ಆ್ಯಪ್ನಗರ

ಉಡುಪಿಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ ₹1,800 ಬಾಡಿಗೆ ನಿಗದಿ

ಭತ್ತದ ಕಟಾವು ಸನ್ನಿಹಿತವಾಗಿದ್ದು, ಸರಕಾರದ ನೆರವಿನೊಂದಿಗೆ ಸ್ಥಾಪಿಸಲ್ಪಟ್ಟ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕರ್ತಾರ್‌ ಮಾದರಿ ಕಂಬೈನ್ಡ್‌ ಹಾರ್ವೆಸ್ಟರ್‌ನ ಕಟಾವಿಗೆ ಜಿಲ್ಲಾ ಸಮಿತಿುಂದ ಪ್ರತಿ ಗಂಟೆಗೆ 1,800 ರೂ. ಬಾಡಿಗೆ ದರವನ್ನು ನಿಗದಿ ಪಡಿಸಲಾಗಿದೆ.

Vijaya Karnataka 18 Oct 2021, 10:01 pm

ಹೈಲೈಟ್ಸ್‌:

  • ಅಕಾಲಿಕ ಮಳೆಯಿಂದ ಭತ್ತದ ಕೃಷಿಗೆ ನಷ್ಟವುಂಟಾಗಿಲ್ಲ ಎಂದ ಕೃಷಿ ಇಲಾಖೆ
  • ಭತ್ತದ ಕಟಾವು ಸನ್ನಿಹಿತವಾಗಿದ್ದು, ಕಂಬೈನ್ಡ್‌ ಹಾರ್ವೆಸ್ಟರ್‌ನ ಕಟಾವಿಗೆ ದರ ನಿಗದಿ
  • ಪ್ರತಿ ಗಂಟೆಗೆ 1,800 ರೂ. ಬಾಡಿಗೆ ದರ ನಿಗದಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web paddy harvesting
ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಸನ್ನಿಹಿತವಾಗಿದ್ದು, ಸರಕಾರದ ನೆರವಿನೊಂದಿಗೆ ಸ್ಥಾಪಿಸಲ್ಪಟ್ಟ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕರ್ತಾರ್‌ ಮಾದರಿ ಕಂಬೈನ್ಡ್‌ ಹಾರ್ವೆಸ್ಟರ್‌ನ ಕಟಾವಿಗೆ ಜಿಲ್ಲಾ ಸಮಿತಿಯಿಂದ ಪ್ರತಿ ಗಂಟೆಗೆ 1,800 ರೂ. ಬಾಡಿಗೆ ದರವನ್ನು ನಿಗದಿ ಪಡಿಸಲಾಗಿದೆ.
ಪ್ರಸ್ತುತ ಹೊರ ಜಿಲ್ಲೆಹಾಗೂ ರಾಜ್ಯಗಳಿಂದ ಕಂಬೈನ್ಡ್‌ ಹಾರ್ವೆಸ್ಟರ್‌ಗಳು ಜಿಲ್ಲೆಗೆ ಆಗಮಿಸುತ್ತಿವೆ. ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಇದೀಗ ಹಿಂಗಾರು ಮಳೆ ಆರಂಭವಾಗಿರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್‌ ಹಾರ್ವೆಸ್ಟರ್‌ಗಳನ್ನು ಅವಲಂಬಿಸುವಂತಾಗಿದೆ.

ಯುಪಿಸಿಎಲ್‌ನಲ್ಲಿ 2 ತಿಂಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತ! ಹೀಗೇ ಆದರೆ ಕತ್ತಲಲ್ಲೇ ದೀಪಾವಳಿ ಹಬ್ಬ

ಪ್ರಸ್ತುತ ಈ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್‌ ಹಾರ್ವೆಸ್ಟರ್‌ ಮಾಲೀಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್‌ ತಿಳಿಸಿದ್ದಾರೆ.

ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 8 ಕಟಾವು ಯಂತ್ರಗಳು ಲಭ್ಯ : ಪ್ರಸ್ತುತ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಕೇವಲ 8 ಕಟಾವು ಯಂತ್ರಗಳು ಮಾತ್ರ ಲಭ್ಯವಿದ್ದು, ಇದರಿಂದಾಗಿ ಜಿಲ್ಲೆಯ ರೈತರ ಬೇಡಿಕೆಯನ್ನು ಪೂರೈಸಲು ಖಾಸಗಿಯಾಗಿ ಬರುವ ಕಟಾವು ಯಂತ್ರಗಳನ್ನು ಅವಲಂಬಿಸುವಂತಾಗಿದೆ.

ಜಿಲ್ಲೆಯಲ್ಲಿ ಭತ್ತದ ಕೃಷಿಗೆ ಹಾನಿಯಾಗಿಲ್ಲ: ಪ್ರಸ್ತುತ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಫಸಲು ಕಟಾವು ಕಾರ್ಯ ಆರಂಭವಾಗಿದೆ. ಇದೀಗ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಒಂದಷ್ಟು ಸಮಸ್ಯೆಗಳು ಉಂಟಾಗಿರುವುದು ನಿಜವಾದರೂ, ರೈತರಿಗೆ ಭಾರಿ ಪ್ರಮಾಣದಲ್ಲಿ ನಷ್ಟವುಂಟಾಗಿರುವ ಬಗ್ಗೆ ವರದಿಯಾಗಿಲ್ಲಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇ ಗೌಡ ಅವರು ವಿಕಗೆ ತಿಳಿಸಿದ್ದಾರೆ.

ಖಾಸಗಿ ಕಟಾವು ಯಂತ್ರ ಮಾಲಕರು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಕಾರ್ಯ ನಿರ್ವಹಿಸಬೇಕು. ಕೃಷಿ ಯಂತ್ರಧಾರೆ ಕೇಂದ್ರದ ಬಾಡಿಗೆ ದರವನ್ನು ಮಾನದಂಡವಾಗಿಟ್ಟುಕೊಂಡು ರೈತರೊಂದಿಗೆ ಕಟಾವು ದರದ ಬಗ್ಗೆ ಚರ್ಚಿಸಿ, ನ್ಯಾಯೋಚಿತ ದರವನ್ನು ನಿಗದಿ ಪಡಿಸಬೇಕು.
- ಎಂ.ಕೂರ್ಮಾ ರಾವ್‌ ,ಜಿಲ್ಲಾಧಿಕಾರಿ, ಉಡುಪಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ