ಆ್ಯಪ್ನಗರ

ಕುಂಭಾಸಿ: ಚಂಡಿಕಾದುರ್ಗಾಪರಮೇಶ್ವರಿ ಲೋಕಾರ್ಪಣೆ, ಧಾರ್ಮಿಕ ಸಭೆ

ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಗಂಗೊಳ್ಳಿ ಹೊಸ್ಮನೆ ದಿ.ಶ್ರೀಮತಿ ಗೌರಮ್ಮ ಮತ್ತು ದಿ.ಮಂಜುನಾಥ ಶೇರೆಗಾರ್‌ ವೇದಿಕೆಯಲ್ಲಿ ಬುಧವಾರ ಸಂಜೆ ದೇಗುಲದ ಲೋಕಾರ್ಪಣೆ ನಿಮಿತ್ತ ಧಾರ್ಮಿಕ ಸಭೆ ಜರುಗಿತು.

Vijaya Karnataka 6 May 2018, 5:00 am
ಕುಂದಾಪುರ : ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಗಂಗೊಳ್ಳಿ ಹೊಸ್ಮನೆ ದಿ.ಶ್ರೀಮತಿ ಗೌರಮ್ಮ ಮತ್ತು ದಿ.ಮಂಜುನಾಥ ಶೇರೆಗಾರ್‌ ವೇದಿಕೆಯಲ್ಲಿ ಬುಧವಾರ ಸಂಜೆ ದೇಗುಲದ ಲೋಕಾರ್ಪಣೆ ನಿಮಿತ್ತ ಧಾರ್ಮಿಕ ಸಭೆ ಜರುಗಿತು.
Vijaya Karnataka Web kumbasi


ಉಡುಪಿ ಅದಮಾರು ಮಠ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಮಾತನಾಡಿ, ಕಲಿಯುಗದಲ್ಲಿ ಸಹಸ್ರಾರು ಕುಂಭಾಸುರರಿದ್ದಾರೆ. ಅಂದು ಭೀಮ ಕುಂಭ ನೆಂಬ ರಕ್ಕಸನ ವಧಿಸಿದರೆ, ಇಂದು ತಾಯಿ ಕಲಿಯುಗದ ಕುಂಭಾಸುರರ ಮರ್ಧಿಸಲು ಪವಿತ್ರ ಭೀಮ ಕ್ಷೇತ್ರ ಕುಂಭಾಶಿಯಲ್ಲಿ ದೇವಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ಮಂದಿರದಲ್ಲಿ ಪ್ರತಿಷ್ಠಾಪಿತಳಾಗಿದ್ದಾಳೆ ಎಂದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ, ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ, ಕೋಟೇಶ್ವರ ಪಟ್ಟಾಭಿರಾಮಚಂದ್ರ ದೇವಸ್ಥಾನ ಧರ್ಮದರ್ಶಿ ಶ್ರೀಧರ ಕಾಮತ್‌, ವಾಸ್ತುತಜ್ಜ ಕೆ.ಬಸವರಾಜ್‌ ಶೆಟ್ಟಿಗಾರ್‌, ಬಿಎಸ್‌ಎನ್‌ಎಲ್‌ ಅಧಿಕಾರಿ ಗೋಪಾಲ, ಕೋಡಿ ರಾಮಕ್ಷ ತ್ರಿಯ ಸಂಘ ಅಧ್ಯಕ್ಷ ಜನಾರ್ದನ ನಾಯಕ್‌, ಕುಂದಾಪುರ ಸವಿತಾ ಸಮಾಜ ಅಧ್ಯಕ್ಷ ಸುಭಾಸ್‌ ಭಂಡಾರಿ, ಸಾಮಾಜಿಕ ಕಾರ‍್ಯಕರ್ತ ಗಣೇಶ್‌ ಕೆದೂರು ಉಪಸ್ಥಿತರಿದ್ದರು.ಈ ಸಂದರ್ಭ ದೇವರಾಯ ಎಂ.ಶೇರೆಗಾರ್‌ ಹಾಗೂ ಅನಿತಾ ದಂಪತಿಯನ್ನು ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಗೌರವಿಸಿದರು. ದೇವರಾಯ ಎಂ.ಶೇರೆಗಾರ್‌ ಸ್ವಾಗತಿಸಿದರು. ಗೋಪಾಲ್‌ ಹಾಗೂ ಸುಮನಾ ರಾಮದಾಸ್‌ ಕಾರ್ಯಕ್ರಮ ನಿರ್ವಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ