ಆ್ಯಪ್ನಗರ

ಪ್ರೇಮಿಗಳ ದಿನಕ್ಕೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಮನವಿ: ಮುತಾಲಿಕ್

ಪಾರ್ಕ್, ರಸ್ತೆಗಳಲ್ಲಿ ಯಾವುದೇ ಕುಕೃತ್ಯ, ಅಸಹ್ಯ, ಅಶ್ಲೀಲ, ಅಸಭ್ಯತೆ ಕಂಡರೆ ಪೊಲೀಸರಿಗೆ ಮಾಹಿತಿ ಕೊಡುತ್ತೇವೆ. ಇದು ಕ್ರಿಶ್ಚಿಯನ್‍ರ ಡೇ. ಈ ಸಂಸ್ಕೃತಿ ನಮಗೆ ಅಗತ್ಯವಿಲ್ಲ.

Vijaya Karnataka Web 10 Feb 2019, 4:11 pm
ಉಡುಪಿ: ವ್ಯಾಲೆಂಟೈನ್ಸ್ ಡೇ (ಪ್ರೇಮಿಗಳ ದಿನಾಚರಣೆ)ಯಂದು ಪೊಲೀಸರೊಂದಿಗೆ ಕೈ ಜೋಡಿಸ್ತೇವೆ ಹೊರತು ನಾವೇ ಕಾನೂನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಶ್ರೀ ರಾಮ ಸೇನೆಯ ಪ್ರಮೋದ್ ಮುತಾಲಿಕ್ ತಿಳಿಸಿದರು.
Vijaya Karnataka Web Pramod 2


ಪಾರ್ಕ್, ರಸ್ತೆಗಳಲ್ಲಿ ಯಾವುದೇ ಕುಕೃತ್ಯ, ಅಸಹ್ಯ, ಅಶ್ಲೀಲ, ಅಸಭ್ಯತೆ ಕಂಡರೆ ಪೊಲೀಸರಿಗೆ ಮಾಹಿತಿ ಕೊಡುತ್ತೇವೆ. ಇದು ಕ್ರಿಶ್ಚಿಯನ್‍ರ ಡೇ. ಈ ಸಂಸ್ಕೃತಿ ನಮಗೆ ಅಗತ್ಯವಿಲ್ಲ. ವ್ಯಾಲೆಂಡೈನ್ಸ್ ಡೇಗೆ ಅವಕಾಶ ನೀಡದಂತೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ. ಪ್ರೇಮಿಗಳ ದಿನದ ಬಗ್ಗೆ ದುರ್ಗಾಸೇನೆ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ನೂರಕ್ಕೆ ನೂರು ಒಳ್ಳೇ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಇನ್ನೂ ಸುಧಾರಣೆಯಾಗಿಲ್ಲ. ಹೊಲಸು ರಾಜಕಾರಣದಲ್ಲಿ ಪ್ರಾಮಾಣಿಕತೆ, ಹಿಂದುತ್ವಕ್ಕೆ ಜನಬೆಂಬಲವಿಲ್ಲ. ಗೂಂಡಾಗಿರಿ ಮತ್ತು ದುಡ್ಡು ಇಲ್ಲಿ ಪ್ರಮುಖ ಮಾನದಂಡವಾಗಿದೆ. ಇದನ್ನೆಲ್ಲ ಕಂಡು ನಾನು (ಶ್ರೀರಾಮ ಸೇನೆ ಮುತಾಲಿಕ್) ರಾಜಕೀಯದಿಂದ ದೂರ ಸರಿದಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಯಿಲ್ಲ. ಯಾರಿಗೆ ಬೆಂಬಲ ಅನ್ನೋದು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ