ಆ್ಯಪ್ನಗರ

Bladder Stone: ವಿಶ್ವದಲ್ಲೇ ಅತಿದೊಡ್ಡ ಮೂತ್ರಕೋಶದ ಕಲ್ಲು ಹೊರ ತೆಗೆದ ಮಣಿಪಾಲ ವೈದ್ಯರು!

ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆ ಮತ್ತೊಂದು ಸಾಧನೆ ಮಾಡಿದ್ದು, ಇಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ವಿಶ್ವದಲ್ಲೇ ಅತಿದೊಡ್ಡ ಮೂತ್ರಕೋಶದ ಕಲ್ಲನ್ನು ಹೊರ ತೆಗೆದಿದೆ. 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಅತಿದೊಡ್ಡ ಮೂತ್ರಕೋಶದ ಕಲ್ಲು ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ (528 ಗ್ರಾಂ) ಪತ್ತೆಯಾಗಿತ್ತು

Edited byಅವಿನಾಶ ವಗರನಾಳ | Vijaya Karnataka Web 26 Nov 2022, 1:00 pm

ಹೈಲೈಟ್ಸ್‌:


  • ವಿಶ್ವದಲ್ಲೇ ಅತಿದೊಡ್ಡ ಮೂತ್ರಕೋಶದ ಕಲ್ಲು ಹೊರ ತೆಗೆದ ಮಣಿಪಾಲ ವೈದ್ಯರು!
  • 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲು ಹೊರಕ್ಕೆ
  • ಮಹಿಳಾ ರೋಗಿ ಆರೋಗ್ಯವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Kidney Stone
ಹೊನ್ನಾವರ (ಉಡುಪಿ): ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಹೊರ ತೆಗೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ ಮಹಿಳಾ ರೋಗಿಯಲ್ಲಿ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲು ಎಂದು ಹೇಳಲಾಗಿದೆ.
60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಇತ್ತೀಚೆಗೆ ಕಸ್ತೂರಿ ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ರೋಗಿಗೆ ಸರಳ ಸಿಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶದಲ್ಲಿ ಕಲ್ಲು ಇರುವುದು ಪತ್ತೆಯಾಗಿದೆ.

ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಉಪ ವೈದ್ಯಕೀಯ ಅಧೀಕ್ಷಕ ಡಾ ಪದ್ಮರಾಜ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಡಾ ಅಂಶುಮನ್, ಡಾ ಕಾಶಿ ವಿಶ್ವನಾಥ್, ಡಾ‌ ನಿಶಾ, ಡಾ ವಿವೇಕ್ ಪೈ ಮತ್ತು ಡಾ ಕೃಷ್ಣ ಅವರ ತಂಡವು ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ನಡೆಸಿ ಕಲ್ಲನ್ನ ಹೊರ ತೆಗೆದಿದ್ದಾರೆ. ಎರಡನೇ ದಿನ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಮೂತ್ರಕೋಶದ ಕಲ್ಲುಗಳನ್ನು ಸ್ವಾಭಾವಿಕವಾಗಿ ಹೇಗೆ ನಿವಾರಿಸಬಹುದು?

ಆರೋಗ್ಯವಂತ ವಯಸ್ಕ ಮಹಿಳೆಯಲ್ಲಿ ಇಂತಹ ದೈತ್ಯ ಮೂತ್ರಕೋಶದ ಕಲ್ಲು ಪತ್ತೆಯಾಗಿದ್ದು, ನಮ್ಮ ಜ್ಞಾನದ ಪ್ರಕಾರ ಇದು ವಿಶ್ವದಲ್ಲೇ ಮೊದಲು. ಇಲ್ಲಿಯವರೆಗೆ ಅತಿದೊಡ್ಡ ಮೂತ್ರಕೋಶದ ಕಲ್ಲು ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ (528 ಗ್ರಾಂ) ಪತ್ತೆಯಾಗಿತ್ತು. ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡವನ್ನು ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಅಭಿನಂದಿಸಿದ್ದಾರೆ.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ