ಆ್ಯಪ್ನಗರ

ಧಾರ್ಮಿಕ ಶ್ರದ್ಧಾ ಕೇಂದ್ರದಿಂದ ಊರಿನ ಅಭಿವೃದ್ಧಿ

ದೇವಾಲಯ ಅಭಿವೃದ್ಧಿ ಆದರೆ ಊರಿನ ಅಭಿವೃದ್ಧಿ ಆದಂತೆ ಎಂದು ಶಾಸಕ ರಘುಪತಿ ಭಟ್‌ ಹೇಳಿದರು.

Vijaya Karnataka 11 Feb 2019, 5:00 am
ಮಂದಾರ್ತಿ: ದೇವಾಲಯ ಅಭಿವೃದ್ಧಿ ಆದರೆ ಊರಿನ ಅಭಿವೃದ್ಧಿ ಆದಂತೆ ಎಂದು ಶಾಸಕ ರಘುಪತಿ ಭಟ್‌ ಹೇಳಿದರು.
Vijaya Karnataka Web dharmika


ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ನೂತನ ಶ್ರೀ ವೀರಭದ್ರ ದೇವರ ಬಿಂಬ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶಾಭಿಷೇಕದ ಸಂದರ್ಭ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇವಾಲಯದ ಜೀಣೋದ್ಧಾರ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಂಡು ದೇವಳದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್‌.ರಘುರಾಮ ಮಧ್ಯಸ್ಥ ಉದ್ಘಾಟಿಸಿದರು. ಈ ಸಂದರ್ಭ ಶ್ರೀ ವೀರಭದ್ರ ಕಾಷ್ಠಶಿಲ್ಪ ಕೆತ್ತಿದ ಶ್ರೀಧರ ಗುಡಿಗಾರ ಮತ್ತು ಪ್ರವೀಣ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಸುಧೀರ್‌ ಕುಮಾರ್‌ ಶೆಟ್ಟಿ, ರಮೇಶ್‌ ಪೂಜಾರಿ, ಸದಾಶಿವ ದೇವಾಡಿಗ, ಹೇಮಾ.ವಿ.ಬಾಸ್ರಿ, ಮಲ್ಲಿಕಾ ಎಸ್‌. ಶೆಟ್ಟಿ, ಸುರೇಂದ್ರ ಸುವರ್ಣ ರಮೇಶ್‌ ನಾಯ್ಕ್‌, ಕಾರ್ಯನಿರ್ವಹಣಾಕಾರಿ ಪ್ರಶಾಂತ್‌ ಶೆಟ್ಟಿ, ಅರ್ಚಕ ವೃಂದದವರು, ಉಪಾದಿವಂತರು, ಸಿಬಂದಿ ವರ್ಗದವರು, ಭಕ್ತಾದಿಗಳು ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುಧೀರ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಮೇಶ್‌ ರಾವ್‌ ನಿರೂಪಿಸಿ, ವಂದಿಸಿದರು. ಬೆಳಗ್ಗೆ ನೂತನ ಶ್ರೀ ವೀರಭದ್ರ ದೇವರ ಬಿಂಬ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶಾಭಿಷೇಕ ಮತ್ತು ಮಹಾಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗ ಪೂಜೆ, ಡಮರು ಸೇವೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ