ಕೊಲ್ಲೂರು ದೇವಳ ಮನ್ಮಹಾರಥೋತ್ಸವಕ್ಕೆ ಚಾಲನೆ
ಪ್ರಸಿದ್ಧ ಯಾತ್ರಾಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಮನ್ಮಹಾರಥೋತ್ಸವಕ್ಕೆ ಗುರುವಾರ ವಿದ್ಯುಕ್ತ ಚಾಲನೆ ನೀಡಲಾಯಿತು.
Vijaya Karnataka 22 Mar 2019, 5:00 am
ಕುಂದಾಪುರ: ಪ್ರಸಿದ್ಧ ಯಾತ್ರಾಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಮನ್ಮಹಾರಥೋತ್ಸವಕ್ಕೆ ಗುರುವಾರ ವಿದ್ಯುಕ್ತ ಚಾಲನೆ ನೀಡಲಾಯಿತು.
ಬೆಳಗ್ಗೆ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಅಂಕುರಾಧಿವಾಸ, ಸಿಂಹಯಾಗ, ಧ್ವಜಾರೋಹಣದೊಂದಿಗೆ ರಥೋತ್ಸವದ ವಿಧಿವಿಧಾನ ನಡೆಯಿತು. ದೇವಳದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಹರೀಶ್ಕುಮಾರ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಳ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ, ಕ್ಷೇತ್ರ ಪುರೋಹಿತರು, ಕ್ಷೇತ್ರದ ಅರ್ಚಕರು, ಉಪಾಧಿವಂತರು, ಊರಪರವೂರ ಭಕ್ತರು ಉಪಸ್ಥಿತರಿದ್ದರು.
ಬೆಳಗ್ಗೆ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಅಂಕುರಾಧಿವಾಸ, ಸಿಂಹಯಾಗ, ಧ್ವಜಾರೋಹಣದೊಂದಿಗೆ ರಥೋತ್ಸವದ ವಿಧಿವಿಧಾನ ನಡೆಯಿತು. ದೇವಳದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಹರೀಶ್ಕುಮಾರ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಳ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ, ಕ್ಷೇತ್ರ ಪುರೋಹಿತರು, ಕ್ಷೇತ್ರದ ಅರ್ಚಕರು, ಉಪಾಧಿವಂತರು, ಊರಪರವೂರ ಭಕ್ತರು ಉಪಸ್ಥಿತರಿದ್ದರು.