ಮಹಾಮಳೆ: ಪರಿಹಾರ ಕಾರ್ಯ ಪರಿಶೀಲನಾ ಸಭೆ ನಡೆಸಿದ ಆರ್. ಅಶೋಕ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಅವಘಡ ಸಂಭವಿಸಿದ್ದು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಪರಿಹಾರ ಕಾರ್ಯ ಪರಿಶೀಲನೆ ಸಭೆಯನ್ನು ಸಚಿವ ಆರ್. ಅಶೋಕ್ ನಡೆಸಿದರು.
Vijaya Karnataka Web 7 Aug 2020, 1:51 pm
ಉಡುಪಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಆತಂಕ ಸೃಷ್ಟಿಸಿದೆ. ಅದರಲ್ಲೂ ಕೊಡಗು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಪರಿಹಾರ ಕಾರ್ಯಗಳ ಪರಿಶೀಲನೆ ಸಭೆಯನ್ನು ನಡೆಸಿದರು.
ಶುಕ್ರವಾರ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಆರ್. ಅಶೋಕ್ ಸರ್ಕಾರದಿಂದ ಒದಗಿಸಬಹುದಾದ ಎಲ್ಲಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿಯ ಜಿಲ್ಲಾಧಿಕಾರಿಗಳು, ಜಿಲ್ಲೆಯ ಶಾಸಕರುಗಳು ಭಾಗಿಯಾಗಿದ್ದರು.
ಕೊಡಗು ಮಹಾಮಳೆ: 2018 ರ ದುರಂತ ಮರುಕಳಿಸುವ ಭೀತಿ!
ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಹಲವು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಪ್ರವಾಹದ ಮಟ್ಟದಲ್ಲಿ ಏರಿಕೆಯಾಗುತ್ತಿರುವುದರಿಂದ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ವರ್ಷಧಾರೆ: ಎಲ್ಲ ನದಿ ಪಾತ್ರಗಳಲ್ಲೂ ನೆರೆ ಹಾವಳಿ
ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಜಿಲ್ಲಾ ಉಸ್ತುವಾಗಿ ಸಚಿವರುಗಳಿಗೆ ಕಡ್ಡಾಯವಾಗಿ ತಮ್ಮ ಜಿಲ್ಲೆಗಳಲ್ಲಿ ಇರುವಂತೆ ಸೂಚನೆ ನೀಡಿದ್ದಾರೆ. ಸಮಯ ಸಂದರ್ಭಕ್ಕೆ ತಕ್ಕಂತೆ ಸೂಕ್ತ ನಿರ್ಧಾರಗಳನ್ನು ಕೈಗೊಂಡು ಪ್ರವಾಹ ಪರಿಸ್ಥಿತಿ ನಿಭಾಯಿಸುವಂತೆ ಸೂಚನೆ ನೀಡಿದ್ದಾರೆ.
ಮಳೆ ಇನ್ನು ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಪರಿಣಾಮ ಜನರಲ್ಲೂ ಆತಂಕ ಮನೆಮಾಡಿದೆ. ಈಗಾಗಲೇ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು ಅಪಾಯಕ್ಕೆ ಸಿಲುಕಿರುವ ಜನರನ್ನು ಸುರಕ್ಷತಾ ಸ್ಥಳಗಳಿಗೆ ಸಾಗಿಸಲಾಗುತ್ತಿದೆ.
ಶುಕ್ರವಾರ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಆರ್. ಅಶೋಕ್ ಸರ್ಕಾರದಿಂದ ಒದಗಿಸಬಹುದಾದ ಎಲ್ಲಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿಯ ಜಿಲ್ಲಾಧಿಕಾರಿಗಳು, ಜಿಲ್ಲೆಯ ಶಾಸಕರುಗಳು ಭಾಗಿಯಾಗಿದ್ದರು.
ಕೊಡಗು ಮಹಾಮಳೆ: 2018 ರ ದುರಂತ ಮರುಕಳಿಸುವ ಭೀತಿ!
ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಹಲವು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಪ್ರವಾಹದ ಮಟ್ಟದಲ್ಲಿ ಏರಿಕೆಯಾಗುತ್ತಿರುವುದರಿಂದ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ವರ್ಷಧಾರೆ: ಎಲ್ಲ ನದಿ ಪಾತ್ರಗಳಲ್ಲೂ ನೆರೆ ಹಾವಳಿ
ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಜಿಲ್ಲಾ ಉಸ್ತುವಾಗಿ ಸಚಿವರುಗಳಿಗೆ ಕಡ್ಡಾಯವಾಗಿ ತಮ್ಮ ಜಿಲ್ಲೆಗಳಲ್ಲಿ ಇರುವಂತೆ ಸೂಚನೆ ನೀಡಿದ್ದಾರೆ. ಸಮಯ ಸಂದರ್ಭಕ್ಕೆ ತಕ್ಕಂತೆ ಸೂಕ್ತ ನಿರ್ಧಾರಗಳನ್ನು ಕೈಗೊಂಡು ಪ್ರವಾಹ ಪರಿಸ್ಥಿತಿ ನಿಭಾಯಿಸುವಂತೆ ಸೂಚನೆ ನೀಡಿದ್ದಾರೆ.
ಮಳೆ ಇನ್ನು ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಪರಿಣಾಮ ಜನರಲ್ಲೂ ಆತಂಕ ಮನೆಮಾಡಿದೆ. ಈಗಾಗಲೇ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು ಅಪಾಯಕ್ಕೆ ಸಿಲುಕಿರುವ ಜನರನ್ನು ಸುರಕ್ಷತಾ ಸ್ಥಳಗಳಿಗೆ ಸಾಗಿಸಲಾಗುತ್ತಿದೆ.