ಆ್ಯಪ್ನಗರ

ಮೀನುಗಾರರ ನಿಯೋಗದಿಂದ ಉಮೇಶ್‌ ಪೋಚಪ್ಪನ್‌ ಭೇಟಿ

ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ನಿಗಮ(ಎನ್‌ಎಫ್‌ಡಿಬಿ) ಸದಸ್ಯ ಉಮೇಶ್‌ ಪೋಚಪ್ಪನ್‌ ಶನಿವಾರ ಉಡುಪಿಗೆ ಆಗಮಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ ನೇತೃತ್ವದಲ್ಲಿ ಮೀನುಗಾರರ ನಿಯೋಗ ಭೇಟಿಯಾಗಿ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದರು.

Vijaya Karnataka 14 Jul 2019, 5:00 am
ಉಡುಪಿ: ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ನಿಗಮ(ಎನ್‌ಎಫ್‌ಡಿಬಿ) ಸದಸ್ಯ ಉಮೇಶ್‌ ಪೋಚಪ್ಪನ್‌ ಶನಿವಾರ ಉಡುಪಿಗೆ ಆಗಮಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ ನೇತೃತ್ವದಲ್ಲಿ ಮೀನುಗಾರರ ನಿಯೋಗ ಭೇಟಿಯಾಗಿ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದರು.
Vijaya Karnataka Web pochappan


ಮೀನುಗಾರಿಕೆಗೆ ಬಳಸುವ ಡೀಸೆಲ್‌ ಮೇಲಿನ ರಸ್ತೆ ತೆರಿಗೆ ವಿನಾಯಿತಿ, ಬೋಟ್‌ ಮರು ನಿರ್ಮಾಣಕ್ಕೆ ಸಹಾಯಧನ, ನಾಡದೋಣಿಗಳಿಗೆ ನೀಡುವ ಸೀಮೆಎಣ್ಣೆ ಸಮರ್ಪಕ ಸರಬರಾಜು, ಕೃಷಿಕರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಮೀನುಗಾರಿಕೆಗೂ ವಿಸ್ತರಣೆ, ಸಿಆರ್‌ಝಡ್‌ ನಿಯಮ ಸಡಿಲೀಕರಣ, ಬಂದರು ಅಭಿವೃದ್ಧಿಗೆ ಕೇಂದ್ರ ಸರಕಾರದ ಶೇ.100 ನೇರ ಅನುದಾನ ಹಾಗೂ ಮೀನುಗಾರಿಕೆಯ ಅಭಿವೃದ್ಧಿಯ ದೃಷ್ಟಿಯಿಂದ ಪ್ರತ್ಯೇಕ ಮೀನುಗಾರಿಕಾ ಕೈಗಾರಿಕಾ ವಲಯ ಸ್ಥಾಪನೆ ಮುಂತಾದ ಹಲವು ಬೇಡಿಕೆಗಳನ್ನು ಶೀಘ್ರವಾಗಿ ಕೇಂದ್ರದ ಮೀನುಗಾರಿಕೆ ಸಚಿವಾಲಯದ ಮೂಲಕ ಈಡೇರಿಸುವಂತೆ ಮನವಿ ಮಾಡಲಾಯಿತು.

ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌, ಮೀನುಗಾರ ಮುಖಂಡ ಕಿಶೋರ್‌ ಡಿ. ಸುವರ್ಣ, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್‌, ಆರ್‌ಎಸ್‌ಎಸ್‌ ಪ್ರಮುಖ ಅಶೋಕ್‌ ಮಂಜೇಶ್ವರ, ನಗರಸಭೆ ಸದಸ್ಯರಾದ ವಿಜಯ ಕೊಡವೂರು, ಸುಪ್ರಸಾದ್‌ ಶೆಟ್ಟಿ, ರಾಧಾಕೃಷ್ಣ ಮೆಂಡನ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ