿ ಹರೀಶ್‌ ಕುಂದರ್‌, ಮಹಿಳಾ ಬಳಗದ ಸಂಚಾಲಕಿ ಶಿಲ್ಪಾ ಜಿ. ಸುವರ್ಣ, ಮುಂಬಯಿ ಸಮಿತಿಯ ಕೋಶಾಧಿಕಾರಿ ಸತೀಶ್‌ ಎಸ್‌.ಅಮೀನ್‌, ಆಡಳಿತ ಸಮಿತಿಯ ಸದಸ್ಯರಾದ ಪ್ರತಾಪ್‌ ಕುಮಾರ್‌ ಉದ್ಯಾವರ, ಕೃಷ್ಣ ಸನಿಲ್‌, ಕಾಮ್‌ರಾಜ್‌ ಸುವರ್ಣ, ಸತೀಶ್‌ ಅಂಬಾಡಿ, ಲೋಕೇಶ್‌ ಕುಮಾರ್‌, ಪ್ರಭಾಕರ ಪಾಲನ್‌, ಮಾಜಿ ಗೌ. ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್‌ ಪ್ರಮುಖರಾದ ನವೀನ್‌ ಅಮೀನ್‌ ಶಂಕರಪುರ, ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಎನ್‌. ಜಿ. ಸುಕುಮಾರ್‌ ಅಂಬಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

ಬಳಿಕ ಉದಯ ಪ್ರೇಮ ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ವಿದುಷಿ ವೀಣಾ ಸಾಮಗರ ಶಿಷ್ಯೆ ಕಲ್ಯಾಣಿ ಜೆ. ಪೂಜಾರಿ ಮತ್ತು ಶ್ವೇತಾಶ್ರೀ ಭಟ್‌ ಅವರಿಂದ ಭರತನಾಟ್ಯ ಪ್ರದರ್ಶನ ಜರುಗಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ