ಆ್ಯಪ್ನಗರ

ಮತ್ತೆ ಮೋದಿ ಪ್ರಧಾನಿಯಾಗಲೆಂದು ಪ್ರಾರ್ಥಿಸಿ: ಪರ್ಯಾಯ ಯತಿಗಳಲ್ಲಿ ರಕ್ಷಣಾ ಸಚಿವೆಯ ಮನವಿ

ಉಡುಪಿ ಜತೆ ನನಗೆ ಬಾಲ್ಯದಿಂದಲೇ ನಂಟು ಇದೆ. ಕೊಲ್ಲೂರು, ಶ್ರೀಕೃಷ್ಣಮಠದ ಜತೆ ನಿರಂತರ ಸಂಪರ್ಕವಿದೆ. ಮಠದಲ್ಲಿ ಜೂನ್ ನಲ್ಲು ನಡೆವ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪಲಿಮಾರು ಶ್ರೀಗಳಿಗೆ ಸಷಿಚೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

Vijaya Karnataka Web 26 Mar 2019, 11:26 am
ಉಡುಪಿ: ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದರೊಂದಿಗೆ ದೇಶ ಸುರಕ್ಷಿತರ ಕೈಯ್ಯಲ್ಲಿರುವಂತೆ ಶ್ರೀಕೃಷ್ಣನಲ್ಲಿ‌ ಪರ್ಯಾಯ ಯತಿಗಳು ಪ್ರಾರ್ಥನೆ ಸಲ್ಲಿಸುವಂತೆ ಕೇಂದ್ರ ರಕ್ಷಣಾ‌‌ ಸಚೆವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿದ್ದಾರೆ.
Vijaya Karnataka Web nirmala sitharaman


ಅವರು ಮಂಗಳವಾರ. ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿ, ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರಕಾರ ರಚನೆಯಾಗುವಂತೆ ಆಶೀರ್ವದಿಸಿ ಎಂದರು.

ಉಡುಪಿ ಜತೆ ನನಗೆ ಬಾಲ್ಯದಿಂದಲೇ ನಂಟು ಇದೆ. ಕೊಲ್ಲೂರು, ಶ್ರೀಕೃಷ್ಣಮಠದ ಜತೆ ನಿರಂತರ ಸಂಪರ್ಕವಿದೆ. ಮಠದಲ್ಲಿ ಜೂನ್ ನಲ್ಲು ನಡೆವ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪಲಿಮಾರು ಶ್ರೀಗಳಿಗೆ ಸಷಿಚೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಉಡುಪಿಗೆ ಕಳುಹಿಸಿಕೊಡಿ. ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಶ್ರೀಕೃಷ್ಣಮಠದಲ್ಲಿ ಅಭಿನಂದನ್‌ಗೆ ಗೌರವಾರ್ಪಣೆ ಮಾಡಬೇಕು ಎಂದು ಪರ್ಯಾಯ ಪಲಿಮಾರುಶ್ರೀಗಳು ಮನವಿ ಮಾಡಿದರು.

ಇಲಾಖೆ ಮೂಲಕ ಅವರು ಉಡುಪಿಗೆ ಬರಲು ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದರು.‌

ಬಿ.ಜೆ.ಪಿ ಮುಖಂಡರಾದ ಕೆ. ಉದಯ ಕುಮಾರ್ ಶೆಟ್ಟಿ,ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಪ್ರದೀಪ್ ರಾವ್, ವಿಜಯ್ ಭಟ್, ಭಾರತಿ ಶೆಟ್ಟಿ, ಸುವರ್ಧನ್ ನಾಯಕ್, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ