ಆ್ಯಪ್ನಗರ

ಬಂಟಕಲ್‌ ಕಾಲೇಜು ರಾಷ್ಟ್ರೀಯ ವಿದ್ಯಾರ್ಥಿ ವಿಚಾರ ಸಂಕಿರಣ

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸಮ್ಮೇಳನ 'ಎನ್‌ಸಿಇಟಿಎಸ್‌ಇ-2019' ಅಂಗವಾಗಿ ಗುರುವಾರ ವಿಚಾರ ಸಂಕಿರಣ ನಡೆಯಿತು.

Vijaya Karnataka 26 Apr 2019, 5:00 am
ಕಟಪಾಡಿ : ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸಮ್ಮೇಳನ 'ಎನ್‌ಸಿಇಟಿಎಸ್‌ಇ-2019' ಅಂಗವಾಗಿ ಗುರುವಾರ ವಿಚಾರ ಸಂಕಿರಣ ನಡೆಯಿತು.
Vijaya Karnataka Web bantakal


ಕಾಲೇಜು ಪ್ರಿನ್ಸಿಪಾಲ್‌ ಪ್ರೊ.ಡಾ.ತಿರುಮಲೇಶ್ವರ ಭಟ್‌ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಂಶೋಧನೆಯ ಅಗತ್ಯ ಹಾಗೂ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸುವ ಮಹತ್ವ ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸುಮಾರು 30ಕ್ಕೂ ಮಿಕ್ಕಿ ಪ್ರಬಂಧಗಳನ್ನು ಮಂಡಿಸಿದರು.

ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಸುರತ್ಕಲ್‌ ಎನ್‌ಐಟಿಕೆಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗ ಪ್ರಾಧ್ಯಾಪಕ ಡಾ.ಕಟ್ಟಾ ವೆಂಕಟರಮಣ, ಭೂಕಂಪದಿಂದ ಆಗುವ ಅನಾಹುತಗಳನ್ನು ಕಡಿಮೆ ಮಾಡುವ ಹಲವಾರು ವಿಧಾನಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾಲೇಜು ಪ್ರಿನ್ಸಿಪಾಲ್‌, ಸಮ್ಮೇಳನದ ಆಯೋಜನಾ ಸಮಿತಿ ಮುಖ್ಯಸ್ಥರಾದ ಡಾ.ವಾಸುದೇವ ಹಾಗೂ ಆನಂದ್‌ ವಿ.ಆರ್‌., ಸಮ್ಮೇಳನ ಆಯೋಜಕರಾದ ನಾಗರಾಜ್‌ ಭಟ್‌, ಸುಜಯ್‌ ರಾಘವೇಂದ್ರ, ನಾನಾ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ