ಆ್ಯಪ್ನಗರ

ಮಂದಿರ-ಮಸೀದಿಗಿಂತಲೂ ಮನುಷ್ಯ ಜೀವ ಅಮೂಲ್ಯ: ಮುಸ್ಲಿಂ ಒಕ್ಕೂಟ

'ಇದು ಬೀದಿಗಿಳಿದು ಮಾತನಾಡುವ ವಿಷಯವಲ್ಲ ಎನ್ನುವುದನ್ನು ಮೊದಲೂ ಹೇಳಿದ್ದೇವೆ. ಈಗಲೂ ಅದೇ ವಿಚಾರಕ್ಕೆ ಬದ್ಧರಾಗಿದ್ದೇವೆ,' - ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ.

Vijaya Karnataka Web 9 Nov 2019, 5:31 pm

ಉಡುಪಿ: ಮಂದಿರ-ಮಸೀದಿಗಿಂತಲೂ ಪವಿತ್ರವಾದದ್ದು ಮತ್ತು ಅಮೂಲ್ಯವಾದದ್ದು ಮನುಷ್ಯನ ಜೀವ. ಅಯೋಧ್ಯೆ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಪ್ರಾಣಹಾನಿ ಸಂಭವಿಸಿದ್ದು, ಇನ್ನಾದರೂ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ಯಾಸೀನ್ ಮಲ್ಪೆ ತಿಳಿಸಿದರು.
Vijaya Karnataka Web Ayodhya


ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದಿತ ಸ್ಥಳದ ನೆಪದಲ್ಲಿ ನಡೆಯುವ ರಾಜಕೀಯ ಕೊನೆಗೊಳ್ಳಬೇಕು. ಸುಪ್ರೀಂ ಕೋರ್ಟ್‌ನ ತೀರ್ಪುನ್ನು ನೆಪವಾಗಿಟ್ಟುಕೊಂಡು ಜಿಲ್ಲೆಯ ಯಾವುದೇ ಸಮುದಾಯ/ಸಂಘಟನೆಗಳು ಸಮಾಜದ ಸ್ವಾಸ್ಥ್ಯಕ್ಕೆ ಭಂಗ ತರುವ ಕೆಲಸಕ್ಕೆ ಕೈ ಹಾಕಬಾರದೆಂದು ಅವರು ಮನವಿ ಮಾಡಿದರು.

ಅಯೋಧ್ಯಾ ತೀರ್ಪಿಗೆ ಮೈಸೂರಲ್ಲಿ ಮುಸ್ಲಿಂ ಬಾಂಧವರೊಂದಿಗೆ ಬಿಜೆಪಿ ಸಂಭ್ರಮಾಚರಣೆ

ಸ್ಥಳೀಯ ಸಮಸ್ಯೆಯಾಗಿದ್ದ ಅಯೋಧ್ಯೆ ವಿವಾದದಲ್ಲಿ ರಾಜಕೀಯ ಪ್ರವೇಶಿಸಿದ ನಂತರವೇ ಅನಿವಾರ್ಯವಾಗಿ ಅದು ರಾಷ್ಟ್ರೀಯ ವಿಷಯವಾಗಿ ಗೊಂದಲಕ್ಕೆ ಕಾರಣವಾಯಿತು. ಈ ರಾಷ್ಟ್ರ ಮಟ್ಟದ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಸಮುದಾಯವನ್ನು ಪ್ರತಿನಿಧಿಸುವ ರಾಷ್ಟ್ರ ಮಟ್ಟದ ಸಂಘಟನೆಗಳು, ಒಕ್ಕೂಟಗಳಿವೆ. ಅಯೋಧ್ಯೆ ತೀರ್ಪಿನ ಕುರಿತು ತಮ್ಮ ನಿಲುವನ್ನು ಈಗಾಗಲೇ ಮಾಧ್ಯಮಗಳಿಗೆ ಬಿಡುಗಡೆ ಮಾಡಿವೆ. ಈ ನಿಟ್ಟಿನಲ್ಲಿ ಈ ವಿಷಯದ ಕುರಿತು ಪ್ರತಿ ಜಿಲ್ಲೆ, ತಾಲೂಕು ಮಟ್ಟದಲ್ಲಿರುವ ಮುಸ್ಲಿಂ ಸಂಘಟನೆಗಳು ಪ್ರತ್ಯೇಕವಾಗಿ ಅಭಿಪ್ರಾಯ ನೀಡುವ ಅಗತ್ಯವಿಲ್ಲ ಎಂದರು.
ಅಯೋಧ್ಯೆ ತೀರ್ಪು: ಮೇಲ್ಮನವಿ ಸಲ್ಲಿಸಲ್ಲ ಎಂದ ಸುನ್ನಿ ವಕ್ಫ್‌ ಬೋರ್ಡ್‌

ಸುಪ್ರೀಂ ಕೋರ್ಟ್ ತೀರ್ಪು ಏನೇ ಬಂದರೂ ನಾವು ಭಾವನಾತ್ಮಕವಾಗಿ ಪ್ರತಿಕ್ರಿಯಿಸದೇ ತೀರ್ಪನ್ನು ಗೌರವಿಸಿ ಮುಂದಿನ ಕಾನೂನು ಹೆಜ್ಜೆ ಇಡುವುದಾಗಿ ಅವರು ಈಗಾಗಲೇ ಹೇಳಿದ್ದಾರೆ. ಅದೇ ನಿಲುವನ್ನು ಈಗಲೂ ಪುನರುಚ್ಛರಿಸುತ್ತಿದ್ದೇವೆ. ಇದು ಬೀದಿಗಿಳಿದು ಮಾತನಾಡುವ ವಿಷಯವಲ್ಲ ಎನ್ನುವುದನ್ನು ಮೊದಲೂ ಹೇಳಿದ್ದೇವೆ. ಈಗಲೂ ಅದೇ ವಿಚಾರಕ್ಕೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ