ಆ್ಯಪ್ನಗರ

ಅಖಿಲ ಭಾರತ ಮೀನುಗಾರರ ವೇದಿಕೆ ನಿಯೋಗದಿಂದ ಪ್ರಧಾನಿ ಭೇಟಿ

ಅಖಿಲ ಭಾರತ ಮೀನುಗಾರ ವೇದಿಕೆಯ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ತಡರಾತ್ರಿ ಭೇಟಿಯಾಗಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್‌ ಹಾಗೂ 7 ಮೀನುಗಾರರನ್ನು ಶೀಘ್ರ ಪತ್ತೆ ಹಚ್ಚಲು ವಿಶೇಷ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

Vijaya Karnataka 10 Jan 2019, 5:00 am
ಉಡುಪಿ : ಅಖಿಲ ಭಾರತ ಮೀನುಗಾರ ವೇದಿಕೆಯ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ತಡರಾತ್ರಿ ಭೇಟಿಯಾಗಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್‌ ಹಾಗೂ 7 ಮೀನುಗಾರರನ್ನು ಶೀಘ್ರ ಪತ್ತೆ ಹಚ್ಚಲು ವಿಶೇಷ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.
Vijaya Karnataka Web 09aa Fish


ಮೀನುಗಾರಿಕೆಗೆ ಸಂಬಂಧಿಸಿದಂತೆ ನಾನಾ ಬೇಡಿಕೆಗಳಾದ ಮೀನುಗಾರಿಕೆ ಬಳಸುವ ಡೀಸೆಲ್‌ ಮೇಲಿನ ರೋಡ್‌ ಸೆಸ್‌ ವಿನಾಯಿತಿ, ಮೀನುಗಾರಿಕೆಗೆ ಸಂಬಂಧಪಟ್ಟ ಚಟುವಟಿಕೆಗಳಿಗೆ ಜಿಎಸ್‌ಟಿ ವಿನಾಯಿತಿ, ಮೀನುಗಾರಿಕೆಗೆ ಕೇಂದ್ರ ಸರಕಾರದ ಪ್ರತ್ಯೇಕ ಸಚಿವಾಲಯ, 60 ವರ್ಷ ಮೇಲ್ಪಟ್ಟ ಮೀನುಗಾರರಿಗೆ ಪಿಂಚಣಿ ಸೌಲಭ್ಯ, ಮೀನುಗಾರಿಕೆಗೆ ಬಳಸುವ ಸೀಮೆ ಎಣ್ಣೆ ಪ್ರಮಾಣದಲ್ಲಿ ಹೆಚ್ಚಳ, ಪ್ರತ್ಯೇಕ ಮೀನುಗಾರಿಕಾ ಕೈಗಾರಿಕಾ ವಲಯ ಹಾಗೂ ಮೀನುಗಾರಿಕೆಯ ಅಭಿವೃದ್ಧಿಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಮನವಿಯಲ್ಲಿ ವಿನಂತಿಸಲಾಯಿತು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಧಾನಿ ಮೀನುಗಾರರ ಪತ್ತೆಗೆ ಸಕಲ ರೀತಿಯಲ್ಲಿ ಸಹಕರಿಸಿ ಮೀನುಗಾರರು ಸುರಕ್ಷಿತವಾಗಿ ಮರಳಿ ಬರಲು ಸರ್ವ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭ ನಿಯೋಗದ ನೇತೃತ್ವ ವಹಿಸಿದ ಅಖಿಲ ಭಾರತ ಮೀನುಗಾರ ವೇದಿಕೆ ಅಧ್ಯಕ್ಷ ವೆಲ್ಜಿ ಭಾಯಿ ಮಸಾನಿ, ಗುಜರಾತ್‌ ಸಂಸದ ರಾಜೇಶ್‌ ಭಾಯಿ ಚುಡಾಸಮ, ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್‌, ಕಿಶೋರ್‌ ಸುವರ್ಣ, ಅನಿಲ್‌, ನಿತಿನ್‌ ಕುಮಾರ್‌, ಮನೋಹರ್‌ ಬೋಳೂರು, ಸಂಸದರಾದ ನಳಿನ್‌ ಕುಮಾರ್‌ ಕಟೀಲ್‌, ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ