ಆ್ಯಪ್ನಗರ

Udupi MIT: ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರೊಫೆಸರ್‌; ವಿದ್ಯಾರ್ಥಿಯಿಂದ ಆಕ್ಷೇಪ, ಪ್ರಾಧ್ಯಾಪಕ ಅಮಾನತು

ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಪ್ರೊಪೆಸರ್‌ ಒಬ್ಬರು ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಘಟನೆ ನಡೆದಿದೆ. ಪ್ರಾಧ್ಯಾಪಕರನ್ನು ವಿದ್ಯಾರ್ಥಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್‌ ಆಗಿದ್ದು, ಪ್ರೊಪೆಸರ್‌ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆಂತರಿಕ ತನಿಖೆಗೆ ಎಂಐಟಿ ಆದೇಶಿಸಿದ್ದು, ಪ್ರಾಧ್ಯಾಪಕನನ್ನು ವಿಚಾರಣೆ ಮುಗಿಯುವವರೆಗೂ ತರಗತಿ ತೆಗೆದುಕೊಳ್ಳದಂತೆ ಅಮಾನತಿಸಲಾಗಿದೆ.

Edited byಅವಿನಾಶ ವಗರನಾಳ | Vijaya Karnataka Web 28 Nov 2022, 10:32 pm

ಹೈಲೈಟ್ಸ್‌:


  • ಎಂಐಟಿಯಲ್ಲಿ ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರೊಫೆಸರ್‌
  • ಇಂಜಿನಿಯರಿಂಗ್‌ ವಿದ್ಯಾರ್ಥಿಯಿಂದ ತೀವ್ರ ಆಕ್ಷೇಪ, ಪ್ರಾಧ್ಯಾಪಕ ಅಮಾನತು
  • ಆಂತರಿಕ ವಿಚಾರಣೆಗೆ ಆದೇಶಿಸಿದ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಉಡುಪಿ: ತರಗತಿಯಲ್ಲಿ ತನ್ನನ್ನು ಭಯೋತ್ಪಾದಕನಿಗೆ ಹೋಲಿಸಿ ಕಸಬ್ ಎಂದು ಕರೆದ ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿಯೋರ್ವ ತೀವ್ರ ಆಕ್ಷೇಪ ವ್ಯಕ್ತಪಡಿದ್ದಾನೆ. ಉಡುಪಿ ಜಿಲ್ಲೆಯ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಕ್ಯಾಂಪಸ್‌ನಲ್ಲಿ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ಪ್ರಾಧ್ಯಾಪಕರ ಹೇಳಿಕೆಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಳೆದ ಶುಕ್ರವಾರ ಈ ಘಟನೆ ನಡೆದಿದ್ದು, ಈಗಾಗಲೇ ಪ್ರಾಧ್ಯಾಪಕರನ್ನು ಅಮಾನತು ಮಾಡಿ, ತನಿಖೆಗೆ ಕಾಲೇಜು ಆಡಳಿತ ಮಂಡಳಿ ಆದೇಶಿಸಿದೆ. ವಿದ್ಯಾರ್ಥಿ ಹಂಝಾ ತನ್ನನ್ನು ಭಯೋತ್ಪಾದಕ ಎಂದು ಕರೆದ ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಅವರನ್ನು ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪ್ರಾಧ್ಯಾಪಕ ರವೀಂದ್ರನಾಥ್‌ ತರಗತಿಯಲ್ಲಿ ವಿದ್ಯಾರ್ಥಿಯ ಹೆಸರನ್ನು ಕೇಳಿದ್ದು, ವಿದ್ಯಾರ್ಥಿ ಮುಸ್ಲಿಂ ಹೆಸರು ಹೇಳಿದ ತಕ್ಷಣ ಓ ನೀನು ಕಸಬ್‌ ರೀತಿಯಾ ಎಂದು ಪ್ರಶ್ನಿಸಿದ್ದಾರೆ. 2008ರ 26/11 ಮುಂಬೈ ದಾಳಿಯಲ್ಲಿ ಸೆರೆ ಸಿಕ್ಕ ಏಕೈಕ ಉಗ್ರ ಅಜ್ಮಲ್‌ ಕಸಬ್‌ಗೆ ವಿದ್ಯಾರ್ಥಿಯನ್ನು ಹೋಲಿಸಿದ್ದಕ್ಕೆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ.

ನೀವು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಪ್ರಾಧ್ಯಾಪಕನಿಗೆ ವಿದ್ಯಾರ್ಥಿ ಪ್ರಶ್ನಿಸಿದ್ದು, ನಾನು ಹಾಸ್ಯದ ಧಾಟಿಯಲ್ಲಿ ಆ ರೀತಿ ಹೇಳಿದೆ ಎಂದು ಪ್ರಾಧ್ಯಾಪಕ ಹೇಳಿದ್ದಾನೆ. ಆಗ ವಿದ್ಯಾರ್ಥಿ 26/11 ಮುಂಬೈ ದಾಳಿ ಹಾಸ್ಯ ಘಟನೆ ಅಲ್ಲ ಮತ್ತು ಮುಸ್ಲಿಮನಾಗಿ ಈ ರೀತಿಯ ವರ್ತನೆಯನ್ನು ಪ್ರತಿನಿತ್ಯ ಅನುಭವಿಸುತ್ತಿರೋದು ಕೂಡ ಹಾಸ್ಯವಲ್ಲ ಸರ್‌. ನನ್ನ ಧರ್ಮದ ಬಗ್ಗೆ ನೀವು ಜೋಕ್‌ ಮಾಡಬೇಡಿ ಎಂದು ಹೇಳಿದ್ದಾನೆ.

Supreme Court: 'ನಿನ್ನ ಜೈಲಿಗೆ ಕಳಿಸಿದ್ರೆ ನಿಂಗೆ ಅರ್ಥ ಆಗುತ್ತೆ'; ಜಡ್ಜ್‌ ಅನ್ನು ಭಯೋತ್ಪಾದಕ ಎಂದವನಿಗೆ ಸುಪ್ರೀಂ ತರಾಟೆ
ಇದೇ ವೇಳೆ ವಿದ್ಯಾರ್ಥಿಯ ಕ್ಷಮೆಯಾಚಿಸಿದ ಪ್ರಾಧ್ಯಾಪಕರು, ನೀನು ನನ್ನ ಮಗನ ಸಮಾನ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿ, ನೀವು ನಿಮ್ಮ ಮಗನನ್ನು ಕೂಡ ಇದೇ ರೀತಿ ನಡೆಸಿಕೊಳ್ಳುತ್ತೀರಾ? ಉಗ್ರನ ಹೆಸರಿನಿಂದ ನಿಮ್ಮ ಮಗನನ್ನು ಕರೆಯುತ್ತೀರಾ? ನೀವು ಕ್ಷಮೆ ಕೇಳಿದ ಮಾತ್ರಕ್ಕೆ ನಿಮ್ಮ ಆಲೋಚನೆ ಬದಲಾಗಲು ಸಾಧ್ಯವೇ ಎಂದು ಕೇಳಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಪ್ರಾಧ್ಯಾಪಕರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕುಡಿದ ಮತ್ತಲ್ಲಿ ವಿದ್ಯಾರ್ಥಿಗಳನ್ನು ಮನಸೋ ಇಚ್ಛೆ ಥಳಿಸಿದ ಶಾಲಾ ನಿರ್ದೇಶಕ; ರಾಕ್ಷಸಿ ಕೃತ್ಯಕ್ಕೆ ವ್ಯಾಪಕ ಆಕ್ರೋಶ
ಇನ್ನು, ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ಹಂಝಾ, ಧರ್ಮದ ಹೆಸರಲ್ಲಿ ಟೀಕೆ ಎಂದಿಗೂ ಒಪ್ಪುವಂತದ್ದಲ್ಲ. ನಾನು ನನ್ನ ಪ್ರಾಧ್ಯಾಪಕರನ್ನು ಪ್ರಶ್ನಿಸುವ ವಿಡಿಯೊ ವೈರಲ್ ಆಗಿದೆ. ಉಗ್ರ ಕಸಬ್‌ ಹೆಸರಿನಿಂದ ಅವರು ನನ್ನನ್ನು ಕರೆದಿರುವುದೇ ಆಕ್ಷೇಪಕ್ಕೆ ಕಾರಣ. ಪ್ರಾಧ್ಯಾಪಕರಿಂದ ತಪ್ಪಾಗಿದೆ, ಅವರೀಗ ಕ್ಷಮೆಯಾಚಿಸಿದ್ದಾರೆ. ನನ್ನ ಫೇವರೀಟ್‌ ಟೀಚರ್‌ ಈ ರೀತಿ ಹೇಳಿದ್ದು, ಬೇಸರ ತಂದಿದೆ. ಒಂದು ಬಾರಿ ಕ್ಷಮಿಸಿ, ಇದನ್ನು ಇಲ್ಲಿಗೆ ಬಿಟ್ಟುಬಿಡಬೇಕು ಎಂದು ಹೇಳಿದ್ದಾರೆ.

ಆಂತರಿಕ ತನಿಖೆಗೆ ಎಂಐಟಿ ಸೂಚನೆ
ವಿವಾದದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಂಐಟಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಂತರಿಕ ವಿಚಾರಣೆಗೆ ಸೂಚಿಸಲಾಗಿದೆ. ವಿಚಾರಣೆ ಮುಗಿಯುವವರೆಗೂ ತರಗತಿ ತೆಗೆದುಕೊಳ್ಳದಂತೆ ಸಂಬಂಧಪಟ್ಟ ಸಹಾಯಕ ಪ್ರಾಧ್ಯಾಪಕರಿಗೆ ಸೂಚನೆ ನೀಡಿದ್ದೇವೆ. ಇಂತಹ ವರ್ತನೆಯನ್ನು ನಮ್ಮ ಕ್ಯಾಂಪಸ್‌ನಲ್ಲಿ ಸಹಿಸುವುದಿಲ್ಲ. ಧರ್ಮ, ಜಾತಿ, ಲಿಂಗ ಹಾಗು ಪ್ರಾದೇಶಿಕ ಬೇಧ ಮಾಡದೆ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕ್ಯಾಂಪಸ್ ನಮ್ಮದಾಗಿದೆ ಎಂದು ತಿಳಿಸಿದೆ.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ