ಆ್ಯಪ್ನಗರ

ಜಗದ್ಗುರು ಶ್ರೀಕೃಷ್ಣನ ಪಾದಂಗಳ ಸೇರಿದ ವಿಶ್ವಗುರು ಶ್ರೀ ವಿಶ್ವೇಶ್ವರ ತೀರ್ಥರು

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಕೃಷ್ಣೈಕ್ಯರಾದ್ದಾರೆ. ಭಾನುವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿಸೆಂಬರ್ 20 ರಂದು ಬೆಳಗ್ಗಿನ ಜಾವ ಉಡುಪಿ ಜಿಲ್ಲೆಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

Vijaya Karnataka Web 29 Dec 2019, 9:24 am
ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಕೃಷ್ಣೈಕ್ಯರಾದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿಸೆಂಬರ್ 20 ರಂದು ಬೆಳಗ್ಗಿನ ಜಾವ ಉಡುಪಿ ಜಿಲ್ಲೆಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ಸೋಂಕು ತಗುಲಿದ್ದ ಶ್ರೀಗಳಿಗೆ ನುರಿತ ತಜ್ಞೆ ಡಾ. ಸುಧಾ ವಿದ್ಯಾಸಾಗರ್ ನೇತೃತ್ವದ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪೇಜಾವರ ಶ್ರೀಗಳು ಭಾನುವಾರ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕೃಷ್ಣೈಕ್ಯರಾಗಿದ್ದಾರೆ. 88 ವರ್ಷದ ಪೇಜಾವರ ಶ್ರೀಗಳ ಅಗಲಿಕೆ ರಾಜ್ಯವನ್ನೇ ದುಖಃತಪ್ತರನ್ನಾಗಿಸಿದೆ.
Vijaya Karnataka Web pejawar mutt seer vishwesha theertha swami died at 88 in udupi shri krishna mutt
ಜಗದ್ಗುರು ಶ್ರೀಕೃಷ್ಣನ ಪಾದಂಗಳ ಸೇರಿದ ವಿಶ್ವಗುರು ಶ್ರೀ ವಿಶ್ವೇಶ್ವರ ತೀರ್ಥರು


ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳಿಗೆ ವೆಂಟಿಲೇಟರ್‌ನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಸಲಾಗಿತ್ತು. ಆರಂಭದ ದಿನಗಳಲ್ಲಿ ಚಿಕಿತ್ಸೆಗೆ ಸ್ವಲ್ಪ ಸ್ಪಂದಿಸುತ್ತಿದ್ದರೂ ದಿನದಿಂದ ದಿನಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರಲಿಲ್ಲ. ಡಿಸೆಂಬರ್ 18 ಶನಿವಾರ ರಾತ್ರಿ ಶ್ರೀಗಳ ಆರೋಗ್ಯ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆ 6.55 ಕ್ಕೆ ಮಣಿಪಾಲ ಆಸ್ಪತ್ರೆಯಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ವಿಶೇಷ ಆಂಬ್ಯುಲೆನ್ಸ್ ಮೂಲಕ ಕರೆತರಲಾಯಿತು. ಮಠದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು.

ಈ ನಡುವೆ ಶ್ರೀಗಳ ಆರೋಗ್ಯ ಸುಧಾರಣೆಗೆ ಮಠದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಹಾಗೂ ವಿಶೇಷ ಪೂಜೆ ಪುರಸ್ಕಾರಗಳನ್ನು ನಡೆಸಲಾಗಿತ್ತು. ಲಕ್ಷಾಂತರ ಭಕ್ತರು ಸ್ವಾಮೀಜಿ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಭಾನುವಾರ 9.20 ಗಂಟೆಗೆ ಪೇಜಾವರ ಶ್ರೀಗಳು ನಿಧನರಾದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ