ಆ್ಯಪ್ನಗರ

ಸ್ಪರ್ಧಾತ್ಮಕ ಜಗತ್ತಿಗೆ ತೊರೆದುಕೊಳ್ಳುವಂತೆ ಮಕ್ಕಳ ಭವಿಷ್ಯ ರೂಪಿಸಿ

ಯುವ ಸಮುದಾಯಕ್ಕೆ ಶಿಕ್ಷಣ ನೀಡುವ ಜತೆಗೆ ಸ್ಪರ್ಧಾತ್ಮಕ ಜಗತ್ತಿಗೆ ತಮ್ಮನ್ನು ತೆರೆದುಕೊಳ್ಳುವಂತೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಹಾಗೂ ಹೆತ್ತವರ ಪಾತ್ರ ಮಹತ್ತರವಾಗಿದೆ ಎಂದು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ.

Vijaya Karnataka 18 Jun 2019, 5:00 am
ಉಡುಪಿ: ಯುವ ಸಮುದಾಯಕ್ಕೆ ಶಿಕ್ಷಣ ನೀಡುವ ಜತೆಗೆ ಸ್ಪರ್ಧಾತ್ಮಕ ಜಗತ್ತಿಗೆ ತಮ್ಮನ್ನು ತೆರೆದುಕೊಳ್ಳುವಂತೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಹಾಗೂ ಹೆತ್ತವರ ಪಾತ್ರ ಮಹತ್ತರವಾಗಿದೆ ಎಂದು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ.
Vijaya Karnataka Web pramod


ಸ್ಪಂದನಾ ಸೇವಾ ಸಂಸ್ಥೆ ವತಿಯಿಂದ ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನಡೆದ ಕಲ್ಯಾಣಪುರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ 2019 ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬದಲಾಗಿದ್ದು, ಸ್ಪರ್ಧೆಗಳು ಹೆಚ್ಚುತ್ತಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ ಜತೆಗೆ ಶೇ.40 ಅಂಕ ಪಡೆದರೂ ವಿದ್ಯಾರ್ಥಿ ಕೂಡ ಜೀವನ ಸುಂದರವಾಗಿ ರೂಪಿಸಿಕೊಳ್ಳುತ್ತಿದ್ದರು. ಆದರೆ ಇಂದು ಶೇ. 80, 85 ಅಂಕ ಗಳಿಸಿದರೂ ಸುಂದರ ಜೀವನ ಕಟ್ಟಿಕೊಳ್ಳುವಲ್ಲಿ ವಿಫಲವಾಗಿದ್ದೇವೆ. ಈ ನಿಟ್ಟಿನಲ್ಲಿ ಶಿಕ್ಷಕರು, ಪೋಷಕರು ಮಕ್ಕಳಲ್ಲಿ ಕಲಿಕೆ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲೆ ಪ್ರತಿಯೊಬ್ಬ ಮಹಾನ್‌ ಸಾಧಕರ ಜೀವನಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿರುವ ವಿದ್ಯಾದೇಗುಲ. ಇಂತಹ ವಿದ್ಯಾಸಂಸ್ಥೆಯನ್ನು ನಾವು ಮರೆಯುತ್ತಿದ್ದು, ಅದರ ಪರಿಸ್ಥಿತಿಯ ಅವಲೋಕನಕ್ಕೆ ಮುಂದಾಗದೇ ಇರುವುದು ವಿಷಾಧನೀಯ ಎಂದ ಅವರು ಸರಕಾರ ವಿದ್ಯಾರ್ಥಿಗಳಿಗೆ ಬಟ್ಟೆ, ಪಠ್ಯಪುಸ್ತಕ, ಹಾಲು, ಮೊಟ್ಟೆ ಎಲ್ಲವನ್ನು ನೀಡುತ್ತಿದೆ. ಆದರೆ ನೋಟ್‌ ಪುಸ್ತಕ ಮಾತ್ರ ನೀಡುತ್ತಿಲ್ಲ. ಈ ಬಗ್ಗೆ ಸಿಎಂ ಅವರ ಗಮನಕ್ಕೆ ತರುವ ಕೆಲಸ ಮಾಡುತ್ತೇನೆ ಎಂದರು.

ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಮೆಮೋರಿಯಲ್‌ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ ಮಾತನಾಡಿ, ಚೆನ್ನಾಗಿ ಕಲಿತು ಸಮಾಜದ ಆಸ್ತಿಯಾಗಬೇಕು. ತಂದೆ, ತಾಯಿ, ಗುರು ಹಿರಿಯರ ಮೇಲೆ ಗೌರವ ಇಟ್ಟುಕೊಳ್ಳುವ ಜತೆಗೆ ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಕಾರ್ಯಪ್ರವೃತ್ತರಾಗುವಂತೆ ಸಲಹೆ ನೀಡಿದರು.

ಫ್ರೈಮ್‌ ಟಿವಿ ನಿರ್ದೇಶಕ ರೂಪೇಶ್‌ ಕಲ್ಮಾಡಿ ಅವರಿಗೆ ಯಶೋಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್‌. ಬಸವರಾಜು, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣ, ಉದ್ಯಮಿ ಸುಬ್ಬಣ್ಣ ಪೈ, ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನದ ಟ್ರಸ್ಟಿ ಅನಂತ ಪದ್ಮನಾಭ ಆರ್‌. ಕಿಣಿ, ಜಿ.ಎಸ್‌.ಬಿ. ಸಭಾ ಅಧ್ಯಕ್ಷ ಸಂತೋಷ್‌ ಕಾಮತ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ