ಆ್ಯಪ್ನಗರ

ಮಂಗನ ಕಾಯಿಲೆ: ಗ್ರಾಮಾಂತರದಲ್ಲಿ ಮುಂಜಾಗ್ರತಾ ಕ್ರಮ

ಕುಂದಾಪುರ ತಾಲೂಕಿನಲ್ಲಿ ಮಂಗಗಳು ಪ್ಲೇವಿ ವೈರಸ್‌ನಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

Vijaya Karnataka 19 Jan 2019, 5:00 am
ಕುಂದಾಪುರ(ಉಡುಪಿ): ಕುಂದಾಪುರ ತಾಲೂಕಿನಲ್ಲಿ ಮಂಗಗಳು ಪ್ಲೇವಿ ವೈರಸ್‌ನಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
Vijaya Karnataka Web monkey sickness
ಮಂಗನ ಕಾಯಿಲೆ: ಗ್ರಾಮಾಂತರದಲ್ಲಿ ಮುಂಜಾಗ್ರತಾ ಕ್ರಮ


ಕಳೆದ 10 ದಿನಗಳಿಂದ ನಿರಂತರ ಮಂಗಗಳ ಸಾವು ಬೆಳಕಿಗೆ ಬಂದಿದ್ದು, ಕಳೆದೆರಡು ದಿನಗಳಿಂದ ಯಾವುದೇ ಪ್ರಕರಣ ವರದಿಯಾಗಿಲ್ಲ. ಈವರೆಗೆ 21 ಮಂಗಗಳು ಮೃತಪಟ್ಟಿವೆ. ಪ್ಲೇವಿ ವೈರಸ್‌ ಬಾಧಿತ ಉಣ್ಣೆ ಹುಳಗಳಿಂದ ಮನುಷ್ಯರಿಗೆ ಇದು ಹಬ್ಬುವ ಸಾಧ್ಯತೆ ಇರುವುದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು, ಗ್ರಾಪಂ, ಆರೋಗ್ಯ ಇಲಾಖೆ, ಅಂಗನವಾಡಿ, ಅರಣ್ಯ ಇಲಾಖೆ ಸಿಬ್ಬಂದಿ, ಪಶು ಇಲಾಖೆ ವೈದ್ಯರ ಸಹಿತ ಸರ್ವರ ಸಹಕಾರದೊಂದಿಗೆ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ.

ಕಾಡಿನಂಚಿನವರು ಕಾಡಿಗೆ ಹೋಗುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿ ಹೇಳಲಾಗುತ್ತಿದೆ. ಈವರೆಗೆ ಮಂಗನ ಕಾಯಿಲೆಯಿಂದ ಮನುಷ್ಯ ಬಾಧಿತನಾಗಿರುವುದು ವರದಿಯಾಗಿಲ್ಲ. ಮಂಗನ ಕಾಯಿಲೆ ತಡೆಗೆ ಬೇಕಾದ ಎಲ್ಲ ರೀತಿಯ ಉಪಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.


33 ಜನರಿಗೆ ಚಿಕಿತ್ಸೆ

ಉಡುಪಿ: ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ 98 ಜನರು ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

34 ಜನರಿಗೆ ಮಂಗನ ಕಾಯಿಲೆ ಇರುವುದು ಹಾಗೂ 51 ಮಂದಿಗೆ ಮಂಗನ ಕಾಯಿಲೆ ಇಲ್ಲದಿರುವುದು ದೃಢಪಟ್ಟಿದೆ. 13 ಮಂದಿಯ ವೈದ್ಯಕೀಯ ವರದಿ ಬರಲು ಬಾಕಿಯಿದೆ.

65 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. 33 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಂಗನ ಕಾಯಿಲೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ