ಆ್ಯಪ್ನಗರ

ಜಾತಿ ಗಣತಿ ಸಮೀಕ್ಷೆ ವರದಿ ಹಿಂದುಳಿದ ಆಯೋಗದ ಅಧ್ಯಕ್ಷರ ಅಂಗಳಕ್ಕೆ: ಕೋಟ ಶ್ರೀನಿವಾಸ ಪೂಜಾರಿ

ಕೋವಿಡ್-19 ಸೋಂಕು ನಿಯಂತ್ರಣ ಮಾಡಲೇಬೇಕಾಗಿದೆ. ಜನ ಸಹಕಾರ ಕೊಡಬೇಕು. ಸ್ವತಃ ಆರೋಗ್ಯ ಸಚಿವರೇ ಹೇಳಿದ್ದಾರೆ. ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಮಾಡಲ್ಲ. ಕೋವಿಡ್ ನಿಯಂತ್ರಣಕ್ಕೆ ಹೊಸ ಯೋಚನೆ ಮಾಡಬೇಕಿದೆ. ಜನಾಕ್ರೋಶ, ಜನಾಭಿಪ್ರಾಯ ಬಗ್ಗೆ ಅರಿವು ಆಗಿದೆ

Vijaya Karnataka Web 10 Jan 2022, 7:50 pm
ಉಡುಪಿ: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ 170-180 ಕೋಟಿ ರೂ. ಖರ್ಚು ಮಾಡಿ ಸಿದ್ಧಪಡಿಸಿದ ವರದಿ ಅನುಷ್ಠಾನ ಮಾಡಬೇಕೇ? ಬೇಡವೇ ಎನ್ನುವ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಪುನರ್ ಪರಿಶೀಲನೆ ವರದಿ ಕೊಟ್ಟ ಬಳಿಕ ಕ್ಯಾಬಿನೆಟ್ ಮುಂದಿಟ್ಟು ಚರ್ಚಿಸುತ್ತೇವೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
Vijaya Karnataka Web ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್. ಕಾಂತರಾಜ್ ಅವರನ್ನು ನಿಯೋಜಿಸಿ ವರದಿ ಸಿದ್ಧಪಡಿಸಲಾಗಿತ್ತು. ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಬಿಡುಗಡೆ ಮಾಡಿರಲಿಲ್ಲ. ಈ ಸಮೀಕ್ಷೆಯ ಮರು ಪರಿಶೀಲನೆಯ ಮಾಹಿತಿ ಪ್ರಕಾರ ಇದಕ್ಕೆ ಪದನಿಮಿತ್ತ ಸದಸ್ಯರ ಸಹಿಯೇ ಆಗಿರಲಿಲ್ಲ. ಕಾಂತ್‌ರಾಜ್ ಅವರ ಅವಧಿಯೂ ಮುಗಿದಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಪ್ರಸ್ತುತ ಅಧ್ಯಕ್ಷರು ಪುನರ್ ಪರಿಶೀಲನೆ ನಡೆಸಿ ಮಾಹಿತಿ ನೀಡುವುದಾಗಿ ಹೇಳಿದ್ದಾರೆ ಎಂದರು.

ಸೋಂಕಿತರ ಆರೈಕೆಗೆ ಉಡುಪಿಯ ಎಲ್ಲಾ ತಾಲೂಕುಗಳಲ್ಲೂ ಕೋವಿಡ್ ಕೇರ್ ಸೆಂಟರ್ - ಸುನಿಲ್‌ ಕುಮಾರ್‌

ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯಯ್ಯಗೆ ಯಾವ ರೀತಿ ರಾಜಕೀಯ ಲೆಕ್ಕಾಚಾರ ಇತ್ತೋ ನಮಗೆ ಗೊತ್ತಿಲ್ಲ. ಆದರೆ ನಮಗೆ ಯಾವುದೇ ರಾಜಕೀಯವಿಲ್ಲ. ಕಡತ ಕೊಟ್ಟ ಕೂಡಲೇ ಪರಿಶೀಲಿಸುತ್ತೇವೆ ಎಂದರು.

ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಸಡಿಲ

ಕೋವಿಡ್-19 ಸೋಂಕು ನಿಯಂತ್ರಣ ಮಾಡಲೇಬೇಕಾಗಿದೆ. ಜನ ಸಹಕಾರ ಕೊಡಬೇಕು. ಸ್ವತಃ ಆರೋಗ್ಯ ಸಚಿವರೇ ಹೇಳಿದ್ದಾರೆ. ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಮಾಡಲ್ಲ. ಕೋವಿಡ್ ನಿಯಂತ್ರಣಕ್ಕೆ ಹೊಸ ಯೋಚನೆ ಮಾಡಬೇಕಿದೆ. ಜನಾಕ್ರೋಶ, ಜನಾಭಿಪ್ರಾಯ ಬಗ್ಗೆ ಅರಿವು ಆಗಿದೆ ಎಂದರು.

ಉಡುಪಿ: ಕೋವಿಡ್-19 ಹೆಚ್ಚಳ ಹಿನ್ನೆಲೆಯಲ್ಲಿ ಸರಳ ಪರ್ಯಾಯೋತ್ಸವ

ರಾಜ್ಯದಲ್ಲಿ 5 ವರ್ಷದ ಆಳ್ವಿಕೆ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಪಾಠ ನಾವು ಮಾಡಬೇಕೇ? ಕಾನೂನಿನ ಮುಂದೆ ಎಲ್ಲರೂ ಸಮಾನರು. ಮೇಕೆದಾಟು ಪಾದಯಾತ್ರೆ ಆಯೋಜನೆಯಲ್ಲಿ ಕೋವಿಡ್ ಉಲ್ಲಂಘನೆ ಯಾವೆಲ್ಲ ಕ್ರಮ ಕೈಗೊಳ್ಳಬೇಕಿದೆ ಎನ್ನುವ ಅರಿವು ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ