ಆ್ಯಪ್ನಗರ

ಮಂಗನ ಕಾಯಿಲೆ: 27 ಮಂದಿಗೆ ಚಿಕಿತ್ಸೆ ಮುಂದುವರಿಕೆ

ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ 92 ಮಂದಿ ಈ ತನಕ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka 18 Jan 2019, 5:00 am
ಉಡುಪಿ: ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ 92 ಮಂದಿ ಈ ತನಕ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
Vijaya Karnataka Web monkey disease treatment for 27 people
ಮಂಗನ ಕಾಯಿಲೆ: 27 ಮಂದಿಗೆ ಚಿಕಿತ್ಸೆ ಮುಂದುವರಿಕೆ


31 ಮಂದಿಗೆ ಮಂಗನ ಕಾಯಿಲೆ ಇರುವುದು ಹಾಗೂ 51 ಜನರಿಗೆ ಮಂಗನ ಕಾಯಿಲೆ ಇಲ್ಲದಿರುವುದು ದೃಢಪಟ್ಟಿದೆ. 10 ಮಂದಿಯ ವೈದ್ಯಕೀಯ ವರದಿ ಬರಲು ಬಾಕಿಯಿದೆ.

65 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. 27 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಂಗನ ಕಾಯಿಲೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಕಳ ತಾಲೂಕಿನಲ್ಲಿ 10 ಮಂಗ ಸಾವು

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಈವರೆಗೆ ಒಟ್ಟು 10 ಮಂಗಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಹಿರ್ಗಾನ-1, ಹೆಬ್ರಿ-1, ಪುರಸಭೆ ವ್ಯಾಪ್ತಿ-1, ಮಾಳ-1, ಕುಕ್ಕುಂದೂರು-2 ಮತ್ತು ಈದು-1 ಮತ್ತು ನಿಟ್ಟೆ-2 ಮಂಗ ಮೃತಪಟ್ಟಿವೆ.

ಮೃತಪಟ್ಟ ಮಂಗಗಳ ಮೃತದೇಹಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಅಂಗಾಂಗಗಳ ಮಾದರಿಯನ್ನು ಶಿವಮೊಗ್ಗ ಮತ್ತು ಮಣಿಪಾಲಕ್ಕೆ ಕಳುಹಿಸಲಾಗಿದೆ. ಜ್ವರದ ಸಮೀಕ್ಷೆ ತೀವ್ರ ತರದಲ್ಲಿ ನಡೆಯುತ್ತಿದೆ. ಶಂಕಿತ ಮಂಗನ ಕಾಯಿಲೆ ಪ್ರಕರಣಗಳು ಈವರೆಗೆ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ