ಆ್ಯಪ್ನಗರ

ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ನೋಂದಣಿ ಶುರು: ಪ್ರಚಾರ ರಥಕ್ಕೆ ಹಸಿರು ನಿಶಾನೆ

ಈ ವಿವಾಹದಲ್ಲಿ ವರನಿಗೆ 5 ಸಾವಿರ ರೂ., ವಧುವಿಗೆ 10 ಸಾವಿರ ರೂ. ಹಾಗೂ 8 ಗ್ರಾಂ ಚಿನ್ನದ ಮಾಂಗಲ್ಯ ಸರ ನೀಡಲಾಗುತ್ತದೆ. ಅಲ್ಲದೆ ವಧುವಿಗೆ ಕಂದಾಯ ಇಲಾಖೆ ವತಿಯಿಂದ ಆದರ್ಶ ವಿವಾಹ ಯೋಜನೆಯ 10 ಸಾವಿರ ರೂ. ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುತ್ತದೆ.

Vijaya Karnataka Web 13 Feb 2020, 7:32 pm
ಬೈಂದೂರು (ಉಡುಪಿ): ರಾಜ್ಯ ಸರಕಾರದ ಬಹುನಿರೀಕ್ಷಿತ ಸಪ್ತಪದಿ ಸಾಮೂಹಿಕ ಸರಳ ವಿವಾಹ ಸಮಾರಂಭ ಏಪ್ರಿಲ್ 26ರಂದು ನಡೆಯಲಿದ್ದು, ಈಗಾಗಲೇ ಸಾವಿರಕ್ಕೂ ಅಧಿಕ ಜೋಡಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಮಾರ್ಚ್ 27ರವರೆಗೆ ನೋಂದಣಿ ಮಾಡಿಕೊಳ್ಳಲು ಕಾಲಾವಕಾಶವಿರುವುದರಿಂದ ಗರಿಷ್ಠ ಸಂಖ್ಯೆಯಲ್ಲಿ ಜೋಡಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Vijaya Karnataka Web mass marriage
ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ನೋಂದಣಿ ಶುರು: ಪ್ರಚಾರ ರಥಕ್ಕೆ ಹಸಿರು ನಿಶಾನೆ


ಅಕ್ಷಯ ತದಿಗೆಯಂದು ಬಡ ಹಿಂದೂ ವಧು-ವರರಿಗೆ ಸರ್ಕಾರದಿಂದಲೇ 'ಸಪ್ತಪದಿ' ಭಾಗ್ಯ..!

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಸಪ್ತಪದಿ ಸಾಮೂಹಿಕ ಸರಳ ವಿವಾಹದ ಪ್ರಚಾರದ ರಥಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿಈಗಾಗಲೇ 26ಕ್ಕೂ ಅಧಿಕ ಜೋಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ 100ಕ್ಕೂ ಅಧಿಕ ಜೋಡಿ ನೊಂದಾಯಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ ಎಂದರು. ರಾಜ್ಯದ ಸ್ವಾಮೀಜಿಗಳು, ಸಾಧು ಸಂತರು, ಗಣ್ಯರು, ಶಾಸಕರು, ಸಂಸದರು ಸೇರಿದಂತೆ ಪಕ್ಷ ಬೇಧ ಮರೆತು ಎಲ್ಲಾ ಜನಪ್ರತಿನಿಧಿಗಳ ಸಹಕಾರದಿಂದ ಈ ಯೋಜನೆಯ ಬಗ್ಗೆ ಜನಾಂದೋಲನ ರೂಪಿಸಿ ಯುವಜನತೆ ಹೆಚ್ಚಾಗಿ ಸರಳವಿವಾಹದ ಕಡೆ ಮುಖ ಮಾಡುವಂತೆ ಅರಿವು ಮೂಡಿಸುವ ಕೆಲಸಮಾಡಲಾಗುವುದು ಎಂದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬೆಂಬಲ ಸೂಚಿಸಿದ್ದಾರೆ. ಇನ್ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ ಹಾಗೂ ಚಿತ್ರನಟ ಯಶ್‌ ಈ ಯೋಜನೆ ರಾಯಭಾರಿಗಳಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸಾಮೂಹಿಕ ಸರಳ ವಿವಾಹದ ಬಗ್ಗೆ ವಿಚಾರ ಸಂಕಿರಣ ಏರ್ಪಡಿಸಲಾಗುತ್ತದೆ. ಈ ವಿವಾಹದಲ್ಲಿ ವರನಿಗೆ 5 ಸಾವಿರ ರೂ., ವಧುವಿಗೆ 10 ಸಾವಿರ ರೂ. ಹಾಗೂ 8 ಗ್ರಾಂ ಚಿನ್ನದ ಮಾಂಗಲ್ಯ ಸರ ನೀಡಲಾಗುತ್ತದೆ. ಅಲ್ಲದೆ ವಧುವಿಗೆ ಕಂದಾಯ ಇಲಾಖೆ ವತಿಯಿಂದ ಆದರ್ಶ ವಿವಾಹ ಯೋಜನೆಯ 10 ಸಾವಿರ ರೂ. ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುತ್ತದೆ. ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜಕಲ್ಯಾಣ ಇಲಾಖೆಯಿಂದ 50 ಸಾವಿರ ರೂ. ನೀಡಲಾಗುತ್ತದೆ. ಈ ವಿವಾಹದಲ್ಲಿ ವಧು ವರರ ಬಂಧುಗಳ ಕಡೆಯಿಂದ ಎಷ್ಟೇ ಜನರು ಪಾಲ್ಗೊಂಡರೂ ಅವರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಬಡ ವಧು-ವರರಿಗೆ ಸರ್ಕಾರದಿಂದಲೇ ವಿವಾಹ ಭಾಗ್ಯ..! 'ಸಪ್ತಪದಿ' ಯೋಜನೆ ಪ್ರಚಾರಕ್ಕೆ ರಥಯಾತ್ರೆ..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ