ಆ್ಯಪ್ನಗರ

ಕೊಂಕಣಿ ಗೌಡ ಸಾರಸ್ವತ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬೇಡಿಕೆ

ಮರಾಠ, ಲಿಂಗಾಯತ, ಒಕ್ಕಲಿಗರು, ಕ್ರೈಸ್ತರು ಆಯ್ತು ಇದೀಗ ಕೊಂಕಣಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯವು ನಿಗಮ ಮಂಡಳಿ ಸ್ಥಾಪನೆ ಮಾಡಬೇಕು ಹಾಗೂ ಮೀಸಲಾತಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

Vijaya Karnataka Web 19 Nov 2020, 11:13 am
ಉಡುಪಿ: ಕೊಂಕಣಿ ಮಾತೃಭಾಷಿಕ ಗೌಡ ಸಾರಸ್ವತ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಘುವೀರ ಶೆಣೈ ಅವರು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
Vijaya Karnataka Web Bs Yediyurappa

ಮರಾಠ, ಲಿಂಗಾಯತ ಆಯ್ತು ಇದೀಗ ಒಕ್ಕಲಿಗರ ಸರದಿ! ಮೀಸಲಾತಿ, ಅಭಿವೃದ್ದಿ ನಿಗಮ ರಚನೆಗೆ ಬೇಡಿಕೆ

ಭಾಷಾ ಅಲ್ಪಸಂಖ್ಯಾತ ಕೊಂಕಣಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯವು ವ್ಯಾಪಾರ ಸಹಿತ ಖಾಸಗಿ ರಂಗದ ಉದ್ಯೋಗದಲ್ಲಿ ತೊಡಗಿದ್ದರೂ ಕೊರೊನಾ ಹಿನ್ನೆಲೆಯಲ್ಲಿ ಉದ್ಯೋಗಾವಕಾಶವಿಲ್ಲದೆ ಬದುಕು ದುಸ್ತರವಾಗಿದೆ. 20ರಿಂದ 30ಲಕ್ಷ ಜನಸಂಖ್ಯೆ ಹೊಂದಿದ ಸಮಾಜವು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿಯಿಲ್ಲದೆ ಕೊರಗುವಂತಾಗಿದೆ.
ಕ್ರೈಸ್ತ ಅಭಿವೃದ್ಧಿ ನಿಗಮ ಮರುಸ್ಥಾಪನೆ ಮಾಡದಿದ್ದರೆ ಬೀದಿಗಿಳಿದು ಹೋರಾಟ: ಐವನ್‌ ಡಿಸೋಜ ಎಚ್ಚರಿಕೆ!

ಕನಿಷ್ಠ ಪಕ್ಷ ಜಾತಿ ಸರ್ಟಿಫಿಕೇಟ್‌ ಕೂಡ ಸಿಗದಂತಾಗಿದ್ದು ರಾಜ್ಯ ಸರಕಾರ ಸ್ಥಾಪಿಸಿದ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲೂ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಪ್ರಾತಿನಿಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಕೊಂಕಣಿ ಗೌಡ ಸಾರಸ್ವತ ಬ್ರಾಹ್ಮಣ ಅಭಿವೃದ್ಧಿ ನಿಗಮದ ಸ್ಥಾಪನೆ ಮೂಲಕ ಸಾಮಾಜಿಕ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಮರಾಠ ಅಭಿವೃದ್ದಿ ಪ್ರಾಧಿಕಾರ : ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ! ಸಿದ್ದರಾಮಯ್ಯ ಕಿಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ