ಆ್ಯಪ್ನಗರ

ಮಂಗಳೂರು ಗೋಲಿಬಾರ್‌: ಸಿಐಡಿ, ಮ್ಯಾಜಿಸ್ಟೀರಿಯಲ್‌ ತನಿಖೆಯಲ್ಲಿ ವಿಶ್ವಾಸವಿಲ್ಲ - ಗುಂಡೂರಾವ್‌

“ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಯಾಕೆ ವಿಡಿಯೋ ಬಿಡುಗಡೆ ಮಾಡಿದ್ದು? ಮಾಧ್ಯಮಗಳಿಗೆ ಯಾಕೆ ಈ ವಿಡಿಯೋಗಳನ್ನು ಕೊಟ್ಟಿದ್ದು? ಪೊಲೀಸರಿಗೆ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಿಲ್ಲ. ಪೊಲೀಸರು ಪ್ರಚೋದನಕಾರಿಯಾಗಿ ನಡೆದುಕೊಂಡಿದ್ದಾರೆ," ಎಂಬುದಾಗಿ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

Vijaya Karnataka 24 Dec 2019, 6:45 pm

ಉಡುಪಿ: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪೊಲೀಸರು ಪ್ರಚೋದನಕಾರಿಯಾಗಿ ನಡೆದುಕೊಂಡಿದ್ದು, ಪೊಲೀಸರ ಗೋಲಿಬಾರ್‌ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಸಿಐಡಿ, ಮ್ಯಾಜಿಸ್ಟೀರಿಯಲ್‌ ತನಿಖೆಯಲ್ಲಿ ವಿಶ್ವಾಸವಿಲ್ಲ. ಕಮಿಷನರ್‌ ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳ ಮೇಲೆ ಶಂಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
Vijaya Karnataka Web Dinesh Gundu Rao


ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ವಿಚಾರಣೆಗೆ ಮಂಗಳವಾರ ಬಂದಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

“ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಯಾಕೆ ವಿಡಿಯೋ ಬಿಡುಗಡೆ ಮಾಡಿದ್ದು? ಮಾಧ್ಯಮಗಳಿಗೆ ಯಾಕೆ ಈ ವಿಡಿಯೋಗಳನ್ನು ಕೊಟ್ಟಿದ್ದು? ಪೊಲೀಸರಿಗೆ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಿಲ್ಲ. ಪೊಲೀಸರು ಪ್ರಚೋದನಕಾರಿಯಾಗಿ ನಡೆದುಕೊಂಡಿದ್ದಾರೆ. ಈ ಬಗ್ಗೆ ಹಾಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆಯಾಗಬೇಕು,” ಎಂದು ಆಗ್ರಹಿಸಿದರು.

ಮಂಗಳೂರಿನಲ್ಲಿ ಕಾಶ್ಮೀರ ಮಾದರಿಯ ದಾಳಿ ! ನಳಿನ್ ಕುಮಾರ್ ಕಟೀಲ್ ಆರೋಪ

ಬೆಂಗಳೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ. ಪ್ರತಿಭಟನೆಗೆ ಅವಕಾಶ ಕೊಡಬೇಕಾಗಿತ್ತು. ಜನರ ಪ್ರತಿಭಟನಾ ಹತ್ತಿಕ್ಕುವ ಕೆಲಸ ಯಾಕೆ ಮಾಡಿದ್ದು? ಇದರಲ್ಲಿ ಸರಕಾರದ ವೈಫಲ್ಯವಿದೆ ಎಂದರು.

ದೇಶವನ್ನು ಒಡೆಯುವ ಕೆಲಸ ಮಾಡಬೇಡಿ. ಎನ್‌ಆರ್‌ಸಿಯಲ್ಲಿ ಸಂವಿಧಾನ ವಿರೋಧಿ ಅಂಶವಿದೆ. ಮೂಲ ಆಶಯಕ್ಕೆ ಧಕ್ಕೆ ತರುವ ಕಾನೂನಿದು. ನಿಮ್ಮ ಪ್ರತಿಷ್ಠೆ, ಸರ್ವಾಧಿಕಾರಿ ಧೋರಣೆಯನ್ನು ಬಿಟ್ಟುಬಿಡಿ. ಈ ವಿಚಾರದಲ್ಲಿಅಹಂಕಾರ ತೋರಿಸಬಾರದೆಂದು ದಿನೇಶ್‌ ಗುಂಡೂರಾವ್‌ ಸಲಹೆ ನೀಡಿದರು.

'ಮಂಗಳೂರು ಹಿಂಸಾಚಾರದಲ್ಲಿ ಕೇರಳ ಯುವಕರ ಪಾತ್ರವಿಲ್ಲ': ಬಿಜೆಪಿ ಆರೋಪಕ್ಕೆ ಮಲೆಯಾಳಿ ಸಂಸದರ ಆಕ್ರೋಶ

ಬಿಜೆಪಿ ನಾಯಕರು ಅನಾವಶ್ಯಕವಾಗಿ ಮಾತನಾಡುತ್ತಾರೆ. ಗಲಭೆ ಸೃಷ್ಟಿಸಬೇಕೆಂಬ ಉದ್ದೇಶ ಅವರದ್ದು. ಸಚಿವ ಸಿ.ಟಿ. ರವಿ, ಶಾಸಕ ಸುನಿಲ್‌ ಕುಮಾರ್‌, ಸಂಸದರಾದ ಪ್ರತಾಪ್‌ ಸಿಂಹ, ಶೋಭಾ ಕರಂದ್ಲಾಜೆ, ಸುರೇಶ್‌ ಅಂಗಡಿ ಇವರೆಲ್ಲ ಬೆಂಕಿ ಹಚ್ಚುವ ವರ್ಗಕ್ಕೆ ಸೇರಿದವರೆಂದು ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ