ಆ್ಯಪ್ನಗರ

ಮರಳುಗಾರಿಕೆ ನಡೆಸದಂತೆ ಪರವಾನಗಿದಾರರಿಗೆ ಉಡುಪಿ ಶಾಸಕ ರಘುಪತಿ ಭಟ್‌ರಿಂದ ತಡೆ : ಬ್ಲಾಕ್‌ ಕಾಂಗ್ರೆಸ್‌ ಆರೋಪ

ಉಡುಪಿ : ಶಾಸಕರಾಗಿ 6-7ತಿಂಗಳು ಕಳೆದರೂ ಮರಳು ಸಮಸ್ಯೆಯನ್ನು ಪರಿಹರಿಸಲು ರಘುಪತಿ ಭಟ್‌ ಸಂಪೂರ್ಣ ವಿಫಲರಾಗಿದ್ದಾರೆ. ಪರವಾನಗಿ ಪಡೆದವರು ಮರಳು ತೆಗೆದು ವಿತರಿಸದಂತೆ ಉಡುಪಿ ಶಾಸಕರು ತನ್ನ ಚೇಲಾಗಳಿಂದ ತಡೆಯೊಡ್ಡುತ್ತಿದ್ದಾರೆ ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಆರೋಪಿಸಿದೆ.

Vijaya Karnataka 13 Dec 2018, 5:00 am
ಉಡುಪಿ : ಶಾಸಕರಾಗಿ 6-7ತಿಂಗಳು ಕಳೆದರೂ ಮರಳು ಸಮಸ್ಯೆಯನ್ನು ಪರಿಹರಿಸಲು ರಘುಪತಿ ಭಟ್‌ ಸಂಪೂರ್ಣ ವಿಫಲರಾಗಿದ್ದಾರೆ. ಪರವಾನಗಿ ಪಡೆದವರು ಮರಳು ತೆಗೆದು ವಿತರಿಸದಂತೆ ಉಡುಪಿ ಶಾಸಕರು ತನ್ನ ಚೇಲಾಗಳಿಂದ ತಡೆಯೊಡ್ಡುತ್ತಿದ್ದಾರೆ ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಆರೋಪಿಸಿದೆ.
Vijaya Karnataka Web PRAMOD


ಈ ಬಗ್ಗೆ ಬುಧವಾರ ಬ್ರಹ್ಮಗಿರಿ ಕಾಂಗ್ರೆಸ್‌ ಭವನದಲ್ಲಿ ನಡೆದ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲೆಯಲ್ಲಿ ಮರಳು ಅಭಾವದ ಬಗ್ಗೆ ಚರ್ಚಿಸಲಾಯಿತು.

ಜಿಲ್ಲಾಡಳಿತದಿಂದ ಸಿಆರ್‌ಝಡ್‌ ವ್ಯಾಪ್ತಿಯ ಉಡುಪಿ ಮತ್ತು ಬ್ರಹ್ಮಾವರ ತಾಲೂಕುಗಳ 5 ಮರಳು ದಿಬ್ಬ ತೆರವಿಗೆ ಪರವಾನಗಿ ಕೋರಿರುವ 45 ಮಂದಿಯಲ್ಲಿ 11 ಮಂದಿಗೆ ಈಗಾಗಲೇ ಪರವಾನಗಿ ನೀಡಲಾಗಿದೆ. ಪರವಾನಗಿ ಪಡೆದವರು ಮರಳು ತೆಗೆದು ವಿತರಿಸದಂತೆ ಉಡುಪಿ ಶಾಸಕರು ತಡೆಯೊಡ್ಡುತ್ತಿರುವ ಬಗ್ಗೆ ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ತೀವ್ರವಾಗಿ ಖಂಡಿಸಿದೆ.

ಜನ ಮರಳಿಲ್ಲದೆ ಮನೆ ಯಾ ಕಟ್ಟಡ ನಿರ್ಮಿಸಲಾಗದೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮರಳು ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ ಜೀವನ ನಿರ್ವಹಣೆಗೆ ಉದ್ಯೋಗ ಸಿಗುವಂತಾಗಲು ಜಿಲ್ಲಾಧಿಕಾರಿಗಳು ತಕ್ಷ ಣ ಸಿಆರ್‌ಝಡ್‌ ಹಾಗೂ ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ತೆಗೆದು ವಿತರಿಸುವ ಪ್ರಕ್ರಿಯೆ ತಕ್ಷ ಣ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಆಗ್ರಹಿಸಲಾಯಿತು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜನಾರ್ದನ ತೋನ್ಸೆ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ, ಜಿಲ್ಲಾ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ರಾದ ಯತೀಶ್‌ ಕರ್ಕೆರಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾದ ಸತೀಶ್‌ ಅಮೀನ್‌ ಪಡುಕರೆ, ಉಡುಪಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್‌ ಅಧ್ಯಕ್ಷ ರಾದ ಪ್ರಶಾಂತ್‌ ಪೂಜಾರಿ, ಎಸ್‌.ಸಿ. ಘಟಕದ ಅಧ್ಯಕ್ಷ ರಾದ ಗಣೇಶ್‌ ನೆರ್ಗಿ, ಎಸ್‌.ಟಿ. ಘಟಕದ ಅಧ್ಯಕ್ಷ ರಾದ ಅನಂತ್‌ ನಾಯ್ಕ್‌, ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ತಾಲೂಕು ಪಂಚಾಯಿತಿ ಸದಸ್ಯ ಧನಂಜಯ ಕುಂದರ್‌, ಬ್ಲಾಕ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್‌ ದೊಡ್ಡಣಗುಡ್ಡೆ, ಬ್ಲಾಕ್‌ ಇಂಟಕ್‌ ಅಧ್ಯಕ್ಷ ನವೀನ್‌ ಶೆಟ್ಟಿ, ಜಿಲ್ಲಾ ಇಂದಿರಾ ಪ್ರಿಯದರ್ಶಿನಿ ಸಮಿತಿ ಅಧ್ಯಕ್ಷ ಅದಿತಿ ಶೆಟ್ಟಿ, ಬ್ಲಾಕ್‌ ಕಿಸಾನ್‌ ಘಟಕದ ಅಧ್ಯಕ್ಷ ಪೃಥ್ವಿರಾಜ್‌ ಶೆಟ್ಟಿ, ನಗರಸಭೆಯ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಉಪಸ್ಥಿತರಿದ್ದರು.

ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್‌ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ